ಸುದ್ದಿಗಳು

ನದಿ ಬದಿಯಲ್ಲಿ ತ್ಯಾಜ್ಯ ಎಸೆದವರಿಗೆ 5 ಸಾವಿರ ದಂಡ !

Share

ಸುಳ್ಯ: ಹೋಟೆಲ್ ತ್ಯಾಜ್ಯವನ್ನು ನದಿ ಬದಿಯಲ್ಲಿ ಎಸೆದವರಿಗೆ 5 ಸಾವಿರ ರೂ ದಂಡ ವಿಧಿಸಲಾಗಿದೆ. ತ್ಯಾಜ್ಯ ವಿಲೇವಾರಿ ಮತ್ತು ಪ್ಲಾಸ್ಟಿಕ್ ನಿಷೇಧದ ಬಗ್ಗೆ ಕಠಿಣ ನಿಲುವು ತಳೆದಿರುವ ತಾಲೂಕು ಆಡಳಿತ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಹೋಟೆಲ್ ತ್ಯಾಜ್ಯವನ್ನು ಕಾಂತಮಂಗಲದಲ್ಲಿ ಪಯಸ್ವಿನಿ ನದಿಗೆ ಎಸೆಯುತ್ತಿದ್ದಾರೆಂಬ ಮಾಹಿತಿ ಪಡೆದ ಸುಳ್ಯ ಪೋಲೀಸರು ಧಾಳಿ ನಡೆಸಿ ತ್ಯಾಜ್ಯ ಎಸೆದವರನ್ನು ವಶಕ್ಕೆ ಪಡೆದು ಕೇಸು ದಾಖಲಿಸಿ ತಹಶೀಲ್ದಾರ್ ಮುಂದೆ ಹಾಜರು ಪಡೆಸಿದರು. ಈ ಆರೋಪಿಗಳಿಗೆ ತಹಶೀಲ್ದಾರ್ 5 ಸಾವಿರ ರೂ ದಂಡ ವಿಧಿಸಿ ಆದೇಶ ನೀಡಿದರು.

Advertisement
Advertisement

ಕಾಂತಮಂಗಲದಲ್ಲಿ ಪಯಸ್ವಿನಿ ನದಿಯ ಬದಿಯಲ್ಲಿ ಹೋಟೆಲ್ ತ್ಯಾಜ್ಯ ಹಾಗೂ ಅದರ ಜತೆ ಕೋಳಿ ತ್ಯಾಜ್ಯ ವನ್ನು ಹಾಕಲಾಗುತ್ತಿತ್ತು. ವಾಹನದಲ್ಲಿ ತಂದು ಹೋಟೆಲ್ ತ್ಯಾಜ್ಯವನ್ನು ಎಸೆಯುವುದು ಗಮನಕ್ಕೆ ಬಂದ ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದರು. ಎಸ್ಐ .ಎಂ.ಆರ್.ಹರೀಶ್ ನಿರ್ದೇಶನದ ಮೇರೆಗೆ ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು ತ್ಯಾಜ್ಯ ಎಸೆದ ಆರು ಮಂದಿಯನ್ನು ವಶಕ್ಕೆ ಪಡೆದು ಕೇಸು ದಾಖಲಿಸಿ ತಹಶೀಲ್ದಾರ್ ಎದುರು ಹಾಜರು ಪಡಿಸಿದರು.

ಸುಳ್ಯ ನಗರದ ಇತರೆಡೆಯಲ್ಲಿಯೂ ತ್ಯಾಜ್ಯ ಎಸೆಯುವ ಮಾಹಿತಿ ಇದೆ. ನಾವು ಎಲ್ಲ ಕಡೆ ನಿಗಾ ವಹಿಸಲಾಗುತ್ತಿದ್ದು ಕಸ ಎಸೆಯುವುದು ಗಮನಕ್ಕೆ ಬಂದರೆ ಸಾರ್ವಜನಿಕರು ಕೂಡಾ ಮಾಹಿತಿ ನೀಡಬೇಕು ಎಂದು ಪೋಲೀಸರು ತಿಳಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಹಶೀಲ್ದಾರ್ ಎನ್.ಎ‌.ಕುಂಞಿ ಅಹಮ್ಮದ್ ಎಚ್ಚರಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |

ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…

5 hours ago

ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ

ರಾಜ್ಯದಲ್ಲಿ  ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು  ಆರೋಗ್ಯ ಸಚಿವ…

8 hours ago

ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…

12 hours ago

ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ  ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…

12 hours ago

ಸಿಂಹ ರಾಶಿಯನ್ನು ಪ್ರವೇಶಿಸಲಿರುವ ಮಂಗಳ | ಜೂನ್ 7 ರಿಂದ 3 ರಾಶಿಯವರಿಗೆ ಶುಭ ಫಲ

2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…

12 hours ago

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

2 days ago