ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ ಮತ್ತೆ ಮೂರು ವಾರ್ಡ್ ಗಳ ಅಭ್ಯರ್ಥಿಗಳನ್ನು ಘೋಷಿಸಿದೆ. ಇದರಿಂದ ಒಟ್ಟು 16 ವಾರ್ಡ್ ಗಳ ಅಭ್ಯರ್ಥಿ ಘೋಷಣೆ ಪೂರ್ತಿಯಾಗಿದೆ.
ವಾರ್ಡ್ ಸಂಖ್ಯೆ 3(ಜಯನಗರ)ರಲ್ಲಿ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಭಟ್, ವಾರ್ಡ್ ಸಂಖ್ಯೆ 4(ಶಾಂತಿನಗರ)ರಲ್ಲಿ ಶಂಕರ್, ವಾರ್ಡ್ ಸಂಖ್ಯೆ 6(ಬೀರಮಂಗಲ)ರಲ್ಲಿ ಧೀರಾ ಕ್ರಾಸ್ತಾ ಅಭ್ಯರ್ಥಿಗಳಾಗಲಿದ್ದಾರೆ.
ನಾಲ್ಕು ವಾರ್ಡ್ ಗಳಲ್ಲಿ ಮುಂದುವರಿದ ಬಿಕ್ಕಟ್ಟು:
20 ವಾರ್ಡ್ ಗಳಲ್ಲಿ 16 ವಾರ್ಡ್ ಗಳ ಅಭ್ಯರ್ಥಿ ಘೋಷಣೆ ಅಂತಿಮಗೊಳಿಸಿದರೂ ನಾಲ್ಕು ವಾರ್ಡ್ ಗಳ ಬಿಕ್ಕಟ್ಟು ಮುಂದುವರಿದಿದೆ. ವಾರ್ಡ್ ಸಂಖ್ಯೆ 12(ಕೆರೆಮೂಲೆ), 13(ಬೂಡು), 15(ಗಾಂಧಿನಗರ-ನಾವೂರು), 17(ಬೋರುಗುಡ್ಡೆ) ವಾರ್ಡ್ ಗಳಲ್ಲಿ ಅಭ್ಯರ್ಥಿ ಘೋಷಣೆ ಆಗಿಲ್ಲ. ಇಲ್ಲಿ ಆಕಾಂಕ್ಷಿಗಳ ಪಟ್ಟಿ ಜಾಸ್ತಿ ಇರುವುದರಿಂದ ಮತ್ತು ಪ್ರಮುಖ ನಾಯಕರು ಆಕಾಂಕ್ಷಿಗಳಾಗಿರುವ ಕಾರಣ ಅಭ್ಯರ್ಥಿ ಆಯ್ಕೆ ನೇತೃತ್ವಕ್ಕೆ ಕಗ್ಗಂಟಾಗಿದೆ.
ಈ ವಾರ್ಡ್ ಗಳಲ್ಲಿ ಅಭ್ಯರ್ಥಿ ಆಯ್ಕೆ ಮಂಗಳವಾರ ಸಂಜೆಯೊಳಗೆ ಪೂರ್ತಿ ಮಾಡುವುದಾಗಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ ತಿಳಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…