ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ ಮತ್ತೆ ಮೂರು ವಾರ್ಡ್ ಗಳ ಅಭ್ಯರ್ಥಿಗಳನ್ನು ಘೋಷಿಸಿದೆ. ಇದರಿಂದ ಒಟ್ಟು 16 ವಾರ್ಡ್ ಗಳ ಅಭ್ಯರ್ಥಿ ಘೋಷಣೆ ಪೂರ್ತಿಯಾಗಿದೆ.
ವಾರ್ಡ್ ಸಂಖ್ಯೆ 3(ಜಯನಗರ)ರಲ್ಲಿ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಭಟ್, ವಾರ್ಡ್ ಸಂಖ್ಯೆ 4(ಶಾಂತಿನಗರ)ರಲ್ಲಿ ಶಂಕರ್, ವಾರ್ಡ್ ಸಂಖ್ಯೆ 6(ಬೀರಮಂಗಲ)ರಲ್ಲಿ ಧೀರಾ ಕ್ರಾಸ್ತಾ ಅಭ್ಯರ್ಥಿಗಳಾಗಲಿದ್ದಾರೆ.
ನಾಲ್ಕು ವಾರ್ಡ್ ಗಳಲ್ಲಿ ಮುಂದುವರಿದ ಬಿಕ್ಕಟ್ಟು:
20 ವಾರ್ಡ್ ಗಳಲ್ಲಿ 16 ವಾರ್ಡ್ ಗಳ ಅಭ್ಯರ್ಥಿ ಘೋಷಣೆ ಅಂತಿಮಗೊಳಿಸಿದರೂ ನಾಲ್ಕು ವಾರ್ಡ್ ಗಳ ಬಿಕ್ಕಟ್ಟು ಮುಂದುವರಿದಿದೆ. ವಾರ್ಡ್ ಸಂಖ್ಯೆ 12(ಕೆರೆಮೂಲೆ), 13(ಬೂಡು), 15(ಗಾಂಧಿನಗರ-ನಾವೂರು), 17(ಬೋರುಗುಡ್ಡೆ) ವಾರ್ಡ್ ಗಳಲ್ಲಿ ಅಭ್ಯರ್ಥಿ ಘೋಷಣೆ ಆಗಿಲ್ಲ. ಇಲ್ಲಿ ಆಕಾಂಕ್ಷಿಗಳ ಪಟ್ಟಿ ಜಾಸ್ತಿ ಇರುವುದರಿಂದ ಮತ್ತು ಪ್ರಮುಖ ನಾಯಕರು ಆಕಾಂಕ್ಷಿಗಳಾಗಿರುವ ಕಾರಣ ಅಭ್ಯರ್ಥಿ ಆಯ್ಕೆ ನೇತೃತ್ವಕ್ಕೆ ಕಗ್ಗಂಟಾಗಿದೆ.
ಈ ವಾರ್ಡ್ ಗಳಲ್ಲಿ ಅಭ್ಯರ್ಥಿ ಆಯ್ಕೆ ಮಂಗಳವಾರ ಸಂಜೆಯೊಳಗೆ ಪೂರ್ತಿ ಮಾಡುವುದಾಗಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ ತಿಳಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…