Advertisement
ಸುದ್ದಿಗಳು

ನನ್ನ ಕಸ ನನ್ನ ಹೊಣೆ : ಜಾಗೃತಿ ಸಂದೇಶ ಸಾರಿದ 24 ಸೈಕಲಿಸ್ಟ್ ಗಳು

Share

ಮಡಿಕೇರಿ: ವಿರಾಜಪೇಟೆ ರೋಟರಿ ಕ್ಲಬ್ ವತಿಯಿಂದ ಕ್ಲಬ್ ಮಹೀಂದ್ರ ಹಾಗೂ ಕೂರ್ಗ್  ಕ್ಲೀನ್ ಸಂಘಟನೆಯ ಸಹಯೋಗದಲ್ಲಿ ಸ್ವಚ್ಛತೆಯ ಜಾಗೃತಿ ಸೈಕಲ್‍ಜಾಥಾ ಆಯೋಜಿಸಲಾಗಿತ್ತು.

ವಿರಾಜಪೇಟೆಯಿಂದ ಕರಡ ಗ್ರಾಮದವರೆಗಿನ 15 ಕಿ.ಮೀ. ಸೈಕಲ್‍ ಜಾಥಾಕ್ಕೆರೋಟರಿ ವಲಯ 6 ರ ಕಾರ್ಯದರ್ಶಿ ಅನಿಲ್ ಎಚ್.ಟಿ. ವಿರಾಜಪೇಟೆಯಲ್ಲಿ ಹಸಿರು ನಿಶಾನೆ ಮೂಲಕ ಚಾಲನೆ ನೀಡಿದರು. ಸ್ವಚ್ಛದೇಶ, ಸ್ವಚ್ಛ ಸಮಾಜದ ಯೋಜನೆ ದೇಶವ್ಯಾಪಿ ಕ್ರಾಂತಿಯಂತಾಗಿದ್ದು ವಿರಾಜಪೇಟೆ ರೋಟರಿ ಸೈಕಲ್‍ ಜಾಥಾದ ಮೂಲಕ ಈ ಸಂದೇಶನ್ನು ವಿನೂತನವಾಗಿ ಸಾರುತ್ತಿರುವುದು ಶ್ಲಾಘನೀಯ ಎಂದು ಅನಿಲ್ ಹೇಳಿದರು.

ವಿರಾಜಪೇಟೆ ರೋಟರಿಯ ಜೋನಲ್ ಲೆಫ್ಟಿನೆಂಟ್ ಡಾ.ಎಸ್.ವಿ.ನರಸಿಂಹನ್ ಮಾತನಾಡಿ, ಸ್ವಚ್ಛತೆಯ ಜಾಗೃತಿ ಪ್ರತೀಯೋರ್ವರಲ್ಲಿಯೂ ಸದಾ ಕಾಲ ಇರುವಂತಾಗಬೇಕು. ಜೀವನಪೂರ್ತಿ ಸಾಮಾಜಿಕ ಹೊಣೆಗಾರಿಕೆಯಂತೆ ಸ್ವಚ್ಛತೆ ಬಗ್ಗೆ ತಿಳುವಳಿಕೆ ಮೂಡಬೇಕೆಂದು ಅಭಿಪ್ರಾಯಪಟ್ಟರು.

ಕೂರ್ಗ್ ಕ್ಲೀನ್ ಸಂಸ್ಥೆಯ ಬಡುವಂಡ ಅರುಣ್ ಅಪ್ಪಚ್ಚು ಮಾಹಿತಿ ನೀಡಿ, 24 ಸೈಕಲಿಸ್ಟ್ ಗಳು ವಿರಾಜಪೇಟೆಯಿಂದ ಕದನೂರು ಗ್ರಾಮಕ್ಕಾಗಿ ಕ್ಲಬ್ ಮಹೀಂದ್ರದವರೆಗೆ ಸೈಕಲಿಂಗ್‍ ಜಾಥಾ ನಡೆಸುತ್ತಿದ್ದು, ಜನರಲ್ಲಿ ಸ್ವಚ್ಛತೆಯ ಮಹತ್ವದ ಬಗ್ಗೆ ಸೈಕಲ್‍ಜಾಥಾದ ಮೂಲಕ ತಿಳುವಳಿಕೆ ಮೂಡಿಸುವ ಪ್ರಯತ್ನ ಇದಾಗಿದೆ. ಈಗಾಗಲೇ ಹಲವಾರು ಕಡೆ ಕೂರ್ಗ್ ಕ್ಲೀನ್ ಸಂಘಟನೆಯಿಂದ ಸ್ವಚ್ಛತಾ ಜಾಗೃತಿ ಅಭಿಯಾನಗಳು ನಡೆದಿದೆ. ನನ್ನ ಕಸ – ನನ್ನ ಹೊಣೆ ಎಂಬುದು ಪ್ರತಿಯೋರ್ವನ ಮನಸ್ಸಿನಲ್ಲಿ ತಾನಾಗಿಯೇ ಮೂಡಿದರೆ ಸ್ವಚ್ಛ ಸಮಾಜದ ಪರಿಕಲ್ಪನೆ ಸುಲಭವಾಗಿ ಈಡೇರುತ್ತದೆ ಎಂದರಲ್ಲದೇ, ಅನೇಕರು ಕೊಡಗಿನ ನದಿಗಳಿಗೆ ಮನೆಯ ತ್ಯಾಜ್ಯ ತಂದು ಸುರಿದು ಪವಿತ್ರ ನದಿಯನ್ನು ಮಲಿನಗೊಳಿಸುತ್ತಿದ್ದಾರೆ. ಈ ಮಾಲಿನ್ಯ ನಿಲ್ಲಬೇಕುಎಂದು ಮನವಿ ಮಾಡಿದರು.

ಕ್ಲೀನ್ ಕೂರ್ಗ್ ಸಂಘಟನೆಯ ಸಂಚಾಲಕ ಪ್ರಶಾಂತ್ , ವಿರಾಜಪೇಟೆ ರೋಟರಿ ಕ್ಲಬ್‍ಅಧ್ಯಕ್ಷ ಕೆ,ಎಚ್, ಆದಿತ್ಯ , ಕ್ಲಬ್ ಮಹೀಂದ್ರ ರೆಸಾರ್ಟ್  ಮ್ಯಾನೇಜರ್ ಜಿಷ್ಣುಉಣ್ಣಿ ಮಾತನಾಡಿದರು. ವಿರಾಜಪೇಟೆರೋಟರಿ ಕಾಯದರ್ಶಿ ಭರತ್‍ರಾಮ್‍ರೈ , ರೋಟರಿ ಸದಸ್ಯರು ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago