ಸುಳ್ಯ:ಸುಳ್ಯ ತಾಲೂಕು ಟೂರಿಸ್ಟ್ ಕಾರು, ವ್ಯಾನ್ ಚಾಲಕ -ಮಾಲಕರ ಸಂಘವು ಘೋಷಿಸಿದ್ದ ನ.ಪಂ.ಚುನಾವಣಾ ಬಹಿಷ್ಕಾರವನ್ನು ಹಿಂಪಡೆಯಲಾಗಿದೆ.
ನ.ಪಂ.ಆಡಳಿತಾಧಿಕಾರಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮತ್ತು ನಗರ ಪಂಚಾಯತ್ ಮುಖ್ಯಾಧಿಕಾರಿ ಶ್ರೀಧರ್ ಅವರು ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಮಾತುಕತೆಯ ಹಿನ್ನಲೆಯಲ್ಲಿ ಬಹಿಷ್ಕಾರವನ್ನು ಹಿಂಪಡೆಯಲಾಗಿದೆ. ಬಳಿಕ ಇವರು ಅಳವಡಿಸಿದ್ದ ಚುನಾವಣಾ ಬಹಿಷ್ಕಾರ ಬ್ಯಾನರ್ ತೆರವು ಮಾಡಲಾಯಿತು. ಟೂರಿಸ್ಟ್ ಕಾರು, ವ್ಯಾನ್ ಗಳಿಗೆ ತಂಗಲು ಸುಸಜ್ಜಿತ ನಿಲ್ದಾಣ ನಿರ್ಮಾಣ ಮಾಡದೇ ಇರುವುದನ್ನು ಪ್ರತಿಭಟಿಸಿ ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಲಾಗಿತ್ತು. ತಾತ್ಕಾಲಿಕವಾಗಿ ಈಗ ಇರುವ ನಿಲ್ದಾಣದಲ್ಲೇ ನಾಮ ಫಲಕ ಅಳವಡಿಸಿ ಟೂರಿಸ್ಟ್ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲು ತಹಶೀಲ್ದಾರ್ ಸೂಚನೆ ನೀಡಿದರು. ಮುಂದೆ ಸರಕಾರಿ ಜಮೀನು ಲಭಿಸಿದಲ್ಲಿ ಬೇರೆ ಕಡೆ ಸುಸಜ್ಜಿತ ನಿಲ್ದಾಣ ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು. ಈ ಹಿನ್ನಲೆಯಲ್ಲಿ ಚುನಾವಣಾ ಬಹಿಷ್ಕಾರ ಹಿಂಪಡೆಯಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…