ಸುಳ್ಯ: ಮ್ಯಾರಥಾನ್ ಚರ್ಚೆಗಳ ಬಳಿಕವೂ ನಗರ ಪಂಚಾಯತ್ ನ 7 ವಾರ್ಡ್ ಗಳ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಬಿಕ್ಕಟ್ಟು ಬಗೆ ಹರಿದಿಲ್ಲ.
ಮಾಜಿ ಸಚಿವ ಬಿ.ರಮಾನಾಥ ರೈ, ಲೋಕಸಭಾ ಅಭ್ಯರ್ಥಿ ಮಿಥುನ್ ರೈ ಉಪಸ್ಥಿತಿಯಲ್ಲಿ ಕಾಂಗ್ರೆಸ್ ನಾಯಕರು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಸ್ಪರ್ಧಾ ಆಕಾಂಕ್ಷಿಗಳ ಮಧ್ಯೆ ಭಾನುವಾರ ರಾತ್ರಿಯೂ ಚರ್ಚೆ ನಡೆದರೂ ಪಟ್ಟಿ ಅಂತಿಮಗೊಂಡಿಲ್ಲ.
ನಗರ ಪಂಚಾಯತ್ ಚುನಾವಣೆಗೆ 13 ವಾರ್ಡ್ ಗಳ ಅಭ್ಯರ್ಥಿಗಳ ಘೋಷಣೆ ಈಗಾಗಲೇ ಮಾಡಲಾಗಿದೆ. 20 ವಾರ್ಡ್ ಗಳ ಪೈಕಿ ಏಳು ವಾರ್ಡ್ ಗಳ ಆಯ್ಕೆ ಕಗ್ಗಂಟಾಗಿದೆ. ವಾರ್ಡ್ ಸಂಖ್ಯೆ 3(ಜಯನಗರ),4(ಶಾಂತಿನಗರ), 6(ಬೀರಮಂಗಲ),12(ಕೆರೆಮೂಲೆ), 13(ಬೂಡು), 15(ಗಾಂಧಿನಗರ-ನಾವೂರು), 17(ಬೋರುಗುಡ್ಡೆ) ವಾರ್ಡ್ ಗಳಲ್ಲಿ ಅಭ್ಯರ್ಥಿ ಘೋಷಣೆ ಬಾಕಿ ಉಳಿದಿದೆ. ಇಲ್ಲಿ ಆಕಾಂಕ್ಷಿಗಳ ಪಟ್ಟಿ ಉದ್ದ ಇರುವ ಕಾರಣ ಅಭ್ಯರ್ಥಿ ಆಯ್ಕೆ ನೇತೃತ್ವಕ್ಕೆ ಕಗ್ಗಂಟಾಗಿದೆ.
ಬೋರುಗುಡ್ಡೆ, ನಾವೂರು ಎರಡು ವಾರ್ಡ್ ಗಳಿಗೆ ಮೂರು ಹೆಸರು ಅಂತಿಮಗೊಳಿಸಲಾಗಿದೆ. ಕೆ.ಎಂ.ಮುಸ್ತಫಾ, ಆರ್.ಕೆ.ಮಹಮ್ಮದ್, ಶರೀಫ್ ಕಂಠಿ ಹೆಸರು ಅಂತಿಮ ಪಟ್ಟಿಯಲ್ಲಿದೆ ಎಂದು ತಿಳಿದು ಬಂದಿದೆ.
ಕೆರೆಮೂಲೆ ವಾರ್ಡ್ ನಲ್ಲಿ ಎಂ.ವೆಂಕಪ್ಪ ಗೌಡ, ದಿನೇಶ್ ಅಂಬೆಕಲ್ಲು ಹೆಸರು ಅಂತಿಮ ಪಟ್ಟಿಯಲ್ಲಿದೆ. ಬೂಡು ವಾರ್ಡ್ ನಲ್ಲಿ ಕೆ.ಗೋಕುಲ್ ದಾಸ್, ರಿಯಾಝ್ ಕಟ್ಟೆಕ್ಕಾರ್, ಲಕ್ಷ್ಮಣ ಶೆಣೈ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ. ಉಳಿದ ಮೂರು ವಾರ್ಡ್ ಗಳಲ್ಲಿಯೂ ಅಭ್ಯರ್ಥಿ ಆಯ್ಕೆಯ ಬಗ್ಗೆ ಚರ್ಚೆ ನಡೆದರೂ ಅಂತಿಮ ಘೋಷಣೆ ಕಾಯ್ದಿರಿಸಲಾಗಿದೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…