Advertisement
Political mirror

ನಗರ ಪಂಚಾಯತ್ ಚುನಾವಣೆ : ಎಸ್‍ಡಿಪಿಐ ಏಕೈಕ ಸದಸ್ಯ ಈ ಬಾರಿ ಪಕ್ಷೇತರ ಸ್ಪರ್ಧೆ..?

Share

ಸುಳ್ಯ: ಕಳೆದ ಬಾರಿ ಚುನಾವಣೆಯಲ್ಲಿ ಗೆಲ್ಲುವ ಮೂಲಕ ನಗರ ಪಂಚಾಯತ್‍ನಲ್ಲಿ ಎಸ್‍ಡಿಪಿಐಗೆ ಖಾತೆ ತೆರೆದಿದ್ದ ಕೆ.ಎಸ್.ಉಮ್ಮರ್ ಈ ಬಾರಿ ಪಕ್ಷೇತರನಾಗಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಮಾಹಿತಿ ದೊರೆತಿದೆ.

ನಗರ ಪಂಚಾಯತ್ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಸುಳ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಪಕ್ಷಗಳ ಅಭ್ಯರ್ಥಿಗಳಾಗಲು ಪೈಪೋಟಿ ಆರಂಭಗೊಂಡಿದೆ. ಕಳೆದ ಬಾರಿ 14ನೇ ವಾರ್ಡ್‍ನಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿ ನಗರ ಪಂಚಾಯತ್‍ಗೆ ಆಯ್ಕೆಯಾಗಿದ್ದ ಉಮ್ಮರ್ ತಮ್ಮ ಕಠಿಣ ನಿಲುವುಗಳ ಮೂಲಕ ಗಮನ ಸೆಳೆದಿದ್ದರು. ಈ ಬಾರಿಯೂ ನಗರ ಪಂಚಾಯತ್ ಚುನಾವಣೆಯಲ್ಲಿ ಎಸ್‍ಡಿಪಿಐ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಈ ಕುರಿತು ಅಂತಿಮ ನಿರ್ಧಾರ ಮತ್ತು ಅಭ್ಯರ್ಥಿಗಳ ಘೋಷಣೆ ಇನ್ನಷ್ಟೇ ನಡೆಯಬೇಕಿದೆ. ಆದರೆ ಈ ಬಾರಿ ಪಕ್ಷೇತರನಾಗಿ ಕಣಕ್ಕಿಳಿಯುವ ಇಂಗಿತವನ್ನು ಕೆ.ಎಸ್.ಉಮ್ಮರ್ ವ್ಯಕ್ತಪಡಿಸಿರುವುದು ಮಾತ್ರ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಕಳೆದ ಬಾರಿ ಸ್ಪರ್ಧಿಸಿದ್ದ ವಾರ್ಡ್‍ನಲ್ಲಿ ಮೀಸಲಾತಿ ಬದಲಾದ ಕಾರಣ ಸ್ಪರ್ಧಿಸಲು ಸಾಧ್ಯವಾಗುತ್ತಿಲ್ಲ. ಆದುದರಿಂದ ಈ ಬಾರಿ ಬೋರುಗುಡ್ಡೆ ವಾರ್ಡ್‍ನಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಎಲ್ಲರ ಬೆಂಬಲ ಕೇಳುವ ಚಿಂತನೆಯನ್ನು ಕೆ.ಎಸ್.ಉಮ್ಮರ್ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

“ಈ ಬಾರಿಯೂ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಪಕ್ಷೇತರನಾಗಿ ಸ್ಪರ್ಧಿಸುವ ಯೋಚನೆ ನಡೆಸಿದ್ದೇನೆ ಈ ಕುರಿತು ಅಂತಿಮ ನಿರ್ಧಾರ ಕೆಲವೇ ದಿನದಲ್ಲಿ ಪ್ರಕಟಿಸುವುದಾಗಿ” ಕೆ.ಎಸ್.ಉಮ್ಮರ್ “ಸುಳ್ಯ ನ್ಯೂಸ್.ಕಾಂ” ಗೆ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

5 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

10 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 days ago