Advertisement
ಸುದ್ದಿಗಳು

ನದಿ ಬದಿಯಲ್ಲಿ ತ್ಯಾಜ್ಯ ಎಸೆದವರಿಗೆ 5 ಸಾವಿರ ದಂಡ !

Share

ಸುಳ್ಯ: ಹೋಟೆಲ್ ತ್ಯಾಜ್ಯವನ್ನು ನದಿ ಬದಿಯಲ್ಲಿ ಎಸೆದವರಿಗೆ 5 ಸಾವಿರ ರೂ ದಂಡ ವಿಧಿಸಲಾಗಿದೆ. ತ್ಯಾಜ್ಯ ವಿಲೇವಾರಿ ಮತ್ತು ಪ್ಲಾಸ್ಟಿಕ್ ನಿಷೇಧದ ಬಗ್ಗೆ ಕಠಿಣ ನಿಲುವು ತಳೆದಿರುವ ತಾಲೂಕು ಆಡಳಿತ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಹೋಟೆಲ್ ತ್ಯಾಜ್ಯವನ್ನು ಕಾಂತಮಂಗಲದಲ್ಲಿ ಪಯಸ್ವಿನಿ ನದಿಗೆ ಎಸೆಯುತ್ತಿದ್ದಾರೆಂಬ ಮಾಹಿತಿ ಪಡೆದ ಸುಳ್ಯ ಪೋಲೀಸರು ಧಾಳಿ ನಡೆಸಿ ತ್ಯಾಜ್ಯ ಎಸೆದವರನ್ನು ವಶಕ್ಕೆ ಪಡೆದು ಕೇಸು ದಾಖಲಿಸಿ ತಹಶೀಲ್ದಾರ್ ಮುಂದೆ ಹಾಜರು ಪಡೆಸಿದರು. ಈ ಆರೋಪಿಗಳಿಗೆ ತಹಶೀಲ್ದಾರ್ 5 ಸಾವಿರ ರೂ ದಂಡ ವಿಧಿಸಿ ಆದೇಶ ನೀಡಿದರು.

ಕಾಂತಮಂಗಲದಲ್ಲಿ ಪಯಸ್ವಿನಿ ನದಿಯ ಬದಿಯಲ್ಲಿ ಹೋಟೆಲ್ ತ್ಯಾಜ್ಯ ಹಾಗೂ ಅದರ ಜತೆ ಕೋಳಿ ತ್ಯಾಜ್ಯ ವನ್ನು ಹಾಕಲಾಗುತ್ತಿತ್ತು. ವಾಹನದಲ್ಲಿ ತಂದು ಹೋಟೆಲ್ ತ್ಯಾಜ್ಯವನ್ನು ಎಸೆಯುವುದು ಗಮನಕ್ಕೆ ಬಂದ ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದರು. ಎಸ್ಐ .ಎಂ.ಆರ್.ಹರೀಶ್ ನಿರ್ದೇಶನದ ಮೇರೆಗೆ ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು ತ್ಯಾಜ್ಯ ಎಸೆದ ಆರು ಮಂದಿಯನ್ನು ವಶಕ್ಕೆ ಪಡೆದು ಕೇಸು ದಾಖಲಿಸಿ ತಹಶೀಲ್ದಾರ್ ಎದುರು ಹಾಜರು ಪಡಿಸಿದರು.

ಸುಳ್ಯ ನಗರದ ಇತರೆಡೆಯಲ್ಲಿಯೂ ತ್ಯಾಜ್ಯ ಎಸೆಯುವ ಮಾಹಿತಿ ಇದೆ. ನಾವು ಎಲ್ಲ ಕಡೆ ನಿಗಾ ವಹಿಸಲಾಗುತ್ತಿದ್ದು ಕಸ ಎಸೆಯುವುದು ಗಮನಕ್ಕೆ ಬಂದರೆ ಸಾರ್ವಜನಿಕರು ಕೂಡಾ ಮಾಹಿತಿ ನೀಡಬೇಕು ಎಂದು ಪೋಲೀಸರು ತಿಳಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಹಶೀಲ್ದಾರ್ ಎನ್.ಎ‌.ಕುಂಞಿ ಅಹಮ್ಮದ್ ಎಚ್ಚರಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

21 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 day ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago