ಸುಳ್ಯ: ತ್ಯಾಜ್ಯ ಹಾಕಲು ಸ್ಥಳವಿಲ್ಲ ಎಂದು ನಗರ ಪಂಚಾಯಿತಿ ಆವರಣದಲ್ಲಿಯೇ ತುಂಬಿಡಲಾಗಿದ್ದ ತ್ಯಾಜ್ಯವನ್ನು ತೆರವು ಮಾಡುವ ಕಾರ್ಯಾಚರಣೆ ಸ್ಥಗಿತಗೊಂಡಿದೆ. ನಗರ ಪಂಚಾಯತ್ ಮುಂಭಾಗದ ಕಟ್ಟದಿಂದ ಕೆಲವು ಲೋಡ್ ಕಸವನ್ನು ಲಾರಿಯಲ್ಲಿ ಸಾಗಾಟ ಮಾಡಲಾಗಿದ್ದರೂ ಎರಡು ದಿನಗಳ ಬಳಿಕ ಅದು ಸ್ಥಗಿತಗೊಂಡಿದೆ. ಈ ಮಧ್ಯೆ ಕೆಲವು ಲೋಡ್ ಕಸವನ್ನು ಜಯನಗರದ ಸ್ಮಶಾನದ ಆವರಣದ ಒಳಗಡೆ ರಾಶಿ ಹಾಕಿದ್ದು ವಿವಾದಕ್ಕೆ ಕಾರಣವಾಗಿದೆ.
ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ಭಟ್ ನೇತೃತ್ವದಲ್ಲಿ ಸ್ಥಳೀಯರು ಜಮಾಯಿಸಿ ಕಸ ಹಾಕಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಮಶಾನದ ಸ್ಥಳದಲ್ಲಿ ಕಸ ಹಾಕಿ ಮಲಿನಗೊಳಿಸುವುದನ್ನು ತೀವ್ರವಾಗಿ ವಿರೋಧಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಸ್ಮಶಾನದ ಆವರಣದಿಂದ ಕಸವನ್ನು ಕೂಡಲೇ ತೆರವು ಮಾಡಬೇಕು, ಇಲ್ಲದಿದ್ದರೆ ಪ್ರತಿಭಟನೆ ನಡೆಸುವುದಾಗಿ ಬಾಲಕೃಷ್ಣ ಭಟ್ ಹೇಳಿದರು. ಜಯನಗರದ ಸ್ಥಳೀಯರು ಕೆಲವರು ಶುಕ್ರವಾರ ಬೆಳಿಗ್ಗೆ ನಗರ ಪಂಚಾಯತ್ ಕಚೇರಿಗೆ ಆಗಮಿಸಿ ಸ್ಮಶಾನದ ಆವರಣದಲ್ಲಿ ಕಸ ಹಾಕಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಕಸ ಹಾಕಿರುವುದು ವಿವಾದ ಆಗಿರುವ ಹಿನ್ನಲೆಯಲ್ಲಿ ನಗರ ಪಂಚಾಯತ್ ಸದಸ್ಯರು ಮತ್ತಿತರ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ನಗರದ ಕಸವನ್ನು ನಗರ ಪಂಚಾಯಿತಿ ಮುಂಭಾಗದ ಕಟ್ಟಡದಲ್ಲಿ ತುಂಬಿಟ್ಟ ಕಾರಣ ನಗರ ಪಂಚಾಯಿತಿ ಪರಿಸರ ಅಕ್ಷರಷಃ ಡಂಪಿಂಗ್ ಯಾರ್ಡ್ ಆಗಿ ಪರಿವರ್ತನೆಯಾಗಿತ್ತು. ನಗರ ಪಂಚಾಯಿತಿ ಆವರಣದಲ್ಲಿ ಕಸ ತುಂಬಿಡುವುದು ಭಾರೀ ವಿವಾದ ಸೃಷ್ಟಿಸಿದ ಹಿನ್ನಲೆಯಲ್ಲಿ ನಗರ ಪಂಚಾಯಿತಿ ಕಸ ವಿಲೇವಾರಿಗೆ ಮುಂದಾಗಿದೆ. ಲಾರಿಗಳಲ್ಲಿ ತುಂಬಿ ಕಸವನ್ನು ಬೇರೆಡೆಗೆ ಸಾಗಿಸಿ ವಿಲೇವಾರಿ ಮಾಡಲು ಆರಂಭಿಸಿತ್ತು. ಆದರೆ ಎರಡು ದಿನ ಸಾಗಾಟದ ಬಳಿಕ ಸ್ಥಗಿತಗೊಂಡಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…