Advertisement
Political mirror

ನಗರ ಪಂಚಾಯತ್ ಚುನಾವಣೆ : 6 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ಕಗ್ಗಂಟು

Share

ಸುಳ್ಯ:  ನಗರ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಂಡಿದೆ.  ಬಿಡುಗಡೆಯಾದ 14 ಮಂದಿಯೂ ಹೊಸ ಮುಖಗಳಾಗಿದ್ದು ಹೊಸ ಪ್ರಯೋಗಕ್ಕೆ ಬಿಜೆಪಿ ಮುಂದಾಗಿದೆ. ಆರು ವಾರ್ಡ್ ಗಳ ಅಭ್ಯರ್ಥಿ ಆಯ್ಕೆ ಬಾಕಿ ಉಳಿದಿದೆ.

ಈ ವಾರ್ಡ್ ಗಳಲ್ಲಿ ಅಭ್ಯರ್ಥಿ ಆಕಾಂಕ್ಷಿಗಳು ಹೆಚ್ಚು ಇರುವ ಕಾರಣ ಘೋಷಣೆಗೆ ಬಾಕಿ ಉಳಿದಿದೆ‌ ಎನ್ನನಲಾಗುತ್ತಿದೆ. ನಗರ ಪಂಚಾಯತ್ ನಲ್ಲಿ ಸದಸ್ಯರಾಗಿದ್ದ ಇಬ್ಬರು ಹಿರಿಯರು ಮತ್ತೆ ಸ್ಪರ್ಧಿಸಲು ಆಸಕ್ತಿ ಹೊಂದಿದ್ದು ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಇದು ಕೂಡ ಕೆಲವು ವಾರ್ಡ್ ಗಳಲ್ಲಿ ಅಭ್ಯರ್ಥಿ ಆಯ್ಕೆಗೆ ತೊಡಕಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಎಲ್ಲಾ ವಾರ್ಡ್ ಗಳಲ್ಲಿಯೂ ಹೊಸಬರನ್ನು ಕಣಕ್ಕಿಳಿಸುವುದು ಬಿಜೆಪಿಯ ಚುನಾವಣಾ ತಂತ್ರ. ಆದುದರಿಂದ ಸ್ಪರ್ಧಿಸಲು ಉತ್ಸುಕರಾಗಿರುವ ಮಾಜಿ ಸದಸ್ಯರುಗಳನ್ನು , ಮಾಜಿ ಅಧ್ಯಕ್ಷರನ್ನು  ಓಲೈಕೆ ಮಾಡಿ ಸ್ಪರ್ಧಾ ಕಣದಿಂದ ಹಿಂದೆ ಸರಿಸುವ ಪ್ರಯತ್ನ ನಡೆಯುತ್ತಿದೆ  ಎಂದು ತಿಳಿದು ಬಂದಿದೆ. ಈಗ ಬಿಜೆಪಿ ಯು ಒತ್ತಡಕ್ಕೆ ಮಣಿಯುತ್ತಾ , ಇಲ್ಲವೋ ಎನ್ನುವುದು ಕುತೂಹಲ ಮೂಡಿಸಿದೆ.

ಎಂಟು ಮಂದಿ ಆಕಾಂಕ್ಷಿಗಳಿರುವ ಸಾಮಾನ್ಯ ಮಹಿಳಾ ವಾರ್ಡ್ ನಲ್ಲಿಯೂ ಅಭ್ಯರ್ಥಿ ಘೋಷಣೆ ಆಗಿಲ್ಲ. ಒಂದೆರಡು ಸುತ್ತಿನ ಮಾತುಕತೆ ನಡೆಸಿ ಮಂಗಳವಾರ ಸಂಜೆಯ ವೇಳೆಗೆ ಉಳಿದ ಅಭ್ಯರ್ಥಿಗಳ ಆಯ್ಕೆಯನ್ನೂ ಅಂತಿಮಗೊಳಿಸಲಾಗುವುದು ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ.

ವಾರ್ಡ್ ಸಂಖ್ಯೆ 2(ಕೊಯಿಕುಳಿ), 3(ಜಯನಗರ), 8(ಕುರುಂಜಿಭಾಗ), 9(ಭಸ್ಮಡ್ಕ), 10(ಕೇರ್ಪಳ),20(ಕಾನತ್ತಿಲ-ಜಟ್ಟಿಪಳ್ಳ) ವಾರ್ಡ್ ಗಳಲ್ಲಿ ಅಭ್ಯರ್ಥಿ ಘೋಷಣೆಗೆ ಬಾಕಿ ಉಳಿದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

5 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

1 day ago