ಸುದ್ದಿಗಳು

ನಗರ ಪಂಚಾಯತ್ ನ ಕಸ ತೆರವು ಕಾರ್ಯಾಚರಣೆ ಸ್ಥಗಿತ; ರುಧ್ರಭೂಮಿಯಲ್ಲಿ ಕಸ ಹಾಕಿರುವುದಕ್ಕೆ ಸಾರ್ವಜನಿಕರ ವಿರೋಧ

Share

ಸುಳ್ಯ: ತ್ಯಾಜ್ಯ ಹಾಕಲು ಸ್ಥಳವಿಲ್ಲ ಎಂದು ನಗರ ಪಂಚಾಯಿತಿ ಆವರಣದಲ್ಲಿಯೇ ತುಂಬಿಡಲಾಗಿದ್ದ ತ್ಯಾಜ್ಯವನ್ನು ತೆರವು ಮಾಡುವ ಕಾರ್ಯಾಚರಣೆ ಸ್ಥಗಿತಗೊಂಡಿದೆ‌. ನಗರ ಪಂಚಾಯತ್ ಮುಂಭಾಗದ ಕಟ್ಟದಿಂದ ಕೆಲವು ಲೋಡ್ ಕಸವನ್ನು ಲಾರಿಯಲ್ಲಿ ಸಾಗಾಟ ಮಾಡಲಾಗಿದ್ದರೂ ಎರಡು ದಿನಗಳ ಬಳಿಕ ಅದು ಸ್ಥಗಿತಗೊಂಡಿದೆ. ಈ ಮಧ್ಯೆ ಕೆಲವು ಲೋಡ್ ಕಸವನ್ನು ಜಯನಗರದ ಸ್ಮಶಾನದ ಆವರಣದ ಒಳಗಡೆ ರಾಶಿ ಹಾಕಿದ್ದು ವಿವಾದಕ್ಕೆ ಕಾರಣವಾಗಿದೆ.

ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ಭಟ್ ನೇತೃತ್ವದಲ್ಲಿ ಸ್ಥಳೀಯರು ಜಮಾಯಿಸಿ ಕಸ ಹಾಕಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಮಶಾನದ ಸ್ಥಳದಲ್ಲಿ ಕಸ ಹಾಕಿ ಮಲಿನಗೊಳಿಸುವುದನ್ನು ತೀವ್ರವಾಗಿ ವಿರೋಧಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಸ್ಮಶಾನದ ಆವರಣದಿಂದ ಕಸವನ್ನು ಕೂಡಲೇ ತೆರವು ಮಾಡಬೇಕು, ಇಲ್ಲದಿದ್ದರೆ ಪ್ರತಿಭಟನೆ ನಡೆಸುವುದಾಗಿ ಬಾಲಕೃಷ್ಣ ಭಟ್ ಹೇಳಿದರು. ಜಯನಗರದ ಸ್ಥಳೀಯರು ಕೆಲವರು ಶುಕ್ರವಾರ ಬೆಳಿಗ್ಗೆ ನಗರ ಪಂಚಾಯತ್ ಕಚೇರಿಗೆ ಆಗಮಿಸಿ ಸ್ಮಶಾನದ ಆವರಣದಲ್ಲಿ ಕಸ ಹಾಕಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಕಸ ಹಾಕಿರುವುದು ವಿವಾದ ಆಗಿರುವ ಹಿನ್ನಲೆಯಲ್ಲಿ ನಗರ ಪಂಚಾಯತ್ ಸದಸ್ಯರು ಮತ್ತಿತರ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ನಗರದ ಕಸವನ್ನು ನಗರ ಪಂಚಾಯಿತಿ ಮುಂಭಾಗದ ಕಟ್ಟಡದಲ್ಲಿ ತುಂಬಿಟ್ಟ ಕಾರಣ ನಗರ ಪಂಚಾಯಿತಿ ಪರಿಸರ ಅಕ್ಷರಷಃ ಡಂಪಿಂಗ್ ಯಾರ್ಡ್ ಆಗಿ ಪರಿವರ್ತನೆಯಾಗಿತ್ತು. ನಗರ ಪಂಚಾಯಿತಿ ಆವರಣದಲ್ಲಿ ಕಸ ತುಂಬಿಡುವುದು ಭಾರೀ ವಿವಾದ ಸೃಷ್ಟಿಸಿದ ಹಿನ್ನಲೆಯಲ್ಲಿ ನಗರ ಪಂಚಾಯಿತಿ ಕಸ ವಿಲೇವಾರಿಗೆ ಮುಂದಾಗಿದೆ. ಲಾರಿಗಳಲ್ಲಿ ತುಂಬಿ ಕಸವನ್ನು ಬೇರೆಡೆಗೆ ಸಾಗಿಸಿ ವಿಲೇವಾರಿ ಮಾಡಲು ಆರಂಭಿಸಿತ್ತು. ಆದರೆ ಎರಡು ದಿನ ಸಾಗಾಟದ ಬಳಿಕ ಸ್ಥಗಿತಗೊಂಡಿದೆ.

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 19-03-2025 | ಇಂದು ಕೆಲವು ಕಡೆ ಮಳೆ ಸಾಧ್ಯತೆ | ಮಾರ್ಚ್ 22 ರಿಂದ ಬೇಸಿಗೆ ಮಳೆಯ ಮುನ್ಸೂಚನೆ |

ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಾರ್ಚ್ 22 ರಿಂದ ಬೇಸಿಗೆ ಮಳೆ ಆರಂಭವಾಗುವ…

3 hours ago

ಮಲೆನಾಡು-ಕರಾವಳಿ ಭಾಗದ ಅಡಿಕೆ ಬೆಳೆಗಾರರಿಗೆ ಸಮಸ್ಯೆ ಎಲ್ಲಾಗುತ್ತಿದೆ…? | ಇಳುವರಿ ಕೊರೆತೆಯಾಗುತ್ತಿರುವುದು ಏಕೆ..? | ಏನು ಮಾಡಬಹುದು ಮುಂದೆ..?

ಈಚೆಗೆ ಕರಾವಳಿ-ಮಲೆನಾಡು ಭಾಗದಲ್ಲಿ ತಾಪಮಾನ ವಿಪರೀತ ಏರಿಕೆಯಾಗುತ್ತಿದೆ. ಅದರ ಜೊತೆಗೇ ತೇವಾಂಶ ಗಣನೀಯವಾಗಿ…

4 hours ago

ಹೊಸರುಚಿ | ಗುಜ್ಜೆ ಸಮೋಸ

ಗುಜ್ಜೆ ಸಮೋಸಕ್ಕೆ ಬೇಕಾಗುವ ಸಾಮಗ್ರಿಗಳು  ಹಾಗೂ ಮಾಡುವ ವಿಧಾನ : ಗೋಧಿ ಹುಡಿ…

7 hours ago

ಮಾರ್ಚ್ 19 ರಿಂದ 5 ರಾಶಿಗಳಿಗೆ ವಿಶೇಷ ಶುಭ ಸೂಚನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ನಗುವಿನೊಂದಿಗೆ ಭೂಮಿಗೆ ಇಳಿದ ಗಗನಯಾತ್ರಿ ಸುನಿತಾ ವಿಲಿಯಮ್ಸ್

ಭಾರತೀಯ ಮೂಲದ ಅಮರಿಕನ್ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶದಿಂದ…

9 hours ago

ನಭೋಮಂಡಲಕ್ಕೆ ಇಣುಕುನೋಟ | ಗಗನಯಾತ್ರಿಗಳನ್ನು ಸ್ವಾಗತಿಸೋಣ…|

ಒಂಬತ್ತು ತಿಂಗಳ ಹಿಂದೆ ಜೂನ್ 5 ರಂದು ISS ಅಂದರೆ ಅಂತಾರಾಷ್ಟ್ರೀಯ ಬಾಹ್ಯಾಕಾಶ…

17 hours ago