Advertisement
ಸುದ್ದಿಗಳು

ನದಿ ಬದಿಯಲ್ಲಿ ತ್ಯಾಜ್ಯ ಎಸೆದವರಿಗೆ 5 ಸಾವಿರ ದಂಡ !

Share

ಸುಳ್ಯ: ಹೋಟೆಲ್ ತ್ಯಾಜ್ಯವನ್ನು ನದಿ ಬದಿಯಲ್ಲಿ ಎಸೆದವರಿಗೆ 5 ಸಾವಿರ ರೂ ದಂಡ ವಿಧಿಸಲಾಗಿದೆ. ತ್ಯಾಜ್ಯ ವಿಲೇವಾರಿ ಮತ್ತು ಪ್ಲಾಸ್ಟಿಕ್ ನಿಷೇಧದ ಬಗ್ಗೆ ಕಠಿಣ ನಿಲುವು ತಳೆದಿರುವ ತಾಲೂಕು ಆಡಳಿತ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಹೋಟೆಲ್ ತ್ಯಾಜ್ಯವನ್ನು ಕಾಂತಮಂಗಲದಲ್ಲಿ ಪಯಸ್ವಿನಿ ನದಿಗೆ ಎಸೆಯುತ್ತಿದ್ದಾರೆಂಬ ಮಾಹಿತಿ ಪಡೆದ ಸುಳ್ಯ ಪೋಲೀಸರು ಧಾಳಿ ನಡೆಸಿ ತ್ಯಾಜ್ಯ ಎಸೆದವರನ್ನು ವಶಕ್ಕೆ ಪಡೆದು ಕೇಸು ದಾಖಲಿಸಿ ತಹಶೀಲ್ದಾರ್ ಮುಂದೆ ಹಾಜರು ಪಡೆಸಿದರು. ಈ ಆರೋಪಿಗಳಿಗೆ ತಹಶೀಲ್ದಾರ್ 5 ಸಾವಿರ ರೂ ದಂಡ ವಿಧಿಸಿ ಆದೇಶ ನೀಡಿದರು.

ಕಾಂತಮಂಗಲದಲ್ಲಿ ಪಯಸ್ವಿನಿ ನದಿಯ ಬದಿಯಲ್ಲಿ ಹೋಟೆಲ್ ತ್ಯಾಜ್ಯ ಹಾಗೂ ಅದರ ಜತೆ ಕೋಳಿ ತ್ಯಾಜ್ಯ ವನ್ನು ಹಾಕಲಾಗುತ್ತಿತ್ತು. ವಾಹನದಲ್ಲಿ ತಂದು ಹೋಟೆಲ್ ತ್ಯಾಜ್ಯವನ್ನು ಎಸೆಯುವುದು ಗಮನಕ್ಕೆ ಬಂದ ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದರು. ಎಸ್ಐ .ಎಂ.ಆರ್.ಹರೀಶ್ ನಿರ್ದೇಶನದ ಮೇರೆಗೆ ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು ತ್ಯಾಜ್ಯ ಎಸೆದ ಆರು ಮಂದಿಯನ್ನು ವಶಕ್ಕೆ ಪಡೆದು ಕೇಸು ದಾಖಲಿಸಿ ತಹಶೀಲ್ದಾರ್ ಎದುರು ಹಾಜರು ಪಡಿಸಿದರು.

ಸುಳ್ಯ ನಗರದ ಇತರೆಡೆಯಲ್ಲಿಯೂ ತ್ಯಾಜ್ಯ ಎಸೆಯುವ ಮಾಹಿತಿ ಇದೆ. ನಾವು ಎಲ್ಲ ಕಡೆ ನಿಗಾ ವಹಿಸಲಾಗುತ್ತಿದ್ದು ಕಸ ಎಸೆಯುವುದು ಗಮನಕ್ಕೆ ಬಂದರೆ ಸಾರ್ವಜನಿಕರು ಕೂಡಾ ಮಾಹಿತಿ ನೀಡಬೇಕು ಎಂದು ಪೋಲೀಸರು ತಿಳಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಹಶೀಲ್ದಾರ್ ಎನ್.ಎ‌.ಕುಂಞಿ ಅಹಮ್ಮದ್ ಎಚ್ಚರಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

5 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

12 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

20 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

21 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

21 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

1 day ago