ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ ಮತ್ತೆ ಮೂರು ವಾರ್ಡ್ ಗಳ ಅಭ್ಯರ್ಥಿಗಳನ್ನು ಘೋಷಿಸಿದೆ. ಇದರಿಂದ ಒಟ್ಟು 16 ವಾರ್ಡ್ ಗಳ ಅಭ್ಯರ್ಥಿ ಘೋಷಣೆ ಪೂರ್ತಿಯಾಗಿದೆ.
ವಾರ್ಡ್ ಸಂಖ್ಯೆ 3(ಜಯನಗರ)ರಲ್ಲಿ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಭಟ್, ವಾರ್ಡ್ ಸಂಖ್ಯೆ 4(ಶಾಂತಿನಗರ)ರಲ್ಲಿ ಶಂಕರ್, ವಾರ್ಡ್ ಸಂಖ್ಯೆ 6(ಬೀರಮಂಗಲ)ರಲ್ಲಿ ಧೀರಾ ಕ್ರಾಸ್ತಾ ಅಭ್ಯರ್ಥಿಗಳಾಗಲಿದ್ದಾರೆ.
ನಾಲ್ಕು ವಾರ್ಡ್ ಗಳಲ್ಲಿ ಮುಂದುವರಿದ ಬಿಕ್ಕಟ್ಟು:
20 ವಾರ್ಡ್ ಗಳಲ್ಲಿ 16 ವಾರ್ಡ್ ಗಳ ಅಭ್ಯರ್ಥಿ ಘೋಷಣೆ ಅಂತಿಮಗೊಳಿಸಿದರೂ ನಾಲ್ಕು ವಾರ್ಡ್ ಗಳ ಬಿಕ್ಕಟ್ಟು ಮುಂದುವರಿದಿದೆ. ವಾರ್ಡ್ ಸಂಖ್ಯೆ 12(ಕೆರೆಮೂಲೆ), 13(ಬೂಡು), 15(ಗಾಂಧಿನಗರ-ನಾವೂರು), 17(ಬೋರುಗುಡ್ಡೆ) ವಾರ್ಡ್ ಗಳಲ್ಲಿ ಅಭ್ಯರ್ಥಿ ಘೋಷಣೆ ಆಗಿಲ್ಲ. ಇಲ್ಲಿ ಆಕಾಂಕ್ಷಿಗಳ ಪಟ್ಟಿ ಜಾಸ್ತಿ ಇರುವುದರಿಂದ ಮತ್ತು ಪ್ರಮುಖ ನಾಯಕರು ಆಕಾಂಕ್ಷಿಗಳಾಗಿರುವ ಕಾರಣ ಅಭ್ಯರ್ಥಿ ಆಯ್ಕೆ ನೇತೃತ್ವಕ್ಕೆ ಕಗ್ಗಂಟಾಗಿದೆ.
ಈ ವಾರ್ಡ್ ಗಳಲ್ಲಿ ಅಭ್ಯರ್ಥಿ ಆಯ್ಕೆ ಮಂಗಳವಾರ ಸಂಜೆಯೊಳಗೆ ಪೂರ್ತಿ ಮಾಡುವುದಾಗಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ ತಿಳಿಸಿದ್ದಾರೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…