Categories: Uncategorized

ನಗರ ಪಂಚಾಯತ್ ಚುನಾವಣೆ : ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ಕ್ರ‌ಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಸಂಬಂಧಿಸಿ ಚುನಾವಣಾ ನೀತಿ ಸಂಹಿತೆ ಮೆ.31 ರವರೆಗೆ ಜಾರಿಯಲ್ಲಿದ್ದು ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ಕಟ್ಟು ನಿಟ್ಟಿನ ಕ್ರ‌ಮ ಕೈಗೊಳ್ಳಲಾಗುವುದು ಎಂದು ಸುಳ್ಯ ನಗರ ಪಂಚಾಯತ್ ಚುನಾವಣಾಧಿಕಾರಿಗಳಾದ ದೇವರಾಜ್ ಮುತ್ಲಾಜೆ ಮತ್ತು ಎನ್.ಮಂಜುನಾಥ್ ತಿಳಿಸಿದ್ದಾರೆ.

Advertisement
Advertisement

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೇ.29ರಂದು ಚುನಾವಣೆ ಮತ್ತು 31ರಂದು ಮತ ಎಣಿಕೆ ನಡೆಯಲಿದೆ. ಪ್ರತಿ ಅಭ್ಯರ್ಥಿಗೆ ಖರ್ಚಿನ ಮಿತಿ ಒಂದು ಲಕ್ಷ ರೂ ಮಿತಿಗೊಳಿಸಲಾಗಿದೆ. ಪ್ರತಿ ದಿನ ಖರ್ಚಿನ ವಿವರಗಳನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು. ಸಾರ್ವಜನಿಕ ಕಾರ್ಯಕ್ರಮಗಳಿಗೆ, ಅಭ್ಯರ್ಥಿಯ ಭಾವಚಿತ್ತ, ಬ್ಯಾನರ್ ಅಳವಡಿಕೆಗೆ ಖಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು ಎಂದು ವಿವರಿಸಿದರು. ಇತರ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ರಾಜಕೀಯ ಚಟುವಟಿಕೆಗೆ, ಚುನಾವಣಾ ಪ್ರಚಾರಕ್ಕೆ ಅವಕಾಶ ಇಲ್ಲ ಎಂದರು.

ಮತದಾನ ಬೆಳಗ್ಗೆ  7 ರಿಂದ ಸಂಜೆ 5 :

ನಗರ ಪಂಚಾಯತ್ ಚುನಾವಣೆಗೆ ಇವಿಎಂ ಬಳಕೆ ಮಾಡಲಾಗುವುದು. ಆದರೆ ವಿವಿ ಪ್ಯಾಟ್ ಬಳಕೆ ಮಾಡುವುದಿಲ್ಲ. ಬೆಳಿಗ್ಗೆ ಏಳರಿಂದ ಸಂಜೆ ಐದರ ವರೆಗೆ ಚುನಾವಣೆ ನಡೆಯಲಿದೆ. 20 ವಾರ್ಡ್ ಗಳಲ್ಲಿ 20 ಮತಗಟ್ಟೆ ಗಳನ್ನು ಸಿದ್ಧಪಡಿಸಲಾಗಿದೆ. 27 ಇವಿಎಂಗಳನ್ನು ಸಿದ್ಧಪಡಿಸಲಾಗಿದೆ. ಮತಯಂತ್ರದಲ್ಲಿ ಅಭ್ಯರ್ಥಿಯ ಹೆಸರು, ಭಾವಚಿತ್ರ ಮತ್ತು ಚಿಹ್ನೆ ಇರಲಿದೆ. ನೋಟಾ ಕೂಡ ಇರಲಿದೆ ಎಂದರು.

ನಾಮಪತ್ರ-16 ಕೊನೆ ದಿನ :

Advertisement

ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೆ.16 ಕೊನೆಯ ದಿನವಾಗಿದೆ. ಮೊದಲ ಎರಡು ದಿನ ಯಾವುದೇ ನಾಮಪತ್ತ ಸಲ್ಲಿಕೆಯಾಗಿಲ್ಲ. 87 ಮಂದಿ ಅರ್ಜಿಗಳನ್ನು ಪಡೆದಿದ್ದಾರೆ. ಮೆ.17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮೆ.20 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಎಂದು ಅವರು ವಿವರಿಸಿದರು. ನೀತಿ ಸಂಹಿತೆ ಸಂಬಂಧಿಸಿ ಯಾವುದೇ ದೂರು ಬಂದಿಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ಸಹಾಯಕ ಚುನಾವಣಾಧಿಕಾರಿ ರವಿಚಂದ್ರ, ಸೆಕ್ಟರ್ ಅಧಿಕಾರಿ ಸತೀಶ್ ಕೊಯಿಂಗಾಜೆ ಉಪಸ್ಥಿತರಿದ್ದರು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

9 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

13 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

21 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

21 hours ago