Advertisement
ಕಾರ್ಯಕ್ರಮಗಳು

ನದಿ ಮಾಲಿನ್ಯ ದೇಶದ್ರೋಹಕ್ಕೆ ಸಮಾನವಾದ ಅಪರಾಧ: ಡಾ. ಪ್ರಭಾಕರ ಶಿಶಿಲ

Share

ಸುಳ್ಯ: ನದಿಗಳು ಜೀವಜಾಲವನ್ನು ಪೋಷಿಸುತ್ತವೆ ಮತ್ತು ಬದುಕಿಸುತ್ತವೆ. ಆದುದರಿಂದ ನದಿಯನ್ನು ಮಾಲಿನ್ಯಗೊಳಿಸುವುದು ದೇಶದ್ರೋಹಕ್ಕೆ ಸಮಾನವಾದ ಅಪರಾಧ. ನದಿ ಮಲಿನಗೊಳಿಸುವವರನ್ನು ಪತ್ತೆಮಾಡಿ ಉಗ್ರಶಿಕ್ಷೆ ನೀಡಬೇಕು ಮತ್ತು ಅತಿ ಹೆಚ್ಚು ದಂಡ ವಸೂಲಿ ಮಾಡಬೇಕು ಎಂದು ಅರ್ಥಶಾಸ್ತ್ರಜ್ಞ ಡಾ. ಪ್ರಭಾಕರ ಶಿಶಿಲ ಅಭಿಪ್ರಾಯಪಟ್ಟರು.

ಅವರು ಕನ್ನಡ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗ ವತಿಯಿಂದ ಪೆರಾಜೆಯಲ್ಲಿ ಏರ್ಪಡಿಸಿದ ‘ನದಿ ಮಾಲಿನ್ಯ ತಡೆಗಟ್ಟುವುದು ಹೇಗೆ’ ಎಂಬ ವಿಚಾರ ಸಂಕಿರಣದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾಡಿದರು. 1974ರ ಮಾಲಿನ್ಯ ತಡೆ ಮತ್ತು ನಿಯಂತ್ರಣ ಕಾಯಿದೆ ಹಾಗೂ 1984ರ ಪರಿಸರ ಸಂರಕ್ಷಣಾ ಕಾಯಿದೆಯ ಪ್ರಕಾರ ಜಲಮಾಲಿನ್ಯ ಉಗ್ರ ಶಿಕಾರ್ಹ ಅಪರಾಧ. ಸುಳ್ಯದ ಜೀವನದಿ ಪಯಸ್ವಿನಿ ಮಾಲಿನ್ಯದಿಂದಾಗಿ ಮೃತನದಿಯಾಗುವುದರಲ್ಲಿದೆ. ತಮ್ಮ ಕಣ್ಣೆದುರಲ್ಲೇ ಸಂಭವಿಸುತ್ತಿರುವ ಈ ಘೋರ ದುರಂತದ ಬಗ್ಗೆ ಜನನಾಯಕರು ಮತ್ತು ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತಾಳಿರುವುದು ಅಕ್ಷಮ್ಯ. ಇನ್ನು ಮುಂದಾದರೂ ಜನಪ್ರತಿನಿಧಿಗಳು ಮತ್ತು ಸಂಬಂಧಿಸಿದ ಅಧಿಕಾರಿಗಳು ಮುಂದಿನ ಪೀಳಿಗೆಗೆ ಪಯಸ್ವಿನಿಯನ್ನು ನಿರ್ಮಲವಾಗಿಸಿ ಕೊಡುಗೆ ನೀಡುವಂತಾಗಲಿ ಎಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದ.ಕ. ಜಿಲ್ಲಾ ಸ್ವಾಭಿಮಾನಿ ಬಳಗದ ಅಧ್ಯಕ್ಷ ಮಹಮ್ಮದ್ ಕುಕ್ಕಪಳ್ಳಿ ಮಾತನಾಡಿ ನಮ್ಮ ಸಾಮಾಜಿಕರಿಗೆ ಪರಿಸರ ಮಾಲಿನ್ಯದ ಪರಿವೆಯೇ ಇಲ್ಲ. ನಾವು ಮುಂದಿನ ಪೀಳಿಗೆಗೆ ಎಂತಹ ಬರಡು ಭೂಮಿಯನ್ನು ಬಿಟ್ಟು ಹೋಗುತ್ತಿದ್ದೇವೆ ಎಂದರೆ ಮನುಕುಲದ ಅಂತ್ಯ ಸಮೀಪಿಸಿತೇನೋ ಎಂಬ ಭೀತಿ ಮೂಡುತ್ತಿದೆ ಎಂದರು.

ಉನೈಸ್ ಪೆರಾಜೆ ಅಧ್ಯಕ್ಷತೆ ವಹಿಸಿದ್ದರು. ಮಹಮ್ಮದ್ ಆಲಿ ಪೆರಾಜೆ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಸುರೇಶ ಪೆರಮುಂಡ ಉಪಸ್ಥಿತರಿದ್ದರು. ಅಶೋಕ ಪೀಚೆಮನೆ ಪ್ರಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಸೀತಾರಾಮ ಕದಿಕಡ್ಕ ಪ್ರಾರ್ಥನೆ ಮಾಡಿದರು. ಶರೀಫ್ ಪೆರಾಜೆ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

4 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

14 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

18 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

18 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

19 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…

19 hours ago