ಯಕ್ಷಗಾನ : ಮಾತು-ಮಸೆತ

ನನ್ನನ್ನೇ ನಾನು ವಿಕ್ರಯಿಸಿಕೊಳ್ಳುವಾಗ ನನಗಿಷ್ಟು ಮೌಲ್ಯ ಅಂತ ಹೇಳಕೂಡದು…..

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಹರಿಶ್ಚಂದ್ರ)
ಪ್ರಸಂಗ : ರಾಜಾ ಹರಿಶ್ಚಂದ್ರ

Advertisement
Advertisement

(ವಾಗ್ದಾನದಂತೆ ವಿಶ್ವಾಮಿತ್ರ ಮಹರ್ಷಿಗೆ ಸಲ್ಲಬೇಕಾದ ಹೊನ್ನನ್ನು ಪಾವತಿಸಲು ತೊಂದರೆಯಾದಾಗ, ಕೊನೆಗೆ ತನ್ನನ್ನು ತಾನು ‘ವೀರಬಾಹುಕ’ನಿಗೆ ಮಾರುವ ಸಂದರ್ಭ)

“ಮಹನೀಯ…. ಸ್ಮಶಾನದ ಕಾವಲುಗಾರ ನೀನು. ಒಬ್ಬ ಮನಷ್ಯನು ಹುಟ್ಟಿ ಸಾಯುವಲ್ಲಿಯ ವರೆಗೆ ಹಲವಾರು ಕ್ಷೇತ್ರಗಳಲ್ಲಿ ದುಡಿದು ಅನುಭವಿಸಿಕೊಳ್ಳಬೇಕು ಎಂಬ ಹಿರಿಯರ ಮಾತು ಮಿಕ್ಕವರಿಗೆ ಸಿಕ್ಕಲಿಲ್ಲವೋ, ದಕ್ಕಲಿಲ್ಲವೋ, ಆದರೆ ನನಗೆ ಮಾತ್ರ ಸಿಕ್ಕಿದೆ. ಅದನ್ನು ದಕ್ಕಿಸಿಕೊಳ್ಳುವ ಯತ್ನದಲ್ಲಿ ನಾನಿದ್ದೇನೆ. ಸುಡುಗಾಡಿನಲ್ಲಿ ನಾವು ಕಲಿಯಬೇಕಾದ ಅಂಶ ಬೇಕಾದಷ್ಟಿದೆ. ಬದುಕಿದ್ದರೆ ತಾನೆ ‘ನಾನು’, ‘ನನ್ನದು’.. ಆಮೇಲೆ ಅದಕ್ಕೆ ಸಂಬಂಧಿಸಿದಂತಹ ಇತರ ವಿಭಕ್ತಿಗಳ ಸಂಬಂಧ. ಹೇಳಿಕೇಳಿ ನಮ್ಮ ಪೌರಾಣಿಕರು ಭಾವುಕತೆಯಲ್ಲಿ ಸತ್ಯಸ್ವರೂಪನಾದ ಶಿವನ ಆಸ್ಥಾನವೇ ‘ಸ್ಮಶಾನ’ ಅಂತ ಕಲ್ಪಿಸಿದರು. ಎಲ್ಲಿ ಭೌತಿಕವಾದುದೆಲ್ಲಾ ಸ್ಥೂಲವಾಗಿ ಸುಟ್ಟು ಬೂದಿಯಾಗುತ್ತಾ ಇದೆಯೋ ಆ ಸ್ಥಾನವೇ ಶಿವನ ಸ್ಥಾನ ಎಂಬುದಕ್ಕೊಂದು ಸಂಕೇತ.

ಆಯುಷ್ಯದಲ್ಲಿ ಬಹುಭಾಗವನ್ನು ನಾನು ಸಾಗಿ ಬಂದಿದ್ದೇನೆ. ಆದ್ದರಿಂದ ನಿನ್ನ ಆಣತಿಯಂತೆ, ಕಾವಲುಗಾರನಾಗಿದ್ದು ಹೆಣ ಸುಡಬೇಕಾದರೆ ಒಂದು ಹಣದಂತೆ ದೊರಕಿಸು. ನಿನ್ನ ಋಣದಿಂದ ಮುಕ್ತವಾಗುವುದಕ್ಕೆ ನಾನು ಪ್ರಯತ್ನಿಸುತ್ತೇನೆ. ಆದರೆ ಒಂದಿದೆ, ‘ನನ್ನನ್ನೇ ನಾನು ವಿಕ್ರಯಿಸಿಕೊಳ್ಳುವಾಗ ನನಗಿಷ್ಟು ಮೌಲ್ಯ ಅಂತ ಹೇಳಕೂಡದು’. ಯಾವನೂ ತನ್ನ ಬಗ್ಗೆ ಮೌಲ್ಯವನ್ನು ಕಲ್ಪಿಸಿಕೊಳ್ಳಕೂಡದು. ನಮ್ಮ ಬಗ್ಗೆ ನಾವೇ ಮೌಲ್ಯವನ್ನು ಕಲ್ಪಿಸುತ್ತೇವೆಂದಾದರೆ ಸ್ವಾಭಾವಿಕವಾಗಿ ಮಿಕ್ಕವರಿಗೆ ನಾವು ಕಲ್ಪಿಸುವ ಮೌಲ್ಯಕ್ಕಿಂತ ಸ್ವಲ್ಪ ಅಧಿಕವೇ ಆದ ‘ಸ್ವಾರ್ಥ’ ಆಗಿ ಬಿಡುತ್ತದೆ. ಮನುಷ್ಯ ಸಹಜವದು.

ಆದರೆ ನಾನು ನಿನ್ನ ಭೋಗಕ್ಕಾಗಿಯೋ, ಸುಖಕ್ಕಾಗಿಯೋ ವಿಕ್ರಯಿಸಿಕೊಳ್ಳುತ್ತಾ ಇಲ್ಲ. ಪರಮ ಋಷಿ, ಬ್ರಹ್ಮರ್ಷಿ, ನನ್ನ ಪಿತೃಗಳನ್ನು ಉದ್ಧಾರ ಮಾಡಿದ ನನ್ನ ಆತ್ಯಂತಿಕ ಆಚಾರ್ಯಸ್ಥಾನದಲ್ಲಿದ್ದ ವಿಶ್ವಾಮಿತ್ರರು. ಮೊದಲ ವಾಗ್ದಾನದಂತೆ ಅವರ ಋಣದಿಂದ ನಾನು ಮುಕ್ತನಾಗಬೇಕಾದರೆ ಆನೆಯ ಮೇಲೆ ಕಟ್ಟಾಳುವಾದ ಒಬ್ಬನು ನಿಂತು ಕೈಯಲ್ಲಿ ಹಿಡಿದ ಕವಡೆಯನ್ನು ಎತ್ರರಕ್ಕೆ ಹಾರಿಸಿದರೆ ಅದು ಎಷ್ಟು ಔನ್ನತ್ಯವನ್ನು ತೋರಿಸುತ್ತದೋ ಅಷ್ಟು ಎತ್ತರದ ಹೊನ್ನ ರಾಶಿಯನ್ನು ಕೊಡಬೇಕಾಗುತ್ತದೆ. ನಾನು ಹೊನ್ನನ್ನು ಕೊಟ್ಟ ಬಳಿಕ ‘ನಾನು ಸಾಲ ನಿವೃತ್ತಿ ಹೊಂದಿದ್ದೇನೆ’ ಅಂತ ಅವರು ಹೇಳಿದರೆ ಸಾಕು. ಯಾಕೆಂದರೆ ನಿನ್ನ ಉದ್ಯೋಗ ಅಥವಾ ನಿನ್ನದ್ದಾದ ವ್ಯಕ್ತಿತ್ವ ಉಪಯೋಗಿಸಿ, ಕೌಶಿಕರಲ್ಲಿ ನೀನು ಮೌಲ್ಯವನ್ನು ಕಡಿಮೆ ಮಾಡಿಸಿಕೊಳ್ಳುತ್ತಿ ಅಂತಾದರೆ ಅದು ನಿನಗಿದ್ದ ಲಾಭ. ನಾನು ಆ ಲಾಭದಲ್ಲಿ ಕೈ ನೀಡಲಾರೆ…”

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

4 minutes ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

3 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

3 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

3 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಮಹಿಳಾ ಗ್ರಾಮಸಭೆ | ರಾಷ್ಟೀಯ ಕೃಷಿ ವಿಕಾಸ ಯೋಜನೆ ಬಗ್ಗೆ ಮಾಹಿತಿ ನೀಡಿದ ವಿಜ್ಞಾನಿ

ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಈಚೆಗೆ…

3 hours ago