ಸುಳ್ಯ: ಹೋಟೆಲ್ ತ್ಯಾಜ್ಯವನ್ನು ನದಿ ಬದಿಯಲ್ಲಿ ಎಸೆದವರಿಗೆ 5 ಸಾವಿರ ರೂ ದಂಡ ವಿಧಿಸಲಾಗಿದೆ. ತ್ಯಾಜ್ಯ ವಿಲೇವಾರಿ ಮತ್ತು ಪ್ಲಾಸ್ಟಿಕ್ ನಿಷೇಧದ ಬಗ್ಗೆ ಕಠಿಣ ನಿಲುವು ತಳೆದಿರುವ ತಾಲೂಕು ಆಡಳಿತ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಹೋಟೆಲ್ ತ್ಯಾಜ್ಯವನ್ನು ಕಾಂತಮಂಗಲದಲ್ಲಿ ಪಯಸ್ವಿನಿ ನದಿಗೆ ಎಸೆಯುತ್ತಿದ್ದಾರೆಂಬ ಮಾಹಿತಿ ಪಡೆದ ಸುಳ್ಯ ಪೋಲೀಸರು ಧಾಳಿ ನಡೆಸಿ ತ್ಯಾಜ್ಯ ಎಸೆದವರನ್ನು ವಶಕ್ಕೆ ಪಡೆದು ಕೇಸು ದಾಖಲಿಸಿ ತಹಶೀಲ್ದಾರ್ ಮುಂದೆ ಹಾಜರು ಪಡೆಸಿದರು. ಈ ಆರೋಪಿಗಳಿಗೆ ತಹಶೀಲ್ದಾರ್ 5 ಸಾವಿರ ರೂ ದಂಡ ವಿಧಿಸಿ ಆದೇಶ ನೀಡಿದರು.
ಕಾಂತಮಂಗಲದಲ್ಲಿ ಪಯಸ್ವಿನಿ ನದಿಯ ಬದಿಯಲ್ಲಿ ಹೋಟೆಲ್ ತ್ಯಾಜ್ಯ ಹಾಗೂ ಅದರ ಜತೆ ಕೋಳಿ ತ್ಯಾಜ್ಯ ವನ್ನು ಹಾಕಲಾಗುತ್ತಿತ್ತು. ವಾಹನದಲ್ಲಿ ತಂದು ಹೋಟೆಲ್ ತ್ಯಾಜ್ಯವನ್ನು ಎಸೆಯುವುದು ಗಮನಕ್ಕೆ ಬಂದ ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದರು. ಎಸ್ಐ .ಎಂ.ಆರ್.ಹರೀಶ್ ನಿರ್ದೇಶನದ ಮೇರೆಗೆ ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು ತ್ಯಾಜ್ಯ ಎಸೆದ ಆರು ಮಂದಿಯನ್ನು ವಶಕ್ಕೆ ಪಡೆದು ಕೇಸು ದಾಖಲಿಸಿ ತಹಶೀಲ್ದಾರ್ ಎದುರು ಹಾಜರು ಪಡಿಸಿದರು.
ಸುಳ್ಯ ನಗರದ ಇತರೆಡೆಯಲ್ಲಿಯೂ ತ್ಯಾಜ್ಯ ಎಸೆಯುವ ಮಾಹಿತಿ ಇದೆ. ನಾವು ಎಲ್ಲ ಕಡೆ ನಿಗಾ ವಹಿಸಲಾಗುತ್ತಿದ್ದು ಕಸ ಎಸೆಯುವುದು ಗಮನಕ್ಕೆ ಬಂದರೆ ಸಾರ್ವಜನಿಕರು ಕೂಡಾ ಮಾಹಿತಿ ನೀಡಬೇಕು ಎಂದು ಪೋಲೀಸರು ತಿಳಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಎಚ್ಚರಿಸಿದ್ದಾರೆ.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…