Advertisement
ಸುದ್ದಿಗಳು

ನಗರದ ಸಮಗ್ರ ಅಭಿವೃದ್ಧಿ ಬಿಜೆಪಿ ಗುರಿ – ಎಸ್.ಅಂಗಾರ

Share

ಸುಳ್ಯ: ಸುಳ್ಯ ನಗರದ ಸಮಗ್ರ ಅಭಿವೃದ್ಧಿ ಬಿಜೆಪಿಯ ಗುರಿ. ನಗರದ ಅಭಿವೃದ್ಧಿ ಯ ದೃಷ್ಠಿಯಿಂದ ಚುನಾವಣಾ ಪ್ರಣಾಳಿಕೆಯನ್ನು ತಯಾರಿಸಲಾಗುವುದು ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ.

ಸುಳ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ ಸರಕಾರಕ್ಕೆ 65 ಕೋಟಿಯ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಸರಕಾರ ಅನುದಾನ ಬಿಡುಗಡೆ ಮಾಡಿಲ್ಲ. ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರಕಾರದಿಂದ ಅನುದಾನ ತರಿಸಲಾಗುವುದು ಎಂದರು. ಇತ್ತೀಚಿನ ವರ್ಷಗಳಲ್ಲಿ ಸರಕಾರದಿಂದ ಅನುದಾನ ಬಾರದ ಕಾರಣ ನಗರದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಆರೋಪಿಸಿದರು.

ಒಳಚರಂಡಿ ಯೋಜನೆ ಪೂರ್ತಿಯಾಗಲು ಇನ್ನೂ ಎರಡು ಕೋಟಿ ರೂಗಳ ಅಗತ್ಯವಿದೆ. ಅನುದಾನ ತರಿಸಿ ಅದನ್ನು ಪೂರ್ತಿ ಮಾಡಲಾಗುವುದು. ನಗರದ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸ್ಥಳ ಗುರುತಿಸಲಾಗಿದೆ. ಅದು ಎಲ್ಲಿ ಎಂಬುದನ್ನು ಚುನಾವಣೆಯ ಬಳಿಕ ಘೋಷಣೆ ಮಾಡಲಾಗುವುದು ಎಂದರು. ದುಗಲಡ್ಕ -ಕೊಡಿಯಾಲಬೈಲ್ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ರಸ್ತೆಗಳನ್ನು 1.70 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗಿದೆ. 12 ವಾರ್ಡ್ ಗಳಲ್ಲಿ ವಿಶೇಷ ಅನುದಾನ ತರಿಸಿ ಅಭಿವೃದ್ಧಿ ನಡೆಸಲಾಗಿದೆ ಎಂದು ಅವರು ಹೇಳಿದರು.

20 ವಾರ್ಡ್ ಗೆಲ್ಲುವ ಗುರಿ- ವೆಂಕಟ್ ವಳಲಂಬೆ

ಸುಳ್ಯ ನಗರ ಪಂಚಾಯತ್ ನ ಎಲ್ಲಾ 20 ವಾರ್ಡ ಗಳಲ್ಲಿಯೂ ಗೆಲ್ಲುವುದು ಬಿಜೆಪಿಯ ಗುರಿ. ಅದಕ್ಕಾಗಿ ಎಲ್ಲಾ ತಂತ್ರಗಳನ್ನೂ ರೂಪಿಸಲಾಗಿದೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ.
ಮೆ.21ರಂದು ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಜಿಲ್ಲೆಯ ಏಳು ಮಂದಿ ಬಿಜೆಪಿ ಶಾಸಕರು ನಗರ ಪಂಚಾಯತ್ ನ ವಿವಿಧ ವಾರ್ಡ್ ಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಳಾದ ಪ್ರಕಾಶ್ ಹೆಗ್ಡೆ, ಸುಬೋದ್ ಶೆಟ್ಟಿ ಮೇನಾಲ, ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ಪ್ರಮುಖರಾದ ಎನ್.ಎ.ರಾಮಚಂದ್ರ, ಸುರೇಶ್ ಕಣೆಮರಡ್ಕ, ಪಿ.ಕೆ.ಉಮೇಶ, ಹರೀಶ್ ಬೂಡುಪನ್ನೆ, ಸೋಮನಾಥ ಪೂಜಾರಿ, ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

13 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

15 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

15 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

18 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago