Advertisement
ಸುದ್ದಿಗಳು

ನಗರ ಪಂಚಾಯತ್ ತ್ಯಾಜ್ಯ ವಿಲೇವಾರಿಗೆ ವೈಜ್ಞಾನಿಕ ಕ್ರಮ

Share

ಸುಳ್ಯ: ಸುಳ್ಯ ನಗರ ಪಂಚಾಯತ್  ತ್ಯಾಜ್ಯ ವಿಲೇವಾರಿಗೆ ವೈಜ್ಞಾನಿಕ ಕ್ರಮ ಕೈಗೊಳ್ಳಲು ನಗರ ಪಂಚಾಯತ್ ನಿರ್ಧರಿಸಿದೆ.

ನಗರದಲ್ಲಿ ಸಂಗ್ರಹವಾಗುವ ಹಸಿ ಕಸವನ್ನು ಗೊಬ್ಬರ ತಯಾರಿಗೆ ಕಳುಹಿಸಲಾಗುತ್ತದೆ. ಆದರೆ ಒಣ ಕಸವನ್ನು ನಗರ ಪಂಚಾಯತ್ ಕಚೇರಿ ಬಳಿಯ ಕಟ್ಟಡದಲ್ಲಿ ತುಂಬಿಡುವುದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರೇ ಸ್ಥಳಕ್ಕೆ ಆಗಮಿಸಿ ಕಸವನ್ನು ತೆರವು ಮಾಡಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು. ಈ ಹಿನ್ನಲೆಯಲ್ಲಿ ಒಣ ಕಸವನ್ನು ವೈಜ್ಞಾನಿಕವಾಗಿ ಸಂಸ್ಕರಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಸುಮಾರು 40 ಲಕ್ಷ ರೂಪಾಯಿ  ವೆಚ್ಚದಲ್ಲಿ `ಬರ್ನಿಂಗ್ ಮೆಷಿನ್’ ಖರೀದಿಸಲಾಗುವುದು. 14ನೇ ಹಣಕಾಸು ಯೋಜನೆಯಲ್ಲಿನ ಅನುದಾನವನ್ನು ಬಳಸಿ ಯಂತ್ರದ ಖರೀದಿಗೆ ಕ್ರಿಯಾ ಯೋಜನೆ ತಯಾರಿಸಿ ಜಿಲ್ಲಾಧಿಕಾರಿಗೆ ಅನುಮೋದನೆಗೆ ಕಳುಹಿಸಲಾಗಿದೆ ಎಂದು ನಗರ ಪಂಚಾಯತ್ ಮುಖ್ಯಾಧಿಕಾರಿ ಶ್ರೀಧರ ಎ.ಎಂ. ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳಿಂದ ಅನುಮೋದನೆ ದೊರೆತ ಕೂಡಲೇ ಟೆಂಡರ್ ಕರೆದು ಯಂತ್ರಗಳನ್ನು ಖರೀದಿ ಮಾಡಲಾಗುವುದು. ನಗರ ಪಂಚಾಯತ್ ನಲ್ಲಿ ಸಂಗ್ರಹವಾದ ಕಸದ ವಿಲೇವಾರಿ ಮೊದಲಿಗೆ ನಡೆಸಲಾಗುವುದು. ಪ್ರತಿ ದಿನ ಒಂದು ಟನ್ ಒಣ ಕಸವನ್ನು ಸಂಸ್ಕರಣೆ ಮಾಡುವ ಯಂತ್ರವನ್ನು ತರಿಸಲಾಗುವುದು. ಕಲ್ಚರ್ಪೆಯಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕದಲ್ಲಿಯೇ ಯಂತ್ರಗಳ ಜೋಡಣೆ ಮಾಡಿ ಅಲ್ಲಿಯೇ ಸಂಸ್ಕರಣೆ ಮಾಡಲಾಗುವುದು. ಯಂತ್ರಗಳನ್ನು ತರುವ ಮೊದಲು ಕಲ್ಪರ್ಪೆಯಲ್ಲಿ ಶೇಖರಣೆಯಾಗಿರುವ ಕಸವನ್ನು ವಿಲೆವಾರಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ನೀರಿನ ಟ್ಯಾಂಕ್‍ಗಳ ಸ್ವಚ್ಛತೆಗೆ ಕ್ರಮ
ನಗರ ಪಂಚಾಯತ್ ನ ವಿವಿಧ ವಾರ್ಡ್‍ಗಳಲ್ಲಿನ ಕುಡಿಯುವ ನೀರಿನ ಟ್ಯಾಂಕ್‍ಗಳ ಸ್ವಚ್ಛತೆಯನ್ನು ಕಾಪಾಡಲು ಕ್ರಮ ಕೈಗೊಳ್ಳಲಾಗುವುದು. ಯಂತ್ರಗಳನ್ನು ಬಳಸಿ ಟ್ಯಾಂಕ್‍ಗಳನ್ನು ಸ್ವಚ್ಛ ಮಾಡಿ ಟ್ಯಾಂಕ್‍ನ ಒಳಗಡೆ ಬಣ್ಣ ಬಳಿದು, ಲೀಕೇಜ್‍ಗಳನ್ನು ಮುಚ್ಚಿ ಸಮರ್ಪಕವಾಗಿ ನಿರ್ವಹಣೆ ಮಾಡಲಾಗುವುದು. ನಾಳೆಯಿಂದ ಟ್ಯಾಂಕ್‍ಗಳನ್ನು ಸ್ವಚ್ಛತೆ ಮಾಡುವ ಕಾರ್ಯ ಆರಂಭವಾಗಲಿದೆ ಎಂದು ಮುಖ್ಯಾಧಿಕಾರಿ ಶ್ರೀಧರ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

42 minutes ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

3 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

7 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

13 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

14 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago