Advertisement
ಕಾರ್ಯಕ್ರಮಗಳು

ನದಿ ಮಾಲಿನ್ಯ ದೇಶದ್ರೋಹಕ್ಕೆ ಸಮಾನವಾದ ಅಪರಾಧ: ಡಾ. ಪ್ರಭಾಕರ ಶಿಶಿಲ

Share

ಸುಳ್ಯ: ನದಿಗಳು ಜೀವಜಾಲವನ್ನು ಪೋಷಿಸುತ್ತವೆ ಮತ್ತು ಬದುಕಿಸುತ್ತವೆ. ಆದುದರಿಂದ ನದಿಯನ್ನು ಮಾಲಿನ್ಯಗೊಳಿಸುವುದು ದೇಶದ್ರೋಹಕ್ಕೆ ಸಮಾನವಾದ ಅಪರಾಧ. ನದಿ ಮಲಿನಗೊಳಿಸುವವರನ್ನು ಪತ್ತೆಮಾಡಿ ಉಗ್ರಶಿಕ್ಷೆ ನೀಡಬೇಕು ಮತ್ತು ಅತಿ ಹೆಚ್ಚು ದಂಡ ವಸೂಲಿ ಮಾಡಬೇಕು ಎಂದು ಅರ್ಥಶಾಸ್ತ್ರಜ್ಞ ಡಾ. ಪ್ರಭಾಕರ ಶಿಶಿಲ ಅಭಿಪ್ರಾಯಪಟ್ಟರು.

ಅವರು ಕನ್ನಡ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗ ವತಿಯಿಂದ ಪೆರಾಜೆಯಲ್ಲಿ ಏರ್ಪಡಿಸಿದ ‘ನದಿ ಮಾಲಿನ್ಯ ತಡೆಗಟ್ಟುವುದು ಹೇಗೆ’ ಎಂಬ ವಿಚಾರ ಸಂಕಿರಣದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾಡಿದರು. 1974ರ ಮಾಲಿನ್ಯ ತಡೆ ಮತ್ತು ನಿಯಂತ್ರಣ ಕಾಯಿದೆ ಹಾಗೂ 1984ರ ಪರಿಸರ ಸಂರಕ್ಷಣಾ ಕಾಯಿದೆಯ ಪ್ರಕಾರ ಜಲಮಾಲಿನ್ಯ ಉಗ್ರ ಶಿಕಾರ್ಹ ಅಪರಾಧ. ಸುಳ್ಯದ ಜೀವನದಿ ಪಯಸ್ವಿನಿ ಮಾಲಿನ್ಯದಿಂದಾಗಿ ಮೃತನದಿಯಾಗುವುದರಲ್ಲಿದೆ. ತಮ್ಮ ಕಣ್ಣೆದುರಲ್ಲೇ ಸಂಭವಿಸುತ್ತಿರುವ ಈ ಘೋರ ದುರಂತದ ಬಗ್ಗೆ ಜನನಾಯಕರು ಮತ್ತು ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತಾಳಿರುವುದು ಅಕ್ಷಮ್ಯ. ಇನ್ನು ಮುಂದಾದರೂ ಜನಪ್ರತಿನಿಧಿಗಳು ಮತ್ತು ಸಂಬಂಧಿಸಿದ ಅಧಿಕಾರಿಗಳು ಮುಂದಿನ ಪೀಳಿಗೆಗೆ ಪಯಸ್ವಿನಿಯನ್ನು ನಿರ್ಮಲವಾಗಿಸಿ ಕೊಡುಗೆ ನೀಡುವಂತಾಗಲಿ ಎಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದ.ಕ. ಜಿಲ್ಲಾ ಸ್ವಾಭಿಮಾನಿ ಬಳಗದ ಅಧ್ಯಕ್ಷ ಮಹಮ್ಮದ್ ಕುಕ್ಕಪಳ್ಳಿ ಮಾತನಾಡಿ ನಮ್ಮ ಸಾಮಾಜಿಕರಿಗೆ ಪರಿಸರ ಮಾಲಿನ್ಯದ ಪರಿವೆಯೇ ಇಲ್ಲ. ನಾವು ಮುಂದಿನ ಪೀಳಿಗೆಗೆ ಎಂತಹ ಬರಡು ಭೂಮಿಯನ್ನು ಬಿಟ್ಟು ಹೋಗುತ್ತಿದ್ದೇವೆ ಎಂದರೆ ಮನುಕುಲದ ಅಂತ್ಯ ಸಮೀಪಿಸಿತೇನೋ ಎಂಬ ಭೀತಿ ಮೂಡುತ್ತಿದೆ ಎಂದರು.

ಉನೈಸ್ ಪೆರಾಜೆ ಅಧ್ಯಕ್ಷತೆ ವಹಿಸಿದ್ದರು. ಮಹಮ್ಮದ್ ಆಲಿ ಪೆರಾಜೆ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಸುರೇಶ ಪೆರಮುಂಡ ಉಪಸ್ಥಿತರಿದ್ದರು. ಅಶೋಕ ಪೀಚೆಮನೆ ಪ್ರಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಸೀತಾರಾಮ ಕದಿಕಡ್ಕ ಪ್ರಾರ್ಥನೆ ಮಾಡಿದರು. ಶರೀಫ್ ಪೆರಾಜೆ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ

ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…

10 hours ago

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!

ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…

12 hours ago

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

17 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

20 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

20 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

1 day ago