ನಗರದ ಸಮಗ್ರ ಅಭಿವೃದ್ಧಿ ಬಿಜೆಪಿ ಗುರಿ – ಎಸ್.ಅಂಗಾರ

May 13, 2019
9:15 PM

ಸುಳ್ಯ: ಸುಳ್ಯ ನಗರದ ಸಮಗ್ರ ಅಭಿವೃದ್ಧಿ ಬಿಜೆಪಿಯ ಗುರಿ. ನಗರದ ಅಭಿವೃದ್ಧಿ ಯ ದೃಷ್ಠಿಯಿಂದ ಚುನಾವಣಾ ಪ್ರಣಾಳಿಕೆಯನ್ನು ತಯಾರಿಸಲಾಗುವುದು ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ.

Advertisement
Advertisement

ಸುಳ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ ಸರಕಾರಕ್ಕೆ 65 ಕೋಟಿಯ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಸರಕಾರ ಅನುದಾನ ಬಿಡುಗಡೆ ಮಾಡಿಲ್ಲ. ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರಕಾರದಿಂದ ಅನುದಾನ ತರಿಸಲಾಗುವುದು ಎಂದರು. ಇತ್ತೀಚಿನ ವರ್ಷಗಳಲ್ಲಿ ಸರಕಾರದಿಂದ ಅನುದಾನ ಬಾರದ ಕಾರಣ ನಗರದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಆರೋಪಿಸಿದರು.

ಒಳಚರಂಡಿ ಯೋಜನೆ ಪೂರ್ತಿಯಾಗಲು ಇನ್ನೂ ಎರಡು ಕೋಟಿ ರೂಗಳ ಅಗತ್ಯವಿದೆ. ಅನುದಾನ ತರಿಸಿ ಅದನ್ನು ಪೂರ್ತಿ ಮಾಡಲಾಗುವುದು. ನಗರದ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸ್ಥಳ ಗುರುತಿಸಲಾಗಿದೆ. ಅದು ಎಲ್ಲಿ ಎಂಬುದನ್ನು ಚುನಾವಣೆಯ ಬಳಿಕ ಘೋಷಣೆ ಮಾಡಲಾಗುವುದು ಎಂದರು. ದುಗಲಡ್ಕ -ಕೊಡಿಯಾಲಬೈಲ್ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ರಸ್ತೆಗಳನ್ನು 1.70 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗಿದೆ. 12 ವಾರ್ಡ್ ಗಳಲ್ಲಿ ವಿಶೇಷ ಅನುದಾನ ತರಿಸಿ ಅಭಿವೃದ್ಧಿ ನಡೆಸಲಾಗಿದೆ ಎಂದು ಅವರು ಹೇಳಿದರು.

20 ವಾರ್ಡ್ ಗೆಲ್ಲುವ ಗುರಿ- ವೆಂಕಟ್ ವಳಲಂಬೆ

ಸುಳ್ಯ ನಗರ ಪಂಚಾಯತ್ ನ ಎಲ್ಲಾ 20 ವಾರ್ಡ ಗಳಲ್ಲಿಯೂ ಗೆಲ್ಲುವುದು ಬಿಜೆಪಿಯ ಗುರಿ. ಅದಕ್ಕಾಗಿ ಎಲ್ಲಾ ತಂತ್ರಗಳನ್ನೂ ರೂಪಿಸಲಾಗಿದೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ.
ಮೆ.21ರಂದು ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಜಿಲ್ಲೆಯ ಏಳು ಮಂದಿ ಬಿಜೆಪಿ ಶಾಸಕರು ನಗರ ಪಂಚಾಯತ್ ನ ವಿವಿಧ ವಾರ್ಡ್ ಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಳಾದ ಪ್ರಕಾಶ್ ಹೆಗ್ಡೆ, ಸುಬೋದ್ ಶೆಟ್ಟಿ ಮೇನಾಲ, ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ಪ್ರಮುಖರಾದ ಎನ್.ಎ.ರಾಮಚಂದ್ರ, ಸುರೇಶ್ ಕಣೆಮರಡ್ಕ, ಪಿ.ಕೆ.ಉಮೇಶ, ಹರೀಶ್ ಬೂಡುಪನ್ನೆ, ಸೋಮನಾಥ ಪೂಜಾರಿ, ಉಪಸ್ಥಿತರಿದ್ದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೂನ್‌ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೆಲ್ಲಾ ನಿಮ್ಮದೇ..!
May 31, 2025
6:33 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್
May 31, 2025
12:05 AM
by: The Rural Mirror ಸುದ್ದಿಜಾಲ
ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ
May 30, 2025
11:52 PM
by: The Rural Mirror ಸುದ್ದಿಜಾಲ
ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ
May 30, 2025
11:14 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group