ಸುದ್ದಿಗಳು

ನಗರ ಪಂಚಾಯತ್ ನ ಕಸ ತೆರವು ಕಾರ್ಯಾಚರಣೆ ಸ್ಥಗಿತ; ರುಧ್ರಭೂಮಿಯಲ್ಲಿ ಕಸ ಹಾಕಿರುವುದಕ್ಕೆ ಸಾರ್ವಜನಿಕರ ವಿರೋಧ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ತ್ಯಾಜ್ಯ ಹಾಕಲು ಸ್ಥಳವಿಲ್ಲ ಎಂದು ನಗರ ಪಂಚಾಯಿತಿ ಆವರಣದಲ್ಲಿಯೇ ತುಂಬಿಡಲಾಗಿದ್ದ ತ್ಯಾಜ್ಯವನ್ನು ತೆರವು ಮಾಡುವ ಕಾರ್ಯಾಚರಣೆ ಸ್ಥಗಿತಗೊಂಡಿದೆ‌. ನಗರ ಪಂಚಾಯತ್ ಮುಂಭಾಗದ ಕಟ್ಟದಿಂದ ಕೆಲವು ಲೋಡ್ ಕಸವನ್ನು ಲಾರಿಯಲ್ಲಿ ಸಾಗಾಟ ಮಾಡಲಾಗಿದ್ದರೂ ಎರಡು ದಿನಗಳ ಬಳಿಕ ಅದು ಸ್ಥಗಿತಗೊಂಡಿದೆ. ಈ ಮಧ್ಯೆ ಕೆಲವು ಲೋಡ್ ಕಸವನ್ನು ಜಯನಗರದ ಸ್ಮಶಾನದ ಆವರಣದ ಒಳಗಡೆ ರಾಶಿ ಹಾಕಿದ್ದು ವಿವಾದಕ್ಕೆ ಕಾರಣವಾಗಿದೆ.

Advertisement

ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ಭಟ್ ನೇತೃತ್ವದಲ್ಲಿ ಸ್ಥಳೀಯರು ಜಮಾಯಿಸಿ ಕಸ ಹಾಕಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಮಶಾನದ ಸ್ಥಳದಲ್ಲಿ ಕಸ ಹಾಕಿ ಮಲಿನಗೊಳಿಸುವುದನ್ನು ತೀವ್ರವಾಗಿ ವಿರೋಧಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಸ್ಮಶಾನದ ಆವರಣದಿಂದ ಕಸವನ್ನು ಕೂಡಲೇ ತೆರವು ಮಾಡಬೇಕು, ಇಲ್ಲದಿದ್ದರೆ ಪ್ರತಿಭಟನೆ ನಡೆಸುವುದಾಗಿ ಬಾಲಕೃಷ್ಣ ಭಟ್ ಹೇಳಿದರು. ಜಯನಗರದ ಸ್ಥಳೀಯರು ಕೆಲವರು ಶುಕ್ರವಾರ ಬೆಳಿಗ್ಗೆ ನಗರ ಪಂಚಾಯತ್ ಕಚೇರಿಗೆ ಆಗಮಿಸಿ ಸ್ಮಶಾನದ ಆವರಣದಲ್ಲಿ ಕಸ ಹಾಕಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಕಸ ಹಾಕಿರುವುದು ವಿವಾದ ಆಗಿರುವ ಹಿನ್ನಲೆಯಲ್ಲಿ ನಗರ ಪಂಚಾಯತ್ ಸದಸ್ಯರು ಮತ್ತಿತರ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ನಗರದ ಕಸವನ್ನು ನಗರ ಪಂಚಾಯಿತಿ ಮುಂಭಾಗದ ಕಟ್ಟಡದಲ್ಲಿ ತುಂಬಿಟ್ಟ ಕಾರಣ ನಗರ ಪಂಚಾಯಿತಿ ಪರಿಸರ ಅಕ್ಷರಷಃ ಡಂಪಿಂಗ್ ಯಾರ್ಡ್ ಆಗಿ ಪರಿವರ್ತನೆಯಾಗಿತ್ತು. ನಗರ ಪಂಚಾಯಿತಿ ಆವರಣದಲ್ಲಿ ಕಸ ತುಂಬಿಡುವುದು ಭಾರೀ ವಿವಾದ ಸೃಷ್ಟಿಸಿದ ಹಿನ್ನಲೆಯಲ್ಲಿ ನಗರ ಪಂಚಾಯಿತಿ ಕಸ ವಿಲೇವಾರಿಗೆ ಮುಂದಾಗಿದೆ. ಲಾರಿಗಳಲ್ಲಿ ತುಂಬಿ ಕಸವನ್ನು ಬೇರೆಡೆಗೆ ಸಾಗಿಸಿ ವಿಲೇವಾರಿ ಮಾಡಲು ಆರಂಭಿಸಿತ್ತು. ಆದರೆ ಎರಡು ದಿನ ಸಾಗಾಟದ ಬಳಿಕ ಸ್ಥಗಿತಗೊಂಡಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

2 hours ago

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…

2 hours ago

ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…

2 hours ago

ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ

ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…

2 hours ago

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…

2 hours ago

ಚಾಲಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ | ಗಂಭೀರವಾಗಿ ಪರಿಗಣಿಸಿದ ಆರೋಗ್ಯ ಇಲಾಖೆ

ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಕುರಿತಂತೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ ಎಂದು ಆರೋಗ್ಯ…

2 hours ago