Advertisement
ಸುದ್ದಿಗಳು

ನಗರದ ಸಮಗ್ರ ಅಭಿವೃದ್ಧಿ ಬಿಜೆಪಿ ಗುರಿ – ಎಸ್.ಅಂಗಾರ

Share

ಸುಳ್ಯ: ಸುಳ್ಯ ನಗರದ ಸಮಗ್ರ ಅಭಿವೃದ್ಧಿ ಬಿಜೆಪಿಯ ಗುರಿ. ನಗರದ ಅಭಿವೃದ್ಧಿ ಯ ದೃಷ್ಠಿಯಿಂದ ಚುನಾವಣಾ ಪ್ರಣಾಳಿಕೆಯನ್ನು ತಯಾರಿಸಲಾಗುವುದು ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ.

ಸುಳ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ ಸರಕಾರಕ್ಕೆ 65 ಕೋಟಿಯ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಸರಕಾರ ಅನುದಾನ ಬಿಡುಗಡೆ ಮಾಡಿಲ್ಲ. ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರಕಾರದಿಂದ ಅನುದಾನ ತರಿಸಲಾಗುವುದು ಎಂದರು. ಇತ್ತೀಚಿನ ವರ್ಷಗಳಲ್ಲಿ ಸರಕಾರದಿಂದ ಅನುದಾನ ಬಾರದ ಕಾರಣ ನಗರದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಆರೋಪಿಸಿದರು.

ಒಳಚರಂಡಿ ಯೋಜನೆ ಪೂರ್ತಿಯಾಗಲು ಇನ್ನೂ ಎರಡು ಕೋಟಿ ರೂಗಳ ಅಗತ್ಯವಿದೆ. ಅನುದಾನ ತರಿಸಿ ಅದನ್ನು ಪೂರ್ತಿ ಮಾಡಲಾಗುವುದು. ನಗರದ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸ್ಥಳ ಗುರುತಿಸಲಾಗಿದೆ. ಅದು ಎಲ್ಲಿ ಎಂಬುದನ್ನು ಚುನಾವಣೆಯ ಬಳಿಕ ಘೋಷಣೆ ಮಾಡಲಾಗುವುದು ಎಂದರು. ದುಗಲಡ್ಕ -ಕೊಡಿಯಾಲಬೈಲ್ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ರಸ್ತೆಗಳನ್ನು 1.70 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗಿದೆ. 12 ವಾರ್ಡ್ ಗಳಲ್ಲಿ ವಿಶೇಷ ಅನುದಾನ ತರಿಸಿ ಅಭಿವೃದ್ಧಿ ನಡೆಸಲಾಗಿದೆ ಎಂದು ಅವರು ಹೇಳಿದರು.

20 ವಾರ್ಡ್ ಗೆಲ್ಲುವ ಗುರಿ- ವೆಂಕಟ್ ವಳಲಂಬೆ

ಸುಳ್ಯ ನಗರ ಪಂಚಾಯತ್ ನ ಎಲ್ಲಾ 20 ವಾರ್ಡ ಗಳಲ್ಲಿಯೂ ಗೆಲ್ಲುವುದು ಬಿಜೆಪಿಯ ಗುರಿ. ಅದಕ್ಕಾಗಿ ಎಲ್ಲಾ ತಂತ್ರಗಳನ್ನೂ ರೂಪಿಸಲಾಗಿದೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ.
ಮೆ.21ರಂದು ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಜಿಲ್ಲೆಯ ಏಳು ಮಂದಿ ಬಿಜೆಪಿ ಶಾಸಕರು ನಗರ ಪಂಚಾಯತ್ ನ ವಿವಿಧ ವಾರ್ಡ್ ಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಳಾದ ಪ್ರಕಾಶ್ ಹೆಗ್ಡೆ, ಸುಬೋದ್ ಶೆಟ್ಟಿ ಮೇನಾಲ, ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ಪ್ರಮುಖರಾದ ಎನ್.ಎ.ರಾಮಚಂದ್ರ, ಸುರೇಶ್ ಕಣೆಮರಡ್ಕ, ಪಿ.ಕೆ.ಉಮೇಶ, ಹರೀಶ್ ಬೂಡುಪನ್ನೆ, ಸೋಮನಾಥ ಪೂಜಾರಿ, ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

3 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

4 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

6 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

6 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

17 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 day ago