ಸುಳ್ಯ: ಸುಳ್ಯ ನಗರದ ಸಮಗ್ರ ಅಭಿವೃದ್ಧಿ ಬಿಜೆಪಿಯ ಗುರಿ. ನಗರದ ಅಭಿವೃದ್ಧಿ ಯ ದೃಷ್ಠಿಯಿಂದ ಚುನಾವಣಾ ಪ್ರಣಾಳಿಕೆಯನ್ನು ತಯಾರಿಸಲಾಗುವುದು ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ.
ಸುಳ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ ಸರಕಾರಕ್ಕೆ 65 ಕೋಟಿಯ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಸರಕಾರ ಅನುದಾನ ಬಿಡುಗಡೆ ಮಾಡಿಲ್ಲ. ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರಕಾರದಿಂದ ಅನುದಾನ ತರಿಸಲಾಗುವುದು ಎಂದರು. ಇತ್ತೀಚಿನ ವರ್ಷಗಳಲ್ಲಿ ಸರಕಾರದಿಂದ ಅನುದಾನ ಬಾರದ ಕಾರಣ ನಗರದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಆರೋಪಿಸಿದರು.
ಒಳಚರಂಡಿ ಯೋಜನೆ ಪೂರ್ತಿಯಾಗಲು ಇನ್ನೂ ಎರಡು ಕೋಟಿ ರೂಗಳ ಅಗತ್ಯವಿದೆ. ಅನುದಾನ ತರಿಸಿ ಅದನ್ನು ಪೂರ್ತಿ ಮಾಡಲಾಗುವುದು. ನಗರದ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸ್ಥಳ ಗುರುತಿಸಲಾಗಿದೆ. ಅದು ಎಲ್ಲಿ ಎಂಬುದನ್ನು ಚುನಾವಣೆಯ ಬಳಿಕ ಘೋಷಣೆ ಮಾಡಲಾಗುವುದು ಎಂದರು. ದುಗಲಡ್ಕ -ಕೊಡಿಯಾಲಬೈಲ್ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ರಸ್ತೆಗಳನ್ನು 1.70 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗಿದೆ. 12 ವಾರ್ಡ್ ಗಳಲ್ಲಿ ವಿಶೇಷ ಅನುದಾನ ತರಿಸಿ ಅಭಿವೃದ್ಧಿ ನಡೆಸಲಾಗಿದೆ ಎಂದು ಅವರು ಹೇಳಿದರು.
20 ವಾರ್ಡ್ ಗೆಲ್ಲುವ ಗುರಿ- ವೆಂಕಟ್ ವಳಲಂಬೆ
ಸುಳ್ಯ ನಗರ ಪಂಚಾಯತ್ ನ ಎಲ್ಲಾ 20 ವಾರ್ಡ ಗಳಲ್ಲಿಯೂ ಗೆಲ್ಲುವುದು ಬಿಜೆಪಿಯ ಗುರಿ. ಅದಕ್ಕಾಗಿ ಎಲ್ಲಾ ತಂತ್ರಗಳನ್ನೂ ರೂಪಿಸಲಾಗಿದೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ.
ಮೆ.21ರಂದು ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಜಿಲ್ಲೆಯ ಏಳು ಮಂದಿ ಬಿಜೆಪಿ ಶಾಸಕರು ನಗರ ಪಂಚಾಯತ್ ನ ವಿವಿಧ ವಾರ್ಡ್ ಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಳಾದ ಪ್ರಕಾಶ್ ಹೆಗ್ಡೆ, ಸುಬೋದ್ ಶೆಟ್ಟಿ ಮೇನಾಲ, ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ಪ್ರಮುಖರಾದ ಎನ್.ಎ.ರಾಮಚಂದ್ರ, ಸುರೇಶ್ ಕಣೆಮರಡ್ಕ, ಪಿ.ಕೆ.ಉಮೇಶ, ಹರೀಶ್ ಬೂಡುಪನ್ನೆ, ಸೋಮನಾಥ ಪೂಜಾರಿ, ಉಪಸ್ಥಿತರಿದ್ದರು.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…