ಸುಳ್ಯ: ಇಂದು ರಾಜಕೀಯದಲ್ಲಿ ನೈತಿಕತೆ ಎಂಬುದು ಇಲ್ಲ. ಯಾವ ರೀತಿಯಲ್ಲಿ ಬೇಕಾದರೂ ಅಧಿಕಾರ ಹಿಡಿಯುವುದಸ್ಟೇ ರಾಜಕೀಯ. ರಾಜ್ಯದಲ್ಲಿ ಅಂತಹಾ ಬೆಳವಣಿಗೆ ಕಂಡು ಬಂದಿದೆ. ಆ ಹಿನ್ನಲೆಯಲ್ಲಿ ಮುಂದೆ ಸುಳ್ಯ ನಗರ ಪಂಚಾಯತ್ ನಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನವನ್ನು ಪಡೆದು ಅಧಿಕಾರದ ಗದ್ದುಗೆ ಏರಲು ಕಾಂಗ್ರೆಸ್ ಕೂಡ ಎಲ್ಲಾ ಪ್ರಯತ್ನವನ್ನೂ ಮಾಡಲಿದೆ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಹಾಗೂ ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚುನಾವಣೆ ಮುಗಿದು ಎರಡು ತಿಂಗಳಾದರೂ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ನಡೆದಿಲ್ಲ. ಸದಸ್ಯರಿಗೆ ಅಧಿಕಾರವೂ ಸಿಕ್ಕಿಲ್ಲ. ಇದರಿಂದ ಜನರಿಗೆ ತೀವ್ರ ತೊಂದರೆ ಉಂಟಾಗುತಿದೆ. ವಾರ್ಡ್ ಗಳಲ್ಲಿ ಹಲವು ಸಮಸ್ಯೆಯಿಂದಾಗಿ ಸಾರ್ವಜನಿಕರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಆದುದರಿಂದ ಸರಕಾರ ಕೂಡಲೇ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ನಡೆಸಿ ನಗರ ಪಂಚಾಯತ್ ಆಡಳಿತವನ್ನು ಜಾರಿ ಮಾಡಬೇಕು ಎಂದು ಒತ್ತಾಯಿಸಿದರು. ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ಸಂದರ್ಭದಲ್ಲಿ ಕಾಂಗ್ರೆಸ್ ಕೂಡ ಎಲ್ಲಾ ಪ್ರಯತ್ನ ನಡೆಸಲಿದೆ. ಈಗಾಗಲೇ ಆರು ಸದಸ್ಯರ ಬೆಂಬಲ ಇದೆ, ಇನ್ನು ಐದು ಸದಸ್ಯರ ಬೆಂಬಲ ಪಡೆಯಲು ಸಾಧ್ಯವಾದರೆ ಕಾಂಗ್ರೆಸ್ ಅಧ್ಯಕ್ಷ-ಉಪಾಧ್ಯಕ್ಷರು ಆಯ್ಕೆಯಾಗಲಿದೆ. ಅದಕ್ಕಾಗಿ ಎಲ್ಲಾ ಪ್ರಯತ್ನ ನಡೆಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಧರ್ಮಪಾಲ ಕೊಯಿಂಗಾಜೆ, ನಂದರಾಜ ಸಂಕೇಶ, ಲಕ್ಷ್ಮಣ ಶೆಣೈ ಉಪಸ್ಥಿತರಿದ್ದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…