ಗುತ್ತಿಗಾರು: ಗ್ರಾಮ ಅರಣ್ಯ ಸಮಿತಿ ನಾಲ್ಕೂರು ಮತ್ತು ವಿವಿಧ ಸಂಘ ಸಂಸ್ಥೆಗಳ ವತಿಯಿಂದ ನಡುಗಲ್ಲು ಶಾಲೆಯಲ್ಲಿ ವನಮಹೋತ್ಸವ ಆಚರಣೆ ಮತ್ತು ನಿವೃತ್ತ ಅರನ್ಯಾಧಿಕಾರಿ ಶಿವಶಂಕರ ಬಳ್ಪ ಅವರಿಗೆ ಬೀಳ್ಕೊಡುವ ಸಮಾರಂಭವು ನಡೆಯಿತು.
ಕಾರ್ಯಕ್ರಮದಲ್ಲಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ವಿಜಯಕುಮಾರ್ ಚಾರ್ಮತ, ಶಾಲಾ ಮುಖ್ಯ ಗುರುಗಳಾದ ವಸಂತಿ, ಮತ್ತು ಎಸ್ಡಿಎಂಸಿ ಅಧ್ಯಕ್ಷ ಸುಬ್ರಹ್ಮಣ್ಯ ಡಿ., ಕೃಷಿಕ ರವೀಂದ್ರ ಕೊರಂಬಟ, ಭಜನಾ ಮಂಡಳಿ ಅಧ್ಯಕ್ಷ ಸುಬ್ರಹ್ಮಣ್ಯ ಪಾಲ್ತಾಡು, ಎಪಿಎಂಸಿ ಸದಸ್ಯ ಬಾಲಕೃಷ್ಣ ಉಜಿರಡ್ಕ, ಯುವಕ ಮಂಡಲದ ಅಧ್ಯಕ್ಷ ಕೇಶರಾಜ, ಒಕ್ಕೂಟದ ಅಧ್ಯಕ್ಷ ಸತೀಶ್ ಬೊಂಬುಳಿ, ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ಕಿಶೋರಿ ಚಾರ್ಮತ, ಮಹಿಳಾ ಮಂಡಲದ ಅಧ್ಯಕ್ಷೆ ಉಮೇಶ್ವರಿ ಎನ್. ಕೆ., ನವೀನ ಬಾಳುಗೋಡು, ಸ್ವಸಹಾಯ ಸಂಘದ ಸದಸ್ಯರು, ಅರಣ್ಯ ಇಲಾಖೆ ಸಿಬ್ಬಂದಿಗಳಾದ ಧನಂಜಯ ಕುಕ್ಕುಡೇಲು, ವೀರಭದ್ರಯ್ಯ ಕರಣಿಮಠ, ಶೋಭಿತ್ ಕುಮಾರ್ , ಪೋಷಕರು, ಗ್ರಾಮಸ್ಥರು ಉಪಸ್ಥಿತರಿದ್ದರು.
ರವೀಂದ್ರ ಕೊರಂಬಟ ಶಿವಶಂಕರ ದಂಪತಿಗಳನ್ನು ಸನ್ಮಾನಿಸಿದರು. ಸುಬ್ರಹ್ಮಣ್ಯ ದೇರಪಜ್ಜನಮನೆ ಸ್ವಾಗತಿಸಿ, ಶಿಕ್ಷಕಿ ಕುಸುಮಾವತಿ ವಂದಿಸಿದರು. ಶಿಕ್ಷಕಿ ವನಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…