Advertisement
ಸುದ್ದಿಗಳು

ನನ್ನ ಕಸ ನನ್ನ ಹೊಣೆ : ಜಾಗೃತಿ ಸಂದೇಶ ಸಾರಿದ 24 ಸೈಕಲಿಸ್ಟ್ ಗಳು

Share

ಮಡಿಕೇರಿ: ವಿರಾಜಪೇಟೆ ರೋಟರಿ ಕ್ಲಬ್ ವತಿಯಿಂದ ಕ್ಲಬ್ ಮಹೀಂದ್ರ ಹಾಗೂ ಕೂರ್ಗ್  ಕ್ಲೀನ್ ಸಂಘಟನೆಯ ಸಹಯೋಗದಲ್ಲಿ ಸ್ವಚ್ಛತೆಯ ಜಾಗೃತಿ ಸೈಕಲ್‍ಜಾಥಾ ಆಯೋಜಿಸಲಾಗಿತ್ತು.

Advertisement
Advertisement

ವಿರಾಜಪೇಟೆಯಿಂದ ಕರಡ ಗ್ರಾಮದವರೆಗಿನ 15 ಕಿ.ಮೀ. ಸೈಕಲ್‍ ಜಾಥಾಕ್ಕೆರೋಟರಿ ವಲಯ 6 ರ ಕಾರ್ಯದರ್ಶಿ ಅನಿಲ್ ಎಚ್.ಟಿ. ವಿರಾಜಪೇಟೆಯಲ್ಲಿ ಹಸಿರು ನಿಶಾನೆ ಮೂಲಕ ಚಾಲನೆ ನೀಡಿದರು. ಸ್ವಚ್ಛದೇಶ, ಸ್ವಚ್ಛ ಸಮಾಜದ ಯೋಜನೆ ದೇಶವ್ಯಾಪಿ ಕ್ರಾಂತಿಯಂತಾಗಿದ್ದು ವಿರಾಜಪೇಟೆ ರೋಟರಿ ಸೈಕಲ್‍ ಜಾಥಾದ ಮೂಲಕ ಈ ಸಂದೇಶನ್ನು ವಿನೂತನವಾಗಿ ಸಾರುತ್ತಿರುವುದು ಶ್ಲಾಘನೀಯ ಎಂದು ಅನಿಲ್ ಹೇಳಿದರು.

ವಿರಾಜಪೇಟೆ ರೋಟರಿಯ ಜೋನಲ್ ಲೆಫ್ಟಿನೆಂಟ್ ಡಾ.ಎಸ್.ವಿ.ನರಸಿಂಹನ್ ಮಾತನಾಡಿ, ಸ್ವಚ್ಛತೆಯ ಜಾಗೃತಿ ಪ್ರತೀಯೋರ್ವರಲ್ಲಿಯೂ ಸದಾ ಕಾಲ ಇರುವಂತಾಗಬೇಕು. ಜೀವನಪೂರ್ತಿ ಸಾಮಾಜಿಕ ಹೊಣೆಗಾರಿಕೆಯಂತೆ ಸ್ವಚ್ಛತೆ ಬಗ್ಗೆ ತಿಳುವಳಿಕೆ ಮೂಡಬೇಕೆಂದು ಅಭಿಪ್ರಾಯಪಟ್ಟರು.

ಕೂರ್ಗ್ ಕ್ಲೀನ್ ಸಂಸ್ಥೆಯ ಬಡುವಂಡ ಅರುಣ್ ಅಪ್ಪಚ್ಚು ಮಾಹಿತಿ ನೀಡಿ, 24 ಸೈಕಲಿಸ್ಟ್ ಗಳು ವಿರಾಜಪೇಟೆಯಿಂದ ಕದನೂರು ಗ್ರಾಮಕ್ಕಾಗಿ ಕ್ಲಬ್ ಮಹೀಂದ್ರದವರೆಗೆ ಸೈಕಲಿಂಗ್‍ ಜಾಥಾ ನಡೆಸುತ್ತಿದ್ದು, ಜನರಲ್ಲಿ ಸ್ವಚ್ಛತೆಯ ಮಹತ್ವದ ಬಗ್ಗೆ ಸೈಕಲ್‍ಜಾಥಾದ ಮೂಲಕ ತಿಳುವಳಿಕೆ ಮೂಡಿಸುವ ಪ್ರಯತ್ನ ಇದಾಗಿದೆ. ಈಗಾಗಲೇ ಹಲವಾರು ಕಡೆ ಕೂರ್ಗ್ ಕ್ಲೀನ್ ಸಂಘಟನೆಯಿಂದ ಸ್ವಚ್ಛತಾ ಜಾಗೃತಿ ಅಭಿಯಾನಗಳು ನಡೆದಿದೆ. ನನ್ನ ಕಸ – ನನ್ನ ಹೊಣೆ ಎಂಬುದು ಪ್ರತಿಯೋರ್ವನ ಮನಸ್ಸಿನಲ್ಲಿ ತಾನಾಗಿಯೇ ಮೂಡಿದರೆ ಸ್ವಚ್ಛ ಸಮಾಜದ ಪರಿಕಲ್ಪನೆ ಸುಲಭವಾಗಿ ಈಡೇರುತ್ತದೆ ಎಂದರಲ್ಲದೇ, ಅನೇಕರು ಕೊಡಗಿನ ನದಿಗಳಿಗೆ ಮನೆಯ ತ್ಯಾಜ್ಯ ತಂದು ಸುರಿದು ಪವಿತ್ರ ನದಿಯನ್ನು ಮಲಿನಗೊಳಿಸುತ್ತಿದ್ದಾರೆ. ಈ ಮಾಲಿನ್ಯ ನಿಲ್ಲಬೇಕುಎಂದು ಮನವಿ ಮಾಡಿದರು.

ಕ್ಲೀನ್ ಕೂರ್ಗ್ ಸಂಘಟನೆಯ ಸಂಚಾಲಕ ಪ್ರಶಾಂತ್ , ವಿರಾಜಪೇಟೆ ರೋಟರಿ ಕ್ಲಬ್‍ಅಧ್ಯಕ್ಷ ಕೆ,ಎಚ್, ಆದಿತ್ಯ , ಕ್ಲಬ್ ಮಹೀಂದ್ರ ರೆಸಾರ್ಟ್  ಮ್ಯಾನೇಜರ್ ಜಿಷ್ಣುಉಣ್ಣಿ ಮಾತನಾಡಿದರು. ವಿರಾಜಪೇಟೆರೋಟರಿ ಕಾಯದರ್ಶಿ ಭರತ್‍ರಾಮ್‍ರೈ , ರೋಟರಿ ಸದಸ್ಯರು ಹಾಜರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

21 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

21 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

2 days ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago