ನಗರ ಪಂಚಾಯತ್ ಆಡಳಿತ ಹಿಡಿಯಲು ಕಾಂಗ್ರೆಸ್ ನಿಂದಲೂ ಪ್ರಯತ್ನ- ವೆಂಕಪ್ಪ ಗೌಡ

August 1, 2019
9:55 PM

ಸುಳ್ಯ: ಇಂದು ರಾಜಕೀಯದಲ್ಲಿ ನೈತಿಕತೆ ಎಂಬುದು ಇಲ್ಲ. ಯಾವ ರೀತಿಯಲ್ಲಿ ಬೇಕಾದರೂ ಅಧಿಕಾರ ಹಿಡಿಯುವುದಸ್ಟೇ ರಾಜಕೀಯ. ರಾಜ್ಯದಲ್ಲಿ ಅಂತಹಾ ಬೆಳವಣಿಗೆ ಕಂಡು ಬಂದಿದೆ. ಆ ಹಿನ್ನಲೆಯಲ್ಲಿ ಮುಂದೆ ಸುಳ್ಯ ನಗರ ಪಂಚಾಯತ್ ನಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನವನ್ನು ಪಡೆದು ಅಧಿಕಾರದ ಗದ್ದುಗೆ ಏರಲು ಕಾಂಗ್ರೆಸ್ ಕೂಡ ಎಲ್ಲಾ ಪ್ರಯತ್ನವನ್ನೂ ಮಾಡಲಿದೆ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಹಾಗೂ ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ ಹೇಳಿದ್ದಾರೆ.

ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚುನಾವಣೆ ಮುಗಿದು ಎರಡು ತಿಂಗಳಾದರೂ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ನಡೆದಿಲ್ಲ. ಸದಸ್ಯರಿಗೆ ಅಧಿಕಾರವೂ ಸಿಕ್ಕಿಲ್ಲ. ಇದರಿಂದ ಜನರಿಗೆ ತೀವ್ರ ತೊಂದರೆ ಉಂಟಾಗುತಿದೆ. ವಾರ್ಡ್ ಗಳಲ್ಲಿ ಹಲವು ಸಮಸ್ಯೆಯಿಂದಾಗಿ ಸಾರ್ವಜನಿಕರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಆದುದರಿಂದ ಸರಕಾರ ಕೂಡಲೇ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ನಡೆಸಿ ನಗರ ಪಂಚಾಯತ್ ಆಡಳಿತವನ್ನು ಜಾರಿ ಮಾಡಬೇಕು ಎಂದು ಒತ್ತಾಯಿಸಿದರು. ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ಸಂದರ್ಭದಲ್ಲಿ ಕಾಂಗ್ರೆಸ್ ಕೂಡ ಎಲ್ಲಾ ಪ್ರಯತ್ನ ನಡೆಸಲಿದೆ. ಈಗಾಗಲೇ ಆರು ಸದಸ್ಯರ ಬೆಂಬಲ ಇದೆ, ಇನ್ನು ಐದು ಸದಸ್ಯರ ಬೆಂಬಲ ಪಡೆಯಲು ಸಾಧ್ಯವಾದರೆ ಕಾಂಗ್ರೆಸ್ ಅಧ್ಯಕ್ಷ-ಉಪಾಧ್ಯಕ್ಷರು ಆಯ್ಕೆಯಾಗಲಿದೆ. ಅದಕ್ಕಾಗಿ ಎಲ್ಲಾ ಪ್ರಯತ್ನ ನಡೆಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಧರ್ಮಪಾಲ ಕೊಯಿಂಗಾಜೆ, ನಂದರಾಜ ಸಂಕೇಶ, ಲಕ್ಷ್ಮಣ ಶೆಣೈ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror