ನದಿ ಮಾಲಿನ್ಯ ದೇಶದ್ರೋಹಕ್ಕೆ ಸಮಾನವಾದ ಅಪರಾಧ: ಡಾ. ಪ್ರಭಾಕರ ಶಿಶಿಲ

February 20, 2020
7:20 PM

ಸುಳ್ಯ: ನದಿಗಳು ಜೀವಜಾಲವನ್ನು ಪೋಷಿಸುತ್ತವೆ ಮತ್ತು ಬದುಕಿಸುತ್ತವೆ. ಆದುದರಿಂದ ನದಿಯನ್ನು ಮಾಲಿನ್ಯಗೊಳಿಸುವುದು ದೇಶದ್ರೋಹಕ್ಕೆ ಸಮಾನವಾದ ಅಪರಾಧ. ನದಿ ಮಲಿನಗೊಳಿಸುವವರನ್ನು ಪತ್ತೆಮಾಡಿ ಉಗ್ರಶಿಕ್ಷೆ ನೀಡಬೇಕು ಮತ್ತು ಅತಿ ಹೆಚ್ಚು ದಂಡ ವಸೂಲಿ ಮಾಡಬೇಕು ಎಂದು ಅರ್ಥಶಾಸ್ತ್ರಜ್ಞ ಡಾ. ಪ್ರಭಾಕರ ಶಿಶಿಲ ಅಭಿಪ್ರಾಯಪಟ್ಟರು.

Advertisement
Advertisement
Advertisement

ಅವರು ಕನ್ನಡ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗ ವತಿಯಿಂದ ಪೆರಾಜೆಯಲ್ಲಿ ಏರ್ಪಡಿಸಿದ ‘ನದಿ ಮಾಲಿನ್ಯ ತಡೆಗಟ್ಟುವುದು ಹೇಗೆ’ ಎಂಬ ವಿಚಾರ ಸಂಕಿರಣದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾಡಿದರು. 1974ರ ಮಾಲಿನ್ಯ ತಡೆ ಮತ್ತು ನಿಯಂತ್ರಣ ಕಾಯಿದೆ ಹಾಗೂ 1984ರ ಪರಿಸರ ಸಂರಕ್ಷಣಾ ಕಾಯಿದೆಯ ಪ್ರಕಾರ ಜಲಮಾಲಿನ್ಯ ಉಗ್ರ ಶಿಕಾರ್ಹ ಅಪರಾಧ. ಸುಳ್ಯದ ಜೀವನದಿ ಪಯಸ್ವಿನಿ ಮಾಲಿನ್ಯದಿಂದಾಗಿ ಮೃತನದಿಯಾಗುವುದರಲ್ಲಿದೆ. ತಮ್ಮ ಕಣ್ಣೆದುರಲ್ಲೇ ಸಂಭವಿಸುತ್ತಿರುವ ಈ ಘೋರ ದುರಂತದ ಬಗ್ಗೆ ಜನನಾಯಕರು ಮತ್ತು ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತಾಳಿರುವುದು ಅಕ್ಷಮ್ಯ. ಇನ್ನು ಮುಂದಾದರೂ ಜನಪ್ರತಿನಿಧಿಗಳು ಮತ್ತು ಸಂಬಂಧಿಸಿದ ಅಧಿಕಾರಿಗಳು ಮುಂದಿನ ಪೀಳಿಗೆಗೆ ಪಯಸ್ವಿನಿಯನ್ನು ನಿರ್ಮಲವಾಗಿಸಿ ಕೊಡುಗೆ ನೀಡುವಂತಾಗಲಿ ಎಂದು ಅವರು ಹೇಳಿದರು.

Advertisement

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದ.ಕ. ಜಿಲ್ಲಾ ಸ್ವಾಭಿಮಾನಿ ಬಳಗದ ಅಧ್ಯಕ್ಷ ಮಹಮ್ಮದ್ ಕುಕ್ಕಪಳ್ಳಿ ಮಾತನಾಡಿ ನಮ್ಮ ಸಾಮಾಜಿಕರಿಗೆ ಪರಿಸರ ಮಾಲಿನ್ಯದ ಪರಿವೆಯೇ ಇಲ್ಲ. ನಾವು ಮುಂದಿನ ಪೀಳಿಗೆಗೆ ಎಂತಹ ಬರಡು ಭೂಮಿಯನ್ನು ಬಿಟ್ಟು ಹೋಗುತ್ತಿದ್ದೇವೆ ಎಂದರೆ ಮನುಕುಲದ ಅಂತ್ಯ ಸಮೀಪಿಸಿತೇನೋ ಎಂಬ ಭೀತಿ ಮೂಡುತ್ತಿದೆ ಎಂದರು.

ಉನೈಸ್ ಪೆರಾಜೆ ಅಧ್ಯಕ್ಷತೆ ವಹಿಸಿದ್ದರು. ಮಹಮ್ಮದ್ ಆಲಿ ಪೆರಾಜೆ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಸುರೇಶ ಪೆರಮುಂಡ ಉಪಸ್ಥಿತರಿದ್ದರು. ಅಶೋಕ ಪೀಚೆಮನೆ ಪ್ರಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಸೀತಾರಾಮ ಕದಿಕಡ್ಕ ಪ್ರಾರ್ಥನೆ ಮಾಡಿದರು. ಶರೀಫ್ ಪೆರಾಜೆ ವಂದಿಸಿದರು.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೋವಿಜ್ಞಾನ, ವಿಷಮುಕ್ತ ಕೃಷಿ ಹಾಗೂ ಗ್ರಾಮೋದ್ಯೋಗ ಆಧಾರಿತ ಸ್ವಾವಲಂಬಿ ಗ್ರಾಮ ನಿರ್ಮಾಣದ ಮಹಾ ಶಿಬಿರ
March 20, 2024
4:04 PM
by: The Rural Mirror ಸುದ್ದಿಜಾಲ
ಅರ್ಥಿಕ ಬೆಳೆಯಾಗಿ ಬಿದಿರು | ಬಿದಿರು ಬೆಳೆಸುವ ಕುರಿತು ವಿಚಾರ ವಿನಿಮಯ ಸಭೆ
March 18, 2024
2:05 PM
by: The Rural Mirror ಸುದ್ದಿಜಾಲ
ನಿಮಗೆ ಹಾಲು ಕರೆಯಲು ಬರುತ್ತಾ..? ಹಾಗಾದ್ರೆ ಹಾಲು ಕರೆಯಿರಿ, ಭರ್ಜರಿ ಬಹುಮಾನ ಗೆಲ್ಲಿರಿ..
February 10, 2024
12:18 PM
by: The Rural Mirror ಸುದ್ದಿಜಾಲ
ಲಾಲ್‌ಬಾಗ್‌ ಫ್ಲವರ್‌ ಶೋ | ಪ್ರವಾಸಿಗರನ್ನು ಕೈಬೀಸಿ ಕರೆದ ಸಸ್ಯಕಾಶಿ : ಭರ್ಜರಿ ರೆಸ್ಪಾನ್ಸ್, ಕೋಟಿ ಮೀರಿದ ಆದಾಯ
January 27, 2024
11:51 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror