Advertisement
ಸುದ್ದಿಗಳು

ನಗರ ಪಂಚಾಯತ್ ಚುನಾವಣೆ ಶಾಂತಿಯುತ : ಗೆಲುವಿನ ವಿಶ್ವಾಸ ಎಲ್ಲರಿಗೂ

Share

ಸುಳ್ಯ: ಸುಳ್ಯ ನಗರ ಪಂಚಾಯತ್  ಚುನಾವಣೆ  ಬುಧವಾರ   ಶಾಂತಿಯುತವಾಗಿ ನಡೆಯಿತು.

ಬೆಳಿಗ್ಗಿನಿಂದ ಮತಗಟ್ಟೆಗಳಲ್ಲಿ ಉದ್ದದ ಸರತಿ ಸಾಲು ಉಂಟಾಗಿತ್ತು. ನಗರದ ಎಲ್ಲಾ ವಾರ್ಡ್‍ಗಳಲ್ಲಿಯೂ ಬಿರುಸಿನ ಮತದಾನ ನಡೆಯಿತು. ಬಳಿಕ ಮತದಾನದ ಬಿರುಸು ಕಡಿಮೆಯಾಯಿತು. ಆ ನಂತರ ಒಬ್ಬೊಬ್ಬರೇ ಆಗಮಿಸಿ ಮತದಾನ ಮಾಡಿ ತೆರಳುತ್ತಿದ್ದುದು ಕಂಡು ಬಂತು. ಮತದಾನ ಶಾಂತವಾಗಿ ನಡೆದಿತ್ತು. ಯಾವುದೇ ಗೊಂದಲ, ಅಹಿತಕರ ಘಟನೆಗಳು ನಡೆದ ಬಗ್ಗೆ ವರದಿಯಾಗಿಲ್ಲ.

20 ವಾರ್ಡ್‍ಗಳಲ್ಲಿಯೂ ಶಾಂತಿಯುತ ಮತದಾನ ದಾಖಲಾಗಿತ್ತು. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಮಧ್ಯೆ ಸ್ಪರ್ಧೆ ನಡೆದ ವಾರ್ಡ್‍ಗಳಲ್ಲಿ ಕೆಲವು ಕಡೆ ಎಸ್‍ಡಿಪಿಐ, ಪಕ್ಷೇತರರು ಸ್ಪರ್ಧೆ ನೀಡಿ ತ್ರಿಕೋನ ಸ್ಪರ್ಧೆಯ ರಂಗು ತಂದಿತ್ತು. ಪ್ರತಿ ಎರಡು ಗಂಟೆಗಳಿಗೊಮ್ಮೆ ಚುನಾವಣಾ ಶೇಖಡಾವಾರು ಮತದಾನದ ಮಾಹಿತಿ ನೀಡಲಾಗುತ್ತಿತ್ತು. ಬೆಳಿಗ್ಗೆ ಒಂಭತ್ತಕ್ಕೆ ಶೇ.15, 11 ಗಂಟೆಯ ವೇಳೆಗೆ ಶೇ.33.47, ಒಂದು ಗಂಟೆಗೆ ಶೇ.49.88, ಮೂರು ಗಂಟೆಯ ವೇಳೆಗೆ ಶೇ.61.73 ಮತದಾನ ದಾಖಲಾಗಿತ್ತು.

ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್, ನಗರ ಪಂಚಾಯತ್ ಚುನಾವಣಾಧಿಕಾರಿಗಳಾದ ಎನ್.ಮಂಜುನಾಥ್ ಮತ್ತು ದೇವರಾಜ್ ಮುತ್ಲಾಜೆ ನೇತೃತ್ವದಲ್ಲಿ ಚುನಾವಣಾ ಪ್ರಕ್ರಿಯೆ ಸುಸೂತ್ರವಾಗಿ ನಡೆಯಿತು. ವೃತ್ತ ನಿರೀಕ್ಷಕ ಆರ್.ಸತೀಶ್‍ಕುಮಾರ್ ನೇತೃತ್ವದಲ್ಲಿ ಬಿಗು ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಎರಡೂ ಪಕ್ಷಗಳಿಗೆ ಗೆಲುವಿನ ವಿಶ್ವಾಸ:

ನಗರ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸತತ ನಾಲ್ಕನೇ ಬಾರಿ ನಗರ ಪಂಚಾಯಿತಿ ಆಡಳಿತ ಚುಕ್ಕಾಣಿ ಹಿಡಿಯುವುದು ಖಚಿತ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ. 20ರಲ್ಲಿ 16 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರ ಪಂಚಾಯತ್ ನಲ್ಲಿ ಬದಲಾವಣೆ ಸಾಧ್ಯವಾಗಲಿದೆ ಎಂಬುದು ಕಾಂಗ್ರೆಸ್ ನಿರೀಕ್ಷೆ. 20ರಲ್ಲಿ 12 ಸ್ಥಾನಗಳನ್ನು ಪಡೆದು ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ಹೇಳಿದ್ದಾರೆ. ಉತ್ತಮ ತಂಡವನ್ನು ಕಣಕ್ಕಿಳಿಸಿದ ಕಾರಣ ಜನರು ಈ ಬಾರಿ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿರುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

12 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

13 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

13 hours ago