Advertisement
ಸುದ್ದಿಗಳು

ನದಿ ಬದಿಯಲ್ಲಿ ತ್ಯಾಜ್ಯ ಎಸೆದವರಿಗೆ 5 ಸಾವಿರ ದಂಡ !

Share

ಸುಳ್ಯ: ಹೋಟೆಲ್ ತ್ಯಾಜ್ಯವನ್ನು ನದಿ ಬದಿಯಲ್ಲಿ ಎಸೆದವರಿಗೆ 5 ಸಾವಿರ ರೂ ದಂಡ ವಿಧಿಸಲಾಗಿದೆ. ತ್ಯಾಜ್ಯ ವಿಲೇವಾರಿ ಮತ್ತು ಪ್ಲಾಸ್ಟಿಕ್ ನಿಷೇಧದ ಬಗ್ಗೆ ಕಠಿಣ ನಿಲುವು ತಳೆದಿರುವ ತಾಲೂಕು ಆಡಳಿತ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಹೋಟೆಲ್ ತ್ಯಾಜ್ಯವನ್ನು ಕಾಂತಮಂಗಲದಲ್ಲಿ ಪಯಸ್ವಿನಿ ನದಿಗೆ ಎಸೆಯುತ್ತಿದ್ದಾರೆಂಬ ಮಾಹಿತಿ ಪಡೆದ ಸುಳ್ಯ ಪೋಲೀಸರು ಧಾಳಿ ನಡೆಸಿ ತ್ಯಾಜ್ಯ ಎಸೆದವರನ್ನು ವಶಕ್ಕೆ ಪಡೆದು ಕೇಸು ದಾಖಲಿಸಿ ತಹಶೀಲ್ದಾರ್ ಮುಂದೆ ಹಾಜರು ಪಡೆಸಿದರು. ಈ ಆರೋಪಿಗಳಿಗೆ ತಹಶೀಲ್ದಾರ್ 5 ಸಾವಿರ ರೂ ದಂಡ ವಿಧಿಸಿ ಆದೇಶ ನೀಡಿದರು.

ಕಾಂತಮಂಗಲದಲ್ಲಿ ಪಯಸ್ವಿನಿ ನದಿಯ ಬದಿಯಲ್ಲಿ ಹೋಟೆಲ್ ತ್ಯಾಜ್ಯ ಹಾಗೂ ಅದರ ಜತೆ ಕೋಳಿ ತ್ಯಾಜ್ಯ ವನ್ನು ಹಾಕಲಾಗುತ್ತಿತ್ತು. ವಾಹನದಲ್ಲಿ ತಂದು ಹೋಟೆಲ್ ತ್ಯಾಜ್ಯವನ್ನು ಎಸೆಯುವುದು ಗಮನಕ್ಕೆ ಬಂದ ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದರು. ಎಸ್ಐ .ಎಂ.ಆರ್.ಹರೀಶ್ ನಿರ್ದೇಶನದ ಮೇರೆಗೆ ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು ತ್ಯಾಜ್ಯ ಎಸೆದ ಆರು ಮಂದಿಯನ್ನು ವಶಕ್ಕೆ ಪಡೆದು ಕೇಸು ದಾಖಲಿಸಿ ತಹಶೀಲ್ದಾರ್ ಎದುರು ಹಾಜರು ಪಡಿಸಿದರು.

ಸುಳ್ಯ ನಗರದ ಇತರೆಡೆಯಲ್ಲಿಯೂ ತ್ಯಾಜ್ಯ ಎಸೆಯುವ ಮಾಹಿತಿ ಇದೆ. ನಾವು ಎಲ್ಲ ಕಡೆ ನಿಗಾ ವಹಿಸಲಾಗುತ್ತಿದ್ದು ಕಸ ಎಸೆಯುವುದು ಗಮನಕ್ಕೆ ಬಂದರೆ ಸಾರ್ವಜನಿಕರು ಕೂಡಾ ಮಾಹಿತಿ ನೀಡಬೇಕು ಎಂದು ಪೋಲೀಸರು ತಿಳಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಹಶೀಲ್ದಾರ್ ಎನ್.ಎ‌.ಕುಂಞಿ ಅಹಮ್ಮದ್ ಎಚ್ಚರಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

10 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

21 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

21 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

21 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago