ಸುಳ್ಯ: ಹೋಟೆಲ್ ತ್ಯಾಜ್ಯವನ್ನು ನದಿ ಬದಿಯಲ್ಲಿ ಎಸೆದವರಿಗೆ 5 ಸಾವಿರ ರೂ ದಂಡ ವಿಧಿಸಲಾಗಿದೆ. ತ್ಯಾಜ್ಯ ವಿಲೇವಾರಿ ಮತ್ತು ಪ್ಲಾಸ್ಟಿಕ್ ನಿಷೇಧದ ಬಗ್ಗೆ ಕಠಿಣ ನಿಲುವು ತಳೆದಿರುವ ತಾಲೂಕು ಆಡಳಿತ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಹೋಟೆಲ್ ತ್ಯಾಜ್ಯವನ್ನು ಕಾಂತಮಂಗಲದಲ್ಲಿ ಪಯಸ್ವಿನಿ ನದಿಗೆ ಎಸೆಯುತ್ತಿದ್ದಾರೆಂಬ ಮಾಹಿತಿ ಪಡೆದ ಸುಳ್ಯ ಪೋಲೀಸರು ಧಾಳಿ ನಡೆಸಿ ತ್ಯಾಜ್ಯ ಎಸೆದವರನ್ನು ವಶಕ್ಕೆ ಪಡೆದು ಕೇಸು ದಾಖಲಿಸಿ ತಹಶೀಲ್ದಾರ್ ಮುಂದೆ ಹಾಜರು ಪಡೆಸಿದರು. ಈ ಆರೋಪಿಗಳಿಗೆ ತಹಶೀಲ್ದಾರ್ 5 ಸಾವಿರ ರೂ ದಂಡ ವಿಧಿಸಿ ಆದೇಶ ನೀಡಿದರು.
ಕಾಂತಮಂಗಲದಲ್ಲಿ ಪಯಸ್ವಿನಿ ನದಿಯ ಬದಿಯಲ್ಲಿ ಹೋಟೆಲ್ ತ್ಯಾಜ್ಯ ಹಾಗೂ ಅದರ ಜತೆ ಕೋಳಿ ತ್ಯಾಜ್ಯ ವನ್ನು ಹಾಕಲಾಗುತ್ತಿತ್ತು. ವಾಹನದಲ್ಲಿ ತಂದು ಹೋಟೆಲ್ ತ್ಯಾಜ್ಯವನ್ನು ಎಸೆಯುವುದು ಗಮನಕ್ಕೆ ಬಂದ ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದರು. ಎಸ್ಐ .ಎಂ.ಆರ್.ಹರೀಶ್ ನಿರ್ದೇಶನದ ಮೇರೆಗೆ ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು ತ್ಯಾಜ್ಯ ಎಸೆದ ಆರು ಮಂದಿಯನ್ನು ವಶಕ್ಕೆ ಪಡೆದು ಕೇಸು ದಾಖಲಿಸಿ ತಹಶೀಲ್ದಾರ್ ಎದುರು ಹಾಜರು ಪಡಿಸಿದರು.
ಸುಳ್ಯ ನಗರದ ಇತರೆಡೆಯಲ್ಲಿಯೂ ತ್ಯಾಜ್ಯ ಎಸೆಯುವ ಮಾಹಿತಿ ಇದೆ. ನಾವು ಎಲ್ಲ ಕಡೆ ನಿಗಾ ವಹಿಸಲಾಗುತ್ತಿದ್ದು ಕಸ ಎಸೆಯುವುದು ಗಮನಕ್ಕೆ ಬಂದರೆ ಸಾರ್ವಜನಿಕರು ಕೂಡಾ ಮಾಹಿತಿ ನೀಡಬೇಕು ಎಂದು ಪೋಲೀಸರು ತಿಳಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಎಚ್ಚರಿಸಿದ್ದಾರೆ.
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…
ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…
ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…
ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು.…
ಹಣದ ಅವಶ್ಯಕತೆಯಿರುವ ಎಲ್ಲರೂ ಬ್ಯಾಂಕ್ ಗಳಲ್ಲಿ ಸಾಲಕ್ಕೆ ಮೊರೆ ಹೋಗಿ ಅಧಿಕ ಬಡ್ಡಿಯನ್ನು…