ಸುಳ್ಯ:ಸುಳ್ಯ ತಾಲೂಕು ಟೂರಿಸ್ಟ್ ಕಾರು, ವ್ಯಾನ್ ಚಾಲಕ -ಮಾಲಕರ ಸಂಘವು ಘೋಷಿಸಿದ್ದ ನ.ಪಂ.ಚುನಾವಣಾ ಬಹಿಷ್ಕಾರವನ್ನು ಹಿಂಪಡೆಯಲಾಗಿದೆ.
ನ.ಪಂ.ಆಡಳಿತಾಧಿಕಾರಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮತ್ತು ನಗರ ಪಂಚಾಯತ್ ಮುಖ್ಯಾಧಿಕಾರಿ ಶ್ರೀಧರ್ ಅವರು ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಮಾತುಕತೆಯ ಹಿನ್ನಲೆಯಲ್ಲಿ ಬಹಿಷ್ಕಾರವನ್ನು ಹಿಂಪಡೆಯಲಾಗಿದೆ. ಬಳಿಕ ಇವರು ಅಳವಡಿಸಿದ್ದ ಚುನಾವಣಾ ಬಹಿಷ್ಕಾರ ಬ್ಯಾನರ್ ತೆರವು ಮಾಡಲಾಯಿತು. ಟೂರಿಸ್ಟ್ ಕಾರು, ವ್ಯಾನ್ ಗಳಿಗೆ ತಂಗಲು ಸುಸಜ್ಜಿತ ನಿಲ್ದಾಣ ನಿರ್ಮಾಣ ಮಾಡದೇ ಇರುವುದನ್ನು ಪ್ರತಿಭಟಿಸಿ ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಲಾಗಿತ್ತು. ತಾತ್ಕಾಲಿಕವಾಗಿ ಈಗ ಇರುವ ನಿಲ್ದಾಣದಲ್ಲೇ ನಾಮ ಫಲಕ ಅಳವಡಿಸಿ ಟೂರಿಸ್ಟ್ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲು ತಹಶೀಲ್ದಾರ್ ಸೂಚನೆ ನೀಡಿದರು. ಮುಂದೆ ಸರಕಾರಿ ಜಮೀನು ಲಭಿಸಿದಲ್ಲಿ ಬೇರೆ ಕಡೆ ಸುಸಜ್ಜಿತ ನಿಲ್ದಾಣ ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು. ಈ ಹಿನ್ನಲೆಯಲ್ಲಿ ಚುನಾವಣಾ ಬಹಿಷ್ಕಾರ ಹಿಂಪಡೆಯಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…
ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…