Advertisement
ಸುದ್ದಿಗಳು

ನಗರ ಪಂಚಾಯತ್ ನ ಕಸ ತೆರವು ಕಾರ್ಯಾಚರಣೆ ಸ್ಥಗಿತ; ರುಧ್ರಭೂಮಿಯಲ್ಲಿ ಕಸ ಹಾಕಿರುವುದಕ್ಕೆ ಸಾರ್ವಜನಿಕರ ವಿರೋಧ

Share

ಸುಳ್ಯ: ತ್ಯಾಜ್ಯ ಹಾಕಲು ಸ್ಥಳವಿಲ್ಲ ಎಂದು ನಗರ ಪಂಚಾಯಿತಿ ಆವರಣದಲ್ಲಿಯೇ ತುಂಬಿಡಲಾಗಿದ್ದ ತ್ಯಾಜ್ಯವನ್ನು ತೆರವು ಮಾಡುವ ಕಾರ್ಯಾಚರಣೆ ಸ್ಥಗಿತಗೊಂಡಿದೆ‌. ನಗರ ಪಂಚಾಯತ್ ಮುಂಭಾಗದ ಕಟ್ಟದಿಂದ ಕೆಲವು ಲೋಡ್ ಕಸವನ್ನು ಲಾರಿಯಲ್ಲಿ ಸಾಗಾಟ ಮಾಡಲಾಗಿದ್ದರೂ ಎರಡು ದಿನಗಳ ಬಳಿಕ ಅದು ಸ್ಥಗಿತಗೊಂಡಿದೆ. ಈ ಮಧ್ಯೆ ಕೆಲವು ಲೋಡ್ ಕಸವನ್ನು ಜಯನಗರದ ಸ್ಮಶಾನದ ಆವರಣದ ಒಳಗಡೆ ರಾಶಿ ಹಾಕಿದ್ದು ವಿವಾದಕ್ಕೆ ಕಾರಣವಾಗಿದೆ.

ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ಭಟ್ ನೇತೃತ್ವದಲ್ಲಿ ಸ್ಥಳೀಯರು ಜಮಾಯಿಸಿ ಕಸ ಹಾಕಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಮಶಾನದ ಸ್ಥಳದಲ್ಲಿ ಕಸ ಹಾಕಿ ಮಲಿನಗೊಳಿಸುವುದನ್ನು ತೀವ್ರವಾಗಿ ವಿರೋಧಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಸ್ಮಶಾನದ ಆವರಣದಿಂದ ಕಸವನ್ನು ಕೂಡಲೇ ತೆರವು ಮಾಡಬೇಕು, ಇಲ್ಲದಿದ್ದರೆ ಪ್ರತಿಭಟನೆ ನಡೆಸುವುದಾಗಿ ಬಾಲಕೃಷ್ಣ ಭಟ್ ಹೇಳಿದರು. ಜಯನಗರದ ಸ್ಥಳೀಯರು ಕೆಲವರು ಶುಕ್ರವಾರ ಬೆಳಿಗ್ಗೆ ನಗರ ಪಂಚಾಯತ್ ಕಚೇರಿಗೆ ಆಗಮಿಸಿ ಸ್ಮಶಾನದ ಆವರಣದಲ್ಲಿ ಕಸ ಹಾಕಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಕಸ ಹಾಕಿರುವುದು ವಿವಾದ ಆಗಿರುವ ಹಿನ್ನಲೆಯಲ್ಲಿ ನಗರ ಪಂಚಾಯತ್ ಸದಸ್ಯರು ಮತ್ತಿತರ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ನಗರದ ಕಸವನ್ನು ನಗರ ಪಂಚಾಯಿತಿ ಮುಂಭಾಗದ ಕಟ್ಟಡದಲ್ಲಿ ತುಂಬಿಟ್ಟ ಕಾರಣ ನಗರ ಪಂಚಾಯಿತಿ ಪರಿಸರ ಅಕ್ಷರಷಃ ಡಂಪಿಂಗ್ ಯಾರ್ಡ್ ಆಗಿ ಪರಿವರ್ತನೆಯಾಗಿತ್ತು. ನಗರ ಪಂಚಾಯಿತಿ ಆವರಣದಲ್ಲಿ ಕಸ ತುಂಬಿಡುವುದು ಭಾರೀ ವಿವಾದ ಸೃಷ್ಟಿಸಿದ ಹಿನ್ನಲೆಯಲ್ಲಿ ನಗರ ಪಂಚಾಯಿತಿ ಕಸ ವಿಲೇವಾರಿಗೆ ಮುಂದಾಗಿದೆ. ಲಾರಿಗಳಲ್ಲಿ ತುಂಬಿ ಕಸವನ್ನು ಬೇರೆಡೆಗೆ ಸಾಗಿಸಿ ವಿಲೇವಾರಿ ಮಾಡಲು ಆರಂಭಿಸಿತ್ತು. ಆದರೆ ಎರಡು ದಿನ ಸಾಗಾಟದ ಬಳಿಕ ಸ್ಥಗಿತಗೊಂಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

16 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

1 day ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

1 day ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago