Advertisement
Political mirror

ನಗರಪಂಚಾಯತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ- 7 ಕಡೆ ಬಗೆಹರಿಯದ ಬಿಕ್ಕಟ್ಟು

Share

ಸುಳ್ಯ: ಮ್ಯಾರಥಾನ್ ಚರ್ಚೆಗಳ ಬಳಿಕವೂ ನಗರ ಪಂಚಾಯತ್ ನ 7 ವಾರ್ಡ್ ಗಳ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಬಿಕ್ಕಟ್ಟು ಬಗೆ ಹರಿದಿಲ್ಲ.

ಮಾಜಿ ಸಚಿವ ಬಿ.ರಮಾನಾಥ ರೈ, ಲೋಕಸಭಾ ಅಭ್ಯರ್ಥಿ ಮಿಥುನ್ ರೈ ಉಪಸ್ಥಿತಿಯಲ್ಲಿ ಕಾಂಗ್ರೆಸ್ ನಾಯಕರು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಸ್ಪರ್ಧಾ ಆಕಾಂಕ್ಷಿಗಳ ಮಧ್ಯೆ ಭಾನುವಾರ ರಾತ್ರಿಯೂ ಚರ್ಚೆ ನಡೆದರೂ ಪಟ್ಟಿ ಅಂತಿಮಗೊಂಡಿಲ್ಲ.

ನಗರ ಪಂಚಾಯತ್ ಚುನಾವಣೆಗೆ 13 ವಾರ್ಡ್ ಗಳ ಅಭ್ಯರ್ಥಿಗಳ ಘೋಷಣೆ ಈಗಾಗಲೇ ಮಾಡಲಾಗಿದೆ. 20 ವಾರ್ಡ್ ಗಳ ಪೈಕಿ ಏಳು ವಾರ್ಡ್ ಗಳ ಆಯ್ಕೆ ಕಗ್ಗಂಟಾಗಿದೆ. ವಾರ್ಡ್ ಸಂಖ್ಯೆ 3(ಜಯನಗರ),4(ಶಾಂತಿನಗರ), 6(ಬೀರಮಂಗಲ),12(ಕೆರೆಮೂಲೆ), 13(ಬೂಡು), 15(ಗಾಂಧಿನಗರ-ನಾವೂರು), 17(ಬೋರುಗುಡ್ಡೆ) ವಾರ್ಡ್ ಗಳಲ್ಲಿ ಅಭ್ಯರ್ಥಿ ಘೋಷಣೆ ಬಾಕಿ ಉಳಿದಿದೆ. ಇಲ್ಲಿ ಆಕಾಂಕ್ಷಿಗಳ ಪಟ್ಟಿ ಉದ್ದ ಇರುವ ಕಾರಣ ಅಭ್ಯರ್ಥಿ ಆಯ್ಕೆ ನೇತೃತ್ವಕ್ಕೆ ಕಗ್ಗಂಟಾಗಿದೆ.

ಬೋರುಗುಡ್ಡೆ, ನಾವೂರು ಎರಡು ವಾರ್ಡ್ ಗಳಿಗೆ ಮೂರು ಹೆಸರು ಅಂತಿಮಗೊಳಿಸಲಾಗಿದೆ. ಕೆ.ಎಂ.ಮುಸ್ತಫಾ, ಆರ್.ಕೆ.ಮಹಮ್ಮದ್, ಶರೀಫ್ ಕಂಠಿ ಹೆಸರು ಅಂತಿಮ ಪಟ್ಟಿಯಲ್ಲಿದೆ ಎಂದು ತಿಳಿದು ಬಂದಿದೆ.
ಕೆರೆಮೂಲೆ ವಾರ್ಡ್ ನಲ್ಲಿ ಎಂ.ವೆಂಕಪ್ಪ ಗೌಡ, ದಿನೇಶ್ ಅಂಬೆಕಲ್ಲು ಹೆಸರು ಅಂತಿಮ ಪಟ್ಟಿಯಲ್ಲಿದೆ. ಬೂಡು ವಾರ್ಡ್ ನಲ್ಲಿ ಕೆ.ಗೋಕುಲ್ ದಾಸ್, ರಿಯಾಝ್ ಕಟ್ಟೆಕ್ಕಾರ್, ಲಕ್ಷ್ಮಣ ಶೆಣೈ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ. ಉಳಿದ ಮೂರು ವಾರ್ಡ್ ಗಳಲ್ಲಿಯೂ ಅಭ್ಯರ್ಥಿ ಆಯ್ಕೆಯ ಬಗ್ಗೆ ಚರ್ಚೆ ನಡೆದರೂ ಅಂತಿಮ ಘೋಷಣೆ ಕಾಯ್ದಿರಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

5 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

13 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

20 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago