ಸುದ್ದಿಗಳು

ನಗರ ಪಂಚಾಯತ್ ಚುನಾವಣೆ : ಕೆಲವು ವಾರ್ಡ್‍ಗಳಲ್ಲಿ ಆಕಾಂಕ್ಷಿಗಳ ಪಟ್ಟಿ ಮಾರುದ್ಧ : ಕಾಂಗ್ರೆಸ್ ನೇತೃತ್ವಕ್ಕೆ ಆಯ್ಕೆ ಸಂಕಟ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

* ಸ್ಪೆಷಲ್ ಕರೆಸ್ಪಾಂಡೆಂಟ್ , ಸುಳ್ಯನ್ಯೂಸ್.ಕಂ

Advertisement

ಸುಳ್ಯ: ನಗರ ಪಂಚಾಯತ್ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಸುಳ್ಯದಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿದ್ದು ಪಕ್ಷಗಳು ಸಮರ್ಥ ಅಭ್ಯರ್ಥಿಗಳ ಆಯ್ಕೆಯ ಕಸರತ್ತು ಆರಂಭಿಸಿದೆ.

ಸುಳ್ಯ ಕಾಂಗ್ರೆಸ್ ಪಕ್ಷ ಒಂದು ಹಂತದ ಸಭೆ ನಡೆಸಿ ನಗರ ಪಂಚಾಯತ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ. ಆದರೆ ಕೆಲವು ವಾರ್ಡ್‍ಗಳಲ್ಲಿ ಆಕಾಂಕ್ಷಿಗಳ ಪಟ್ಟಿ ಉದ್ದ ಇರುವುದು ಪಕ್ಷದ ನೇತೃತ್ವದಕ್ಕೆ ತಲೆ ನೋವು ಉಂಟು ಮಾಡಿದೆ. ಹಲವು ಮಂದಿ ಸ್ಥಳೀಯ ನಾಯಕರು ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಕೆಲವು ವಾರ್ಡ್‍ಗಳಲ್ಲಿ ಮೂರಕ್ಕೂ ಹೆಚ್ಚು ಮಂದಿ ಆಕಾಂಕ್ಷಿಗಳಿದ್ದು ಅಭ್ಯರ್ಥಿಗಳ ಅಂತಿಮ ಪಟ್ಟಿ ತಯಾರಿಸಲು ತೀವ್ರ ಕಸರತ್ತು ನಡೆಸಬೇಕಾಗಿ ಬಂದಿದೆ ಎನ್ನಲಾಗುತಿದೆ. ಒಬ್ಬರೇ ಆಕಾಂಕ್ಷಿಗಳಿರುವಲ್ಲಿ, ಮೀಸಲು ಇರುವ ಕೆಲವು ವಾರ್ಡ್‍ಗಳಲ್ಲಿ ಈಗಾಗಲೇ ಅಭ್ಯರ್ಥಿಗಳನ್ನು ಅಂತಿಮ ಗೊಳಿಸಲಾಗಿದೆ. ನಾವೂರು, ಬೋರುಗುಡ್ಡೆ, ಬೀರಮಂಗಲ, ಕೆರೆಮೂಲೆ, ಬೂಡು ವಾರ್ಡ್‍ಗಳಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚು ಮಂದಿ ಆಕಾಂಕ್ಷಿಗಳಿದ್ದಾರೆ. ಇದರಿಂದ ಯಾವುದೇ ಗೊಂದಲಕ್ಕೆ ಎಡೆ ಮಾಡದೆ ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಪಕ್ಷದ ನೇತೃತ್ವದ ಮುಂದೆ ಇದೆ. ನಗರ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಂ.ವೆಂಕಪ್ಪ ಗೌಡ, ಎಸ್.ಸಂಶುದ್ದೀನ್, ಮಾಜಿ ಸದಸ್ಯರಾದ ಕೆ.ಎಂ.ಮುಸ್ತಫಾ, ಕೆ.ಗೋಕುಲ್‍ದಾಸ್, ದಿನೇಶ್ ಅಂಬೆಕಲ್ಲು ಈ ಬಾರಿಯೂ ಸಂಭಾವ್ಯರ ಪಟ್ಟಿಯಲ್ಲಿದ್ದಾರೆ. ಅಲ್ಲದೆ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್, ಆರ್.ಕೆ.ಮಹಮ್ಮದ್, ಲಕ್ಷ್ಮಣ್ ಶೆಣೈ, ಶರೀಫ್ ಕಂಠಿ, ಭವಾನಿಶಂಕರ ಕಲ್ಮಡ್ಕ, ರಿಯಾಝ್ ಕಟ್ಟೆಕ್ಕಾರ್, ಧೀರಾ ಕ್ರಾಸ್ತಾ ಹೀಗೆ ಹಲವು ಮಂದಿ ಪ್ರಮುಖರ ಹೆಸರು ಆಕಾಂಕ್ಷಿತರ ಪಟ್ಟಿಯಲ್ಲಿದೆ. ಇವರಲ್ಲಿ ಯಾರು ಅಂತಿಮ ಪಟ್ಟಿಯಲ್ಲಿ ಇರುತ್ತಾರೆ ಎಂಬುದು ಕಾದು ನೋಡಬೇಕಾಗಿದೆ.

ಕಳೆದ ಮೂರು ಬಾರಿಯೂ ನಷ್ಟವಾದ ಅಧಿಕಾರವನ್ನು ಈ ಬಾರಿಯಾದರೂ ಮರಳಿ ಪಡೆಯಬೇಕು ಎಂಬ ಸಂಕಲ್ಪದಲ್ಲಿ ಕಾರ್ಯ ಪ್ರವೃತ್ತರಾಗಿರುವ ಕಾಂಗ್ರೆಸ್ ಸಮರ್ಥ ಅಭ್ಯರ್ಥಿಗಳ ತಂಡವನ್ನು ಕಣಕ್ಕಿಳಿಸಬೇಕಾಗಿ ಬಂದಿದೆ. ಆದುದರಿಂದ ಪಕ್ಷವು ಕಣಕ್ಕಿಳಿಸುವ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಶ್ರಮಿಸಬೇಕೆಂಬ ಸ್ಪಷ್ಟ ಸಂದೇಶವನ್ನು ಸ್ಥಳೀಯ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ನೀಡಿದೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

4 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

6 hours ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

7 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

13 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

19 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

19 hours ago