ಸುಳ್ಯ: ಸುಳ್ಯದಿಂದ ಆಲೆಟ್ಟಿ ಮಾರ್ಗವಾಗಿ ಪಾಣತ್ತೂರು, ಬಂದಡ್ಕ ಸಂಪರ್ಕ ಕಲ್ಪಿಸುವ ಅಂತಾರಾಜ್ಯ ರಸ್ತೆ ನಾಗಪಟ್ಟಣ ಸೇತುವೆಯಿಂದ ಕಲ್ಲುಮುಟ್ಲು ರಸ್ತೆಯ ತಿರುವಿನವರೆಗೆ ತೀರಾ ಹದಗೆಟ್ಟು ಸಂಚಾರಕ್ಕೆ ಅಯೋಗ್ಯಕರವಾಗಿದೆ. ಈ ವರ್ಷ ಸುರಿದ ಮಳೆಗೆ ರಸ್ತೆಯೆ ಪೂರ್ತಿ ಹೊಂಡ ಗುಂಡಿಯಾಗಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ .
ನ.ಪಂ.ವ್ಯಾಪ್ತಿಯಲ್ಲಿ ಇರುವ ಈ ರಸ್ತೆಯ ಭಾಗ ಗುರುಂಪು ತನಕ ಸಂಪೂರ್ಣ ಕಾಂಕ್ರೀಟೀಕರಣ ಮಾಡಲಾಗಿದೆ. ಅಲ್ಲಿಂದ ಕೇವಲ 400 ಮೀಟರ್ ಉಳಿದ ಭಾಗದ ರಸ್ತೆಯನ್ನು ಕಾಂಕ್ರೀಟೀಕರಣ ಮಾಡಿದರೆ ನರಕಯಾತನೆಯ ಸಂಚಾರಕ್ಕೆ ಮುಕ್ತಿ ಸಿಗುತ್ತದೆ. ಈ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಗಮನಹರಿಸಿ ಅಂತರ್ ರಾಜ್ಯ ಸಂಪರ್ಕದ ಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸುವಲ್ಲಿ ಮುತುವರ್ಜಿ ವಹಿಸಿ ಶೀಘ್ರವಾಗಿ ಕಾರ್ಯಪ್ರವೃತ್ತರಾಗುವಂತೆ ವಾಹನ ಸವಾರರು ಹಾಗೂ ನಾಗರೀಕರು ಆಗ್ರಹಿಸಿರುತ್ತಾರೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…