ನನ್ನ ಕಸ ನನ್ನ ಹೊಣೆ : ಜಾಗೃತಿ ಸಂದೇಶ ಸಾರಿದ 24 ಸೈಕಲಿಸ್ಟ್ ಗಳು

August 19, 2019
3:00 PM

ಮಡಿಕೇರಿ: ವಿರಾಜಪೇಟೆ ರೋಟರಿ ಕ್ಲಬ್ ವತಿಯಿಂದ ಕ್ಲಬ್ ಮಹೀಂದ್ರ ಹಾಗೂ ಕೂರ್ಗ್  ಕ್ಲೀನ್ ಸಂಘಟನೆಯ ಸಹಯೋಗದಲ್ಲಿ ಸ್ವಚ್ಛತೆಯ ಜಾಗೃತಿ ಸೈಕಲ್‍ಜಾಥಾ ಆಯೋಜಿಸಲಾಗಿತ್ತು.

ವಿರಾಜಪೇಟೆಯಿಂದ ಕರಡ ಗ್ರಾಮದವರೆಗಿನ 15 ಕಿ.ಮೀ. ಸೈಕಲ್‍ ಜಾಥಾಕ್ಕೆರೋಟರಿ ವಲಯ 6 ರ ಕಾರ್ಯದರ್ಶಿ ಅನಿಲ್ ಎಚ್.ಟಿ. ವಿರಾಜಪೇಟೆಯಲ್ಲಿ ಹಸಿರು ನಿಶಾನೆ ಮೂಲಕ ಚಾಲನೆ ನೀಡಿದರು. ಸ್ವಚ್ಛದೇಶ, ಸ್ವಚ್ಛ ಸಮಾಜದ ಯೋಜನೆ ದೇಶವ್ಯಾಪಿ ಕ್ರಾಂತಿಯಂತಾಗಿದ್ದು ವಿರಾಜಪೇಟೆ ರೋಟರಿ ಸೈಕಲ್‍ ಜಾಥಾದ ಮೂಲಕ ಈ ಸಂದೇಶನ್ನು ವಿನೂತನವಾಗಿ ಸಾರುತ್ತಿರುವುದು ಶ್ಲಾಘನೀಯ ಎಂದು ಅನಿಲ್ ಹೇಳಿದರು.

ವಿರಾಜಪೇಟೆ ರೋಟರಿಯ ಜೋನಲ್ ಲೆಫ್ಟಿನೆಂಟ್ ಡಾ.ಎಸ್.ವಿ.ನರಸಿಂಹನ್ ಮಾತನಾಡಿ, ಸ್ವಚ್ಛತೆಯ ಜಾಗೃತಿ ಪ್ರತೀಯೋರ್ವರಲ್ಲಿಯೂ ಸದಾ ಕಾಲ ಇರುವಂತಾಗಬೇಕು. ಜೀವನಪೂರ್ತಿ ಸಾಮಾಜಿಕ ಹೊಣೆಗಾರಿಕೆಯಂತೆ ಸ್ವಚ್ಛತೆ ಬಗ್ಗೆ ತಿಳುವಳಿಕೆ ಮೂಡಬೇಕೆಂದು ಅಭಿಪ್ರಾಯಪಟ್ಟರು.

ಕೂರ್ಗ್ ಕ್ಲೀನ್ ಸಂಸ್ಥೆಯ ಬಡುವಂಡ ಅರುಣ್ ಅಪ್ಪಚ್ಚು ಮಾಹಿತಿ ನೀಡಿ, 24 ಸೈಕಲಿಸ್ಟ್ ಗಳು ವಿರಾಜಪೇಟೆಯಿಂದ ಕದನೂರು ಗ್ರಾಮಕ್ಕಾಗಿ ಕ್ಲಬ್ ಮಹೀಂದ್ರದವರೆಗೆ ಸೈಕಲಿಂಗ್‍ ಜಾಥಾ ನಡೆಸುತ್ತಿದ್ದು, ಜನರಲ್ಲಿ ಸ್ವಚ್ಛತೆಯ ಮಹತ್ವದ ಬಗ್ಗೆ ಸೈಕಲ್‍ಜಾಥಾದ ಮೂಲಕ ತಿಳುವಳಿಕೆ ಮೂಡಿಸುವ ಪ್ರಯತ್ನ ಇದಾಗಿದೆ. ಈಗಾಗಲೇ ಹಲವಾರು ಕಡೆ ಕೂರ್ಗ್ ಕ್ಲೀನ್ ಸಂಘಟನೆಯಿಂದ ಸ್ವಚ್ಛತಾ ಜಾಗೃತಿ ಅಭಿಯಾನಗಳು ನಡೆದಿದೆ. ನನ್ನ ಕಸ – ನನ್ನ ಹೊಣೆ ಎಂಬುದು ಪ್ರತಿಯೋರ್ವನ ಮನಸ್ಸಿನಲ್ಲಿ ತಾನಾಗಿಯೇ ಮೂಡಿದರೆ ಸ್ವಚ್ಛ ಸಮಾಜದ ಪರಿಕಲ್ಪನೆ ಸುಲಭವಾಗಿ ಈಡೇರುತ್ತದೆ ಎಂದರಲ್ಲದೇ, ಅನೇಕರು ಕೊಡಗಿನ ನದಿಗಳಿಗೆ ಮನೆಯ ತ್ಯಾಜ್ಯ ತಂದು ಸುರಿದು ಪವಿತ್ರ ನದಿಯನ್ನು ಮಲಿನಗೊಳಿಸುತ್ತಿದ್ದಾರೆ. ಈ ಮಾಲಿನ್ಯ ನಿಲ್ಲಬೇಕುಎಂದು ಮನವಿ ಮಾಡಿದರು.

ಕ್ಲೀನ್ ಕೂರ್ಗ್ ಸಂಘಟನೆಯ ಸಂಚಾಲಕ ಪ್ರಶಾಂತ್ , ವಿರಾಜಪೇಟೆ ರೋಟರಿ ಕ್ಲಬ್‍ಅಧ್ಯಕ್ಷ ಕೆ,ಎಚ್, ಆದಿತ್ಯ , ಕ್ಲಬ್ ಮಹೀಂದ್ರ ರೆಸಾರ್ಟ್  ಮ್ಯಾನೇಜರ್ ಜಿಷ್ಣುಉಣ್ಣಿ ಮಾತನಾಡಿದರು. ವಿರಾಜಪೇಟೆರೋಟರಿ ಕಾಯದರ್ಶಿ ಭರತ್‍ರಾಮ್‍ರೈ , ರೋಟರಿ ಸದಸ್ಯರು ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ
July 30, 2026
8:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ
July 30, 2026
4:18 PM
by: ಸಾಯಿಶೇಖರ್ ಕರಿಕಳ
ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ
July 30, 2026
7:39 AM
by: ದ ರೂರಲ್ ಮಿರರ್.ಕಾಂ
ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ
July 30, 2026
7:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror