Advertisement
ಸುದ್ದಿಗಳು

ನಗರದ ಸಮಗ್ರ ಅಭಿವೃದ್ಧಿ ಬಿಜೆಪಿ ಗುರಿ – ಎಸ್.ಅಂಗಾರ

Share

ಸುಳ್ಯ: ಸುಳ್ಯ ನಗರದ ಸಮಗ್ರ ಅಭಿವೃದ್ಧಿ ಬಿಜೆಪಿಯ ಗುರಿ. ನಗರದ ಅಭಿವೃದ್ಧಿ ಯ ದೃಷ್ಠಿಯಿಂದ ಚುನಾವಣಾ ಪ್ರಣಾಳಿಕೆಯನ್ನು ತಯಾರಿಸಲಾಗುವುದು ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ.

ಸುಳ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ ಸರಕಾರಕ್ಕೆ 65 ಕೋಟಿಯ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಸರಕಾರ ಅನುದಾನ ಬಿಡುಗಡೆ ಮಾಡಿಲ್ಲ. ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರಕಾರದಿಂದ ಅನುದಾನ ತರಿಸಲಾಗುವುದು ಎಂದರು. ಇತ್ತೀಚಿನ ವರ್ಷಗಳಲ್ಲಿ ಸರಕಾರದಿಂದ ಅನುದಾನ ಬಾರದ ಕಾರಣ ನಗರದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಆರೋಪಿಸಿದರು.

ಒಳಚರಂಡಿ ಯೋಜನೆ ಪೂರ್ತಿಯಾಗಲು ಇನ್ನೂ ಎರಡು ಕೋಟಿ ರೂಗಳ ಅಗತ್ಯವಿದೆ. ಅನುದಾನ ತರಿಸಿ ಅದನ್ನು ಪೂರ್ತಿ ಮಾಡಲಾಗುವುದು. ನಗರದ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸ್ಥಳ ಗುರುತಿಸಲಾಗಿದೆ. ಅದು ಎಲ್ಲಿ ಎಂಬುದನ್ನು ಚುನಾವಣೆಯ ಬಳಿಕ ಘೋಷಣೆ ಮಾಡಲಾಗುವುದು ಎಂದರು. ದುಗಲಡ್ಕ -ಕೊಡಿಯಾಲಬೈಲ್ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ರಸ್ತೆಗಳನ್ನು 1.70 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗಿದೆ. 12 ವಾರ್ಡ್ ಗಳಲ್ಲಿ ವಿಶೇಷ ಅನುದಾನ ತರಿಸಿ ಅಭಿವೃದ್ಧಿ ನಡೆಸಲಾಗಿದೆ ಎಂದು ಅವರು ಹೇಳಿದರು.

20 ವಾರ್ಡ್ ಗೆಲ್ಲುವ ಗುರಿ- ವೆಂಕಟ್ ವಳಲಂಬೆ

ಸುಳ್ಯ ನಗರ ಪಂಚಾಯತ್ ನ ಎಲ್ಲಾ 20 ವಾರ್ಡ ಗಳಲ್ಲಿಯೂ ಗೆಲ್ಲುವುದು ಬಿಜೆಪಿಯ ಗುರಿ. ಅದಕ್ಕಾಗಿ ಎಲ್ಲಾ ತಂತ್ರಗಳನ್ನೂ ರೂಪಿಸಲಾಗಿದೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ.
ಮೆ.21ರಂದು ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಜಿಲ್ಲೆಯ ಏಳು ಮಂದಿ ಬಿಜೆಪಿ ಶಾಸಕರು ನಗರ ಪಂಚಾಯತ್ ನ ವಿವಿಧ ವಾರ್ಡ್ ಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಳಾದ ಪ್ರಕಾಶ್ ಹೆಗ್ಡೆ, ಸುಬೋದ್ ಶೆಟ್ಟಿ ಮೇನಾಲ, ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ಪ್ರಮುಖರಾದ ಎನ್.ಎ.ರಾಮಚಂದ್ರ, ಸುರೇಶ್ ಕಣೆಮರಡ್ಕ, ಪಿ.ಕೆ.ಉಮೇಶ, ಹರೀಶ್ ಬೂಡುಪನ್ನೆ, ಸೋಮನಾಥ ಪೂಜಾರಿ, ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago