ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ ಮತ್ತೆ ಮೂರು ವಾರ್ಡ್ ಗಳ ಅಭ್ಯರ್ಥಿಗಳನ್ನು ಘೋಷಿಸಿದೆ. ಇದರಿಂದ ಒಟ್ಟು 16 ವಾರ್ಡ್ ಗಳ ಅಭ್ಯರ್ಥಿ ಘೋಷಣೆ ಪೂರ್ತಿಯಾಗಿದೆ.
ವಾರ್ಡ್ ಸಂಖ್ಯೆ 3(ಜಯನಗರ)ರಲ್ಲಿ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಭಟ್, ವಾರ್ಡ್ ಸಂಖ್ಯೆ 4(ಶಾಂತಿನಗರ)ರಲ್ಲಿ ಶಂಕರ್, ವಾರ್ಡ್ ಸಂಖ್ಯೆ 6(ಬೀರಮಂಗಲ)ರಲ್ಲಿ ಧೀರಾ ಕ್ರಾಸ್ತಾ ಅಭ್ಯರ್ಥಿಗಳಾಗಲಿದ್ದಾರೆ.
ನಾಲ್ಕು ವಾರ್ಡ್ ಗಳಲ್ಲಿ ಮುಂದುವರಿದ ಬಿಕ್ಕಟ್ಟು:
20 ವಾರ್ಡ್ ಗಳಲ್ಲಿ 16 ವಾರ್ಡ್ ಗಳ ಅಭ್ಯರ್ಥಿ ಘೋಷಣೆ ಅಂತಿಮಗೊಳಿಸಿದರೂ ನಾಲ್ಕು ವಾರ್ಡ್ ಗಳ ಬಿಕ್ಕಟ್ಟು ಮುಂದುವರಿದಿದೆ. ವಾರ್ಡ್ ಸಂಖ್ಯೆ 12(ಕೆರೆಮೂಲೆ), 13(ಬೂಡು), 15(ಗಾಂಧಿನಗರ-ನಾವೂರು), 17(ಬೋರುಗುಡ್ಡೆ) ವಾರ್ಡ್ ಗಳಲ್ಲಿ ಅಭ್ಯರ್ಥಿ ಘೋಷಣೆ ಆಗಿಲ್ಲ. ಇಲ್ಲಿ ಆಕಾಂಕ್ಷಿಗಳ ಪಟ್ಟಿ ಜಾಸ್ತಿ ಇರುವುದರಿಂದ ಮತ್ತು ಪ್ರಮುಖ ನಾಯಕರು ಆಕಾಂಕ್ಷಿಗಳಾಗಿರುವ ಕಾರಣ ಅಭ್ಯರ್ಥಿ ಆಯ್ಕೆ ನೇತೃತ್ವಕ್ಕೆ ಕಗ್ಗಂಟಾಗಿದೆ.
ಈ ವಾರ್ಡ್ ಗಳಲ್ಲಿ ಅಭ್ಯರ್ಥಿ ಆಯ್ಕೆ ಮಂಗಳವಾರ ಸಂಜೆಯೊಳಗೆ ಪೂರ್ತಿ ಮಾಡುವುದಾಗಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ ತಿಳಿಸಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…