ಸುಳ್ಯ: ಸುಳ್ಯದಿಂದ ಆಲೆಟ್ಟಿ ಮಾರ್ಗವಾಗಿ ಪಾಣತ್ತೂರು, ಬಂದಡ್ಕ ಸಂಪರ್ಕ ಕಲ್ಪಿಸುವ ಅಂತಾರಾಜ್ಯ ರಸ್ತೆ ನಾಗಪಟ್ಟಣ ಸೇತುವೆಯಿಂದ ಕಲ್ಲುಮುಟ್ಲು ರಸ್ತೆಯ ತಿರುವಿನವರೆಗೆ ತೀರಾ ಹದಗೆಟ್ಟು ಸಂಚಾರಕ್ಕೆ ಅಯೋಗ್ಯಕರವಾಗಿದೆ. ಈ ವರ್ಷ ಸುರಿದ ಮಳೆಗೆ ರಸ್ತೆಯೆ ಪೂರ್ತಿ ಹೊಂಡ ಗುಂಡಿಯಾಗಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ .
ನ.ಪಂ.ವ್ಯಾಪ್ತಿಯಲ್ಲಿ ಇರುವ ಈ ರಸ್ತೆಯ ಭಾಗ ಗುರುಂಪು ತನಕ ಸಂಪೂರ್ಣ ಕಾಂಕ್ರೀಟೀಕರಣ ಮಾಡಲಾಗಿದೆ. ಅಲ್ಲಿಂದ ಕೇವಲ 400 ಮೀಟರ್ ಉಳಿದ ಭಾಗದ ರಸ್ತೆಯನ್ನು ಕಾಂಕ್ರೀಟೀಕರಣ ಮಾಡಿದರೆ ನರಕಯಾತನೆಯ ಸಂಚಾರಕ್ಕೆ ಮುಕ್ತಿ ಸಿಗುತ್ತದೆ. ಈ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಗಮನಹರಿಸಿ ಅಂತರ್ ರಾಜ್ಯ ಸಂಪರ್ಕದ ಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸುವಲ್ಲಿ ಮುತುವರ್ಜಿ ವಹಿಸಿ ಶೀಘ್ರವಾಗಿ ಕಾರ್ಯಪ್ರವೃತ್ತರಾಗುವಂತೆ ವಾಹನ ಸವಾರರು ಹಾಗೂ ನಾಗರೀಕರು ಆಗ್ರಹಿಸಿರುತ್ತಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…