Advertisement
Political mirror

ನಗರ ಪಂಚಾಯತ್ ಚುನಾವಣೆ : 6 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ಕಗ್ಗಂಟು

Share

ಸುಳ್ಯ:  ನಗರ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಂಡಿದೆ.  ಬಿಡುಗಡೆಯಾದ 14 ಮಂದಿಯೂ ಹೊಸ ಮುಖಗಳಾಗಿದ್ದು ಹೊಸ ಪ್ರಯೋಗಕ್ಕೆ ಬಿಜೆಪಿ ಮುಂದಾಗಿದೆ. ಆರು ವಾರ್ಡ್ ಗಳ ಅಭ್ಯರ್ಥಿ ಆಯ್ಕೆ ಬಾಕಿ ಉಳಿದಿದೆ.

Advertisement
Advertisement

ಈ ವಾರ್ಡ್ ಗಳಲ್ಲಿ ಅಭ್ಯರ್ಥಿ ಆಕಾಂಕ್ಷಿಗಳು ಹೆಚ್ಚು ಇರುವ ಕಾರಣ ಘೋಷಣೆಗೆ ಬಾಕಿ ಉಳಿದಿದೆ‌ ಎನ್ನನಲಾಗುತ್ತಿದೆ. ನಗರ ಪಂಚಾಯತ್ ನಲ್ಲಿ ಸದಸ್ಯರಾಗಿದ್ದ ಇಬ್ಬರು ಹಿರಿಯರು ಮತ್ತೆ ಸ್ಪರ್ಧಿಸಲು ಆಸಕ್ತಿ ಹೊಂದಿದ್ದು ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಇದು ಕೂಡ ಕೆಲವು ವಾರ್ಡ್ ಗಳಲ್ಲಿ ಅಭ್ಯರ್ಥಿ ಆಯ್ಕೆಗೆ ತೊಡಕಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಎಲ್ಲಾ ವಾರ್ಡ್ ಗಳಲ್ಲಿಯೂ ಹೊಸಬರನ್ನು ಕಣಕ್ಕಿಳಿಸುವುದು ಬಿಜೆಪಿಯ ಚುನಾವಣಾ ತಂತ್ರ. ಆದುದರಿಂದ ಸ್ಪರ್ಧಿಸಲು ಉತ್ಸುಕರಾಗಿರುವ ಮಾಜಿ ಸದಸ್ಯರುಗಳನ್ನು , ಮಾಜಿ ಅಧ್ಯಕ್ಷರನ್ನು  ಓಲೈಕೆ ಮಾಡಿ ಸ್ಪರ್ಧಾ ಕಣದಿಂದ ಹಿಂದೆ ಸರಿಸುವ ಪ್ರಯತ್ನ ನಡೆಯುತ್ತಿದೆ  ಎಂದು ತಿಳಿದು ಬಂದಿದೆ. ಈಗ ಬಿಜೆಪಿ ಯು ಒತ್ತಡಕ್ಕೆ ಮಣಿಯುತ್ತಾ , ಇಲ್ಲವೋ ಎನ್ನುವುದು ಕುತೂಹಲ ಮೂಡಿಸಿದೆ.

Advertisement

ಎಂಟು ಮಂದಿ ಆಕಾಂಕ್ಷಿಗಳಿರುವ ಸಾಮಾನ್ಯ ಮಹಿಳಾ ವಾರ್ಡ್ ನಲ್ಲಿಯೂ ಅಭ್ಯರ್ಥಿ ಘೋಷಣೆ ಆಗಿಲ್ಲ. ಒಂದೆರಡು ಸುತ್ತಿನ ಮಾತುಕತೆ ನಡೆಸಿ ಮಂಗಳವಾರ ಸಂಜೆಯ ವೇಳೆಗೆ ಉಳಿದ ಅಭ್ಯರ್ಥಿಗಳ ಆಯ್ಕೆಯನ್ನೂ ಅಂತಿಮಗೊಳಿಸಲಾಗುವುದು ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ.

ವಾರ್ಡ್ ಸಂಖ್ಯೆ 2(ಕೊಯಿಕುಳಿ), 3(ಜಯನಗರ), 8(ಕುರುಂಜಿಭಾಗ), 9(ಭಸ್ಮಡ್ಕ), 10(ಕೇರ್ಪಳ),20(ಕಾನತ್ತಿಲ-ಜಟ್ಟಿಪಳ್ಳ) ವಾರ್ಡ್ ಗಳಲ್ಲಿ ಅಭ್ಯರ್ಥಿ ಘೋಷಣೆಗೆ ಬಾಕಿ ಉಳಿದಿದೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಾವು ಮಾಂತ್ರಿಕ ಮತ್ತು ನಂಬರ್ 1 – ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

31 mins ago

ಭಾರತದಲ್ಲಿ ಏರಿದ ತಾಪಮಾನ : ಅತ್ತ ತಾಂಜಾನಿಯಾದಲ್ಲಿ ಭಾರೀ ಮಳೆ, ಪ್ರವಾಹ : 155 ಮಂದಿ ಸಾವು

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜಾನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

5 hours ago

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು : ದೂರ ಸಾಗಿದ ಮಳೆ : ಬಿಸಿ ಗಾಳಿಯ ಮುನ್ಸೂಚನೆ

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

5 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

6 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

7 hours ago