Advertisement
ಸುದ್ದಿಗಳು

ನಗರ ಪಂಚಾಯತ್ ನ ಕಸ ತೆರವು ಕಾರ್ಯಾಚರಣೆ ಸ್ಥಗಿತ; ರುಧ್ರಭೂಮಿಯಲ್ಲಿ ಕಸ ಹಾಕಿರುವುದಕ್ಕೆ ಸಾರ್ವಜನಿಕರ ವಿರೋಧ

Share

ಸುಳ್ಯ: ತ್ಯಾಜ್ಯ ಹಾಕಲು ಸ್ಥಳವಿಲ್ಲ ಎಂದು ನಗರ ಪಂಚಾಯಿತಿ ಆವರಣದಲ್ಲಿಯೇ ತುಂಬಿಡಲಾಗಿದ್ದ ತ್ಯಾಜ್ಯವನ್ನು ತೆರವು ಮಾಡುವ ಕಾರ್ಯಾಚರಣೆ ಸ್ಥಗಿತಗೊಂಡಿದೆ‌. ನಗರ ಪಂಚಾಯತ್ ಮುಂಭಾಗದ ಕಟ್ಟದಿಂದ ಕೆಲವು ಲೋಡ್ ಕಸವನ್ನು ಲಾರಿಯಲ್ಲಿ ಸಾಗಾಟ ಮಾಡಲಾಗಿದ್ದರೂ ಎರಡು ದಿನಗಳ ಬಳಿಕ ಅದು ಸ್ಥಗಿತಗೊಂಡಿದೆ. ಈ ಮಧ್ಯೆ ಕೆಲವು ಲೋಡ್ ಕಸವನ್ನು ಜಯನಗರದ ಸ್ಮಶಾನದ ಆವರಣದ ಒಳಗಡೆ ರಾಶಿ ಹಾಕಿದ್ದು ವಿವಾದಕ್ಕೆ ಕಾರಣವಾಗಿದೆ.

ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ಭಟ್ ನೇತೃತ್ವದಲ್ಲಿ ಸ್ಥಳೀಯರು ಜಮಾಯಿಸಿ ಕಸ ಹಾಕಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಮಶಾನದ ಸ್ಥಳದಲ್ಲಿ ಕಸ ಹಾಕಿ ಮಲಿನಗೊಳಿಸುವುದನ್ನು ತೀವ್ರವಾಗಿ ವಿರೋಧಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಸ್ಮಶಾನದ ಆವರಣದಿಂದ ಕಸವನ್ನು ಕೂಡಲೇ ತೆರವು ಮಾಡಬೇಕು, ಇಲ್ಲದಿದ್ದರೆ ಪ್ರತಿಭಟನೆ ನಡೆಸುವುದಾಗಿ ಬಾಲಕೃಷ್ಣ ಭಟ್ ಹೇಳಿದರು. ಜಯನಗರದ ಸ್ಥಳೀಯರು ಕೆಲವರು ಶುಕ್ರವಾರ ಬೆಳಿಗ್ಗೆ ನಗರ ಪಂಚಾಯತ್ ಕಚೇರಿಗೆ ಆಗಮಿಸಿ ಸ್ಮಶಾನದ ಆವರಣದಲ್ಲಿ ಕಸ ಹಾಕಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಕಸ ಹಾಕಿರುವುದು ವಿವಾದ ಆಗಿರುವ ಹಿನ್ನಲೆಯಲ್ಲಿ ನಗರ ಪಂಚಾಯತ್ ಸದಸ್ಯರು ಮತ್ತಿತರ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ನಗರದ ಕಸವನ್ನು ನಗರ ಪಂಚಾಯಿತಿ ಮುಂಭಾಗದ ಕಟ್ಟಡದಲ್ಲಿ ತುಂಬಿಟ್ಟ ಕಾರಣ ನಗರ ಪಂಚಾಯಿತಿ ಪರಿಸರ ಅಕ್ಷರಷಃ ಡಂಪಿಂಗ್ ಯಾರ್ಡ್ ಆಗಿ ಪರಿವರ್ತನೆಯಾಗಿತ್ತು. ನಗರ ಪಂಚಾಯಿತಿ ಆವರಣದಲ್ಲಿ ಕಸ ತುಂಬಿಡುವುದು ಭಾರೀ ವಿವಾದ ಸೃಷ್ಟಿಸಿದ ಹಿನ್ನಲೆಯಲ್ಲಿ ನಗರ ಪಂಚಾಯಿತಿ ಕಸ ವಿಲೇವಾರಿಗೆ ಮುಂದಾಗಿದೆ. ಲಾರಿಗಳಲ್ಲಿ ತುಂಬಿ ಕಸವನ್ನು ಬೇರೆಡೆಗೆ ಸಾಗಿಸಿ ವಿಲೇವಾರಿ ಮಾಡಲು ಆರಂಭಿಸಿತ್ತು. ಆದರೆ ಎರಡು ದಿನ ಸಾಗಾಟದ ಬಳಿಕ ಸ್ಥಗಿತಗೊಂಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

11 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

19 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

1 day ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

1 day ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

1 day ago