ಕಾರ್ಯಕ್ರಮಗಳು

ನದಿ ಮಾಲಿನ್ಯ ದೇಶದ್ರೋಹಕ್ಕೆ ಸಮಾನವಾದ ಅಪರಾಧ: ಡಾ. ಪ್ರಭಾಕರ ಶಿಶಿಲ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ನದಿಗಳು ಜೀವಜಾಲವನ್ನು ಪೋಷಿಸುತ್ತವೆ ಮತ್ತು ಬದುಕಿಸುತ್ತವೆ. ಆದುದರಿಂದ ನದಿಯನ್ನು ಮಾಲಿನ್ಯಗೊಳಿಸುವುದು ದೇಶದ್ರೋಹಕ್ಕೆ ಸಮಾನವಾದ ಅಪರಾಧ. ನದಿ ಮಲಿನಗೊಳಿಸುವವರನ್ನು ಪತ್ತೆಮಾಡಿ ಉಗ್ರಶಿಕ್ಷೆ ನೀಡಬೇಕು ಮತ್ತು ಅತಿ ಹೆಚ್ಚು ದಂಡ ವಸೂಲಿ ಮಾಡಬೇಕು ಎಂದು ಅರ್ಥಶಾಸ್ತ್ರಜ್ಞ ಡಾ. ಪ್ರಭಾಕರ ಶಿಶಿಲ ಅಭಿಪ್ರಾಯಪಟ್ಟರು.

Advertisement

ಅವರು ಕನ್ನಡ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗ ವತಿಯಿಂದ ಪೆರಾಜೆಯಲ್ಲಿ ಏರ್ಪಡಿಸಿದ ‘ನದಿ ಮಾಲಿನ್ಯ ತಡೆಗಟ್ಟುವುದು ಹೇಗೆ’ ಎಂಬ ವಿಚಾರ ಸಂಕಿರಣದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾಡಿದರು. 1974ರ ಮಾಲಿನ್ಯ ತಡೆ ಮತ್ತು ನಿಯಂತ್ರಣ ಕಾಯಿದೆ ಹಾಗೂ 1984ರ ಪರಿಸರ ಸಂರಕ್ಷಣಾ ಕಾಯಿದೆಯ ಪ್ರಕಾರ ಜಲಮಾಲಿನ್ಯ ಉಗ್ರ ಶಿಕಾರ್ಹ ಅಪರಾಧ. ಸುಳ್ಯದ ಜೀವನದಿ ಪಯಸ್ವಿನಿ ಮಾಲಿನ್ಯದಿಂದಾಗಿ ಮೃತನದಿಯಾಗುವುದರಲ್ಲಿದೆ. ತಮ್ಮ ಕಣ್ಣೆದುರಲ್ಲೇ ಸಂಭವಿಸುತ್ತಿರುವ ಈ ಘೋರ ದುರಂತದ ಬಗ್ಗೆ ಜನನಾಯಕರು ಮತ್ತು ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತಾಳಿರುವುದು ಅಕ್ಷಮ್ಯ. ಇನ್ನು ಮುಂದಾದರೂ ಜನಪ್ರತಿನಿಧಿಗಳು ಮತ್ತು ಸಂಬಂಧಿಸಿದ ಅಧಿಕಾರಿಗಳು ಮುಂದಿನ ಪೀಳಿಗೆಗೆ ಪಯಸ್ವಿನಿಯನ್ನು ನಿರ್ಮಲವಾಗಿಸಿ ಕೊಡುಗೆ ನೀಡುವಂತಾಗಲಿ ಎಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದ.ಕ. ಜಿಲ್ಲಾ ಸ್ವಾಭಿಮಾನಿ ಬಳಗದ ಅಧ್ಯಕ್ಷ ಮಹಮ್ಮದ್ ಕುಕ್ಕಪಳ್ಳಿ ಮಾತನಾಡಿ ನಮ್ಮ ಸಾಮಾಜಿಕರಿಗೆ ಪರಿಸರ ಮಾಲಿನ್ಯದ ಪರಿವೆಯೇ ಇಲ್ಲ. ನಾವು ಮುಂದಿನ ಪೀಳಿಗೆಗೆ ಎಂತಹ ಬರಡು ಭೂಮಿಯನ್ನು ಬಿಟ್ಟು ಹೋಗುತ್ತಿದ್ದೇವೆ ಎಂದರೆ ಮನುಕುಲದ ಅಂತ್ಯ ಸಮೀಪಿಸಿತೇನೋ ಎಂಬ ಭೀತಿ ಮೂಡುತ್ತಿದೆ ಎಂದರು.

ಉನೈಸ್ ಪೆರಾಜೆ ಅಧ್ಯಕ್ಷತೆ ವಹಿಸಿದ್ದರು. ಮಹಮ್ಮದ್ ಆಲಿ ಪೆರಾಜೆ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಸುರೇಶ ಪೆರಮುಂಡ ಉಪಸ್ಥಿತರಿದ್ದರು. ಅಶೋಕ ಪೀಚೆಮನೆ ಪ್ರಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಸೀತಾರಾಮ ಕದಿಕಡ್ಕ ಪ್ರಾರ್ಥನೆ ಮಾಡಿದರು. ಶರೀಫ್ ಪೆರಾಜೆ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

1 hour ago

ಹೊಸರುಚಿ | ಗುಜ್ಜೆ ಚಟ್ನಿ

ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ 3/4 ಕಪ್ ,ನೀರು…

2 hours ago

ಮಂಗಳ ಗ್ರಹ ಸಂಚಾರ ಯೋಗ | ಈ 7 ರಾಶಿಗೆ ರಾಜಯೋಗ

2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…

2 hours ago

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

12 hours ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

1 day ago