Advertisement
Categories: Uncategorized

ನಗರ ಪಂಚಾಯತ್ ಚುನಾವಣೆ : ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ಕ್ರ‌ಮ

Share

ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಸಂಬಂಧಿಸಿ ಚುನಾವಣಾ ನೀತಿ ಸಂಹಿತೆ ಮೆ.31 ರವರೆಗೆ ಜಾರಿಯಲ್ಲಿದ್ದು ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ಕಟ್ಟು ನಿಟ್ಟಿನ ಕ್ರ‌ಮ ಕೈಗೊಳ್ಳಲಾಗುವುದು ಎಂದು ಸುಳ್ಯ ನಗರ ಪಂಚಾಯತ್ ಚುನಾವಣಾಧಿಕಾರಿಗಳಾದ ದೇವರಾಜ್ ಮುತ್ಲಾಜೆ ಮತ್ತು ಎನ್.ಮಂಜುನಾಥ್ ತಿಳಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೇ.29ರಂದು ಚುನಾವಣೆ ಮತ್ತು 31ರಂದು ಮತ ಎಣಿಕೆ ನಡೆಯಲಿದೆ. ಪ್ರತಿ ಅಭ್ಯರ್ಥಿಗೆ ಖರ್ಚಿನ ಮಿತಿ ಒಂದು ಲಕ್ಷ ರೂ ಮಿತಿಗೊಳಿಸಲಾಗಿದೆ. ಪ್ರತಿ ದಿನ ಖರ್ಚಿನ ವಿವರಗಳನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು. ಸಾರ್ವಜನಿಕ ಕಾರ್ಯಕ್ರಮಗಳಿಗೆ, ಅಭ್ಯರ್ಥಿಯ ಭಾವಚಿತ್ತ, ಬ್ಯಾನರ್ ಅಳವಡಿಕೆಗೆ ಖಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು ಎಂದು ವಿವರಿಸಿದರು. ಇತರ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ರಾಜಕೀಯ ಚಟುವಟಿಕೆಗೆ, ಚುನಾವಣಾ ಪ್ರಚಾರಕ್ಕೆ ಅವಕಾಶ ಇಲ್ಲ ಎಂದರು.

ಮತದಾನ ಬೆಳಗ್ಗೆ  7 ರಿಂದ ಸಂಜೆ 5 :

ನಗರ ಪಂಚಾಯತ್ ಚುನಾವಣೆಗೆ ಇವಿಎಂ ಬಳಕೆ ಮಾಡಲಾಗುವುದು. ಆದರೆ ವಿವಿ ಪ್ಯಾಟ್ ಬಳಕೆ ಮಾಡುವುದಿಲ್ಲ. ಬೆಳಿಗ್ಗೆ ಏಳರಿಂದ ಸಂಜೆ ಐದರ ವರೆಗೆ ಚುನಾವಣೆ ನಡೆಯಲಿದೆ. 20 ವಾರ್ಡ್ ಗಳಲ್ಲಿ 20 ಮತಗಟ್ಟೆ ಗಳನ್ನು ಸಿದ್ಧಪಡಿಸಲಾಗಿದೆ. 27 ಇವಿಎಂಗಳನ್ನು ಸಿದ್ಧಪಡಿಸಲಾಗಿದೆ. ಮತಯಂತ್ರದಲ್ಲಿ ಅಭ್ಯರ್ಥಿಯ ಹೆಸರು, ಭಾವಚಿತ್ರ ಮತ್ತು ಚಿಹ್ನೆ ಇರಲಿದೆ. ನೋಟಾ ಕೂಡ ಇರಲಿದೆ ಎಂದರು.

ನಾಮಪತ್ರ-16 ಕೊನೆ ದಿನ :

ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೆ.16 ಕೊನೆಯ ದಿನವಾಗಿದೆ. ಮೊದಲ ಎರಡು ದಿನ ಯಾವುದೇ ನಾಮಪತ್ತ ಸಲ್ಲಿಕೆಯಾಗಿಲ್ಲ. 87 ಮಂದಿ ಅರ್ಜಿಗಳನ್ನು ಪಡೆದಿದ್ದಾರೆ. ಮೆ.17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮೆ.20 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಎಂದು ಅವರು ವಿವರಿಸಿದರು. ನೀತಿ ಸಂಹಿತೆ ಸಂಬಂಧಿಸಿ ಯಾವುದೇ ದೂರು ಬಂದಿಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ಸಹಾಯಕ ಚುನಾವಣಾಧಿಕಾರಿ ರವಿಚಂದ್ರ, ಸೆಕ್ಟರ್ ಅಧಿಕಾರಿ ಸತೀಶ್ ಕೊಯಿಂಗಾಜೆ ಉಪಸ್ಥಿತರಿದ್ದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

4 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

4 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago