Advertisement
Categories: Uncategorized

ನಗರ ಪಂಚಾಯತ್ ಚುನಾವಣೆ : ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ಕ್ರ‌ಮ

Share

ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಸಂಬಂಧಿಸಿ ಚುನಾವಣಾ ನೀತಿ ಸಂಹಿತೆ ಮೆ.31 ರವರೆಗೆ ಜಾರಿಯಲ್ಲಿದ್ದು ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ಕಟ್ಟು ನಿಟ್ಟಿನ ಕ್ರ‌ಮ ಕೈಗೊಳ್ಳಲಾಗುವುದು ಎಂದು ಸುಳ್ಯ ನಗರ ಪಂಚಾಯತ್ ಚುನಾವಣಾಧಿಕಾರಿಗಳಾದ ದೇವರಾಜ್ ಮುತ್ಲಾಜೆ ಮತ್ತು ಎನ್.ಮಂಜುನಾಥ್ ತಿಳಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೇ.29ರಂದು ಚುನಾವಣೆ ಮತ್ತು 31ರಂದು ಮತ ಎಣಿಕೆ ನಡೆಯಲಿದೆ. ಪ್ರತಿ ಅಭ್ಯರ್ಥಿಗೆ ಖರ್ಚಿನ ಮಿತಿ ಒಂದು ಲಕ್ಷ ರೂ ಮಿತಿಗೊಳಿಸಲಾಗಿದೆ. ಪ್ರತಿ ದಿನ ಖರ್ಚಿನ ವಿವರಗಳನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು. ಸಾರ್ವಜನಿಕ ಕಾರ್ಯಕ್ರಮಗಳಿಗೆ, ಅಭ್ಯರ್ಥಿಯ ಭಾವಚಿತ್ತ, ಬ್ಯಾನರ್ ಅಳವಡಿಕೆಗೆ ಖಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು ಎಂದು ವಿವರಿಸಿದರು. ಇತರ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ರಾಜಕೀಯ ಚಟುವಟಿಕೆಗೆ, ಚುನಾವಣಾ ಪ್ರಚಾರಕ್ಕೆ ಅವಕಾಶ ಇಲ್ಲ ಎಂದರು.

ಮತದಾನ ಬೆಳಗ್ಗೆ  7 ರಿಂದ ಸಂಜೆ 5 :

ನಗರ ಪಂಚಾಯತ್ ಚುನಾವಣೆಗೆ ಇವಿಎಂ ಬಳಕೆ ಮಾಡಲಾಗುವುದು. ಆದರೆ ವಿವಿ ಪ್ಯಾಟ್ ಬಳಕೆ ಮಾಡುವುದಿಲ್ಲ. ಬೆಳಿಗ್ಗೆ ಏಳರಿಂದ ಸಂಜೆ ಐದರ ವರೆಗೆ ಚುನಾವಣೆ ನಡೆಯಲಿದೆ. 20 ವಾರ್ಡ್ ಗಳಲ್ಲಿ 20 ಮತಗಟ್ಟೆ ಗಳನ್ನು ಸಿದ್ಧಪಡಿಸಲಾಗಿದೆ. 27 ಇವಿಎಂಗಳನ್ನು ಸಿದ್ಧಪಡಿಸಲಾಗಿದೆ. ಮತಯಂತ್ರದಲ್ಲಿ ಅಭ್ಯರ್ಥಿಯ ಹೆಸರು, ಭಾವಚಿತ್ರ ಮತ್ತು ಚಿಹ್ನೆ ಇರಲಿದೆ. ನೋಟಾ ಕೂಡ ಇರಲಿದೆ ಎಂದರು.

ನಾಮಪತ್ರ-16 ಕೊನೆ ದಿನ :

ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೆ.16 ಕೊನೆಯ ದಿನವಾಗಿದೆ. ಮೊದಲ ಎರಡು ದಿನ ಯಾವುದೇ ನಾಮಪತ್ತ ಸಲ್ಲಿಕೆಯಾಗಿಲ್ಲ. 87 ಮಂದಿ ಅರ್ಜಿಗಳನ್ನು ಪಡೆದಿದ್ದಾರೆ. ಮೆ.17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮೆ.20 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಎಂದು ಅವರು ವಿವರಿಸಿದರು. ನೀತಿ ಸಂಹಿತೆ ಸಂಬಂಧಿಸಿ ಯಾವುದೇ ದೂರು ಬಂದಿಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ಸಹಾಯಕ ಚುನಾವಣಾಧಿಕಾರಿ ರವಿಚಂದ್ರ, ಸೆಕ್ಟರ್ ಅಧಿಕಾರಿ ಸತೀಶ್ ಕೊಯಿಂಗಾಜೆ ಉಪಸ್ಥಿತರಿದ್ದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

10 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

15 hours ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

16 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

20 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

24 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

2 days ago