ನಗರಪಂಚಾಯತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ- 7 ಕಡೆ ಬಗೆಹರಿಯದ ಬಿಕ್ಕಟ್ಟು

May 13, 2019
10:15 AM

ಸುಳ್ಯ: ಮ್ಯಾರಥಾನ್ ಚರ್ಚೆಗಳ ಬಳಿಕವೂ ನಗರ ಪಂಚಾಯತ್ ನ 7 ವಾರ್ಡ್ ಗಳ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಬಿಕ್ಕಟ್ಟು ಬಗೆ ಹರಿದಿಲ್ಲ.

ಮಾಜಿ ಸಚಿವ ಬಿ.ರಮಾನಾಥ ರೈ, ಲೋಕಸಭಾ ಅಭ್ಯರ್ಥಿ ಮಿಥುನ್ ರೈ ಉಪಸ್ಥಿತಿಯಲ್ಲಿ ಕಾಂಗ್ರೆಸ್ ನಾಯಕರು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಸ್ಪರ್ಧಾ ಆಕಾಂಕ್ಷಿಗಳ ಮಧ್ಯೆ ಭಾನುವಾರ ರಾತ್ರಿಯೂ ಚರ್ಚೆ ನಡೆದರೂ ಪಟ್ಟಿ ಅಂತಿಮಗೊಂಡಿಲ್ಲ.

Advertisement

ನಗರ ಪಂಚಾಯತ್ ಚುನಾವಣೆಗೆ 13 ವಾರ್ಡ್ ಗಳ ಅಭ್ಯರ್ಥಿಗಳ ಘೋಷಣೆ ಈಗಾಗಲೇ ಮಾಡಲಾಗಿದೆ. 20 ವಾರ್ಡ್ ಗಳ ಪೈಕಿ ಏಳು ವಾರ್ಡ್ ಗಳ ಆಯ್ಕೆ ಕಗ್ಗಂಟಾಗಿದೆ. ವಾರ್ಡ್ ಸಂಖ್ಯೆ 3(ಜಯನಗರ),4(ಶಾಂತಿನಗರ), 6(ಬೀರಮಂಗಲ),12(ಕೆರೆಮೂಲೆ), 13(ಬೂಡು), 15(ಗಾಂಧಿನಗರ-ನಾವೂರು), 17(ಬೋರುಗುಡ್ಡೆ) ವಾರ್ಡ್ ಗಳಲ್ಲಿ ಅಭ್ಯರ್ಥಿ ಘೋಷಣೆ ಬಾಕಿ ಉಳಿದಿದೆ. ಇಲ್ಲಿ ಆಕಾಂಕ್ಷಿಗಳ ಪಟ್ಟಿ ಉದ್ದ ಇರುವ ಕಾರಣ ಅಭ್ಯರ್ಥಿ ಆಯ್ಕೆ ನೇತೃತ್ವಕ್ಕೆ ಕಗ್ಗಂಟಾಗಿದೆ.

ಬೋರುಗುಡ್ಡೆ, ನಾವೂರು ಎರಡು ವಾರ್ಡ್ ಗಳಿಗೆ ಮೂರು ಹೆಸರು ಅಂತಿಮಗೊಳಿಸಲಾಗಿದೆ. ಕೆ.ಎಂ.ಮುಸ್ತಫಾ, ಆರ್.ಕೆ.ಮಹಮ್ಮದ್, ಶರೀಫ್ ಕಂಠಿ ಹೆಸರು ಅಂತಿಮ ಪಟ್ಟಿಯಲ್ಲಿದೆ ಎಂದು ತಿಳಿದು ಬಂದಿದೆ.
ಕೆರೆಮೂಲೆ ವಾರ್ಡ್ ನಲ್ಲಿ ಎಂ.ವೆಂಕಪ್ಪ ಗೌಡ, ದಿನೇಶ್ ಅಂಬೆಕಲ್ಲು ಹೆಸರು ಅಂತಿಮ ಪಟ್ಟಿಯಲ್ಲಿದೆ. ಬೂಡು ವಾರ್ಡ್ ನಲ್ಲಿ ಕೆ.ಗೋಕುಲ್ ದಾಸ್, ರಿಯಾಝ್ ಕಟ್ಟೆಕ್ಕಾರ್, ಲಕ್ಷ್ಮಣ ಶೆಣೈ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ. ಉಳಿದ ಮೂರು ವಾರ್ಡ್ ಗಳಲ್ಲಿಯೂ ಅಭ್ಯರ್ಥಿ ಆಯ್ಕೆಯ ಬಗ್ಗೆ ಚರ್ಚೆ ನಡೆದರೂ ಅಂತಿಮ ಘೋಷಣೆ ಕಾಯ್ದಿರಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ…!
June 21, 2026
12:20 PM
by: ದ ರೂರಲ್ ಮಿರರ್.ಕಾಂ
Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ
June 17, 2026
8:21 PM
by: ದ ರೂರಲ್ ಮಿರರ್.ಕಾಂ
‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ
June 5, 2026
3:46 PM
by: ಮಿರರ್‌ ಡೆಸ್ಕ್
ಹೊಸ ಪಕ್ಷ ಸ್ಥಾಪನೆ ಊಹಾಪೋಹ – ‘ಇನ್ನೆರಡು ದಿನಗಳಲ್ಲಿ ಸ್ಪಷ್ಟನೆ ಕೊಡುತ್ತೇನೆ’ ಎಂದ ಅಣ್ಣಾಮಲೈ
June 1, 2026
8:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror