ಸುಳ್ಯ:ಸುಳ್ಯ ತಾಲೂಕು ಟೂರಿಸ್ಟ್ ಕಾರು, ವ್ಯಾನ್ ಚಾಲಕ -ಮಾಲಕರ ಸಂಘವು ಘೋಷಿಸಿದ್ದ ನ.ಪಂ.ಚುನಾವಣಾ ಬಹಿಷ್ಕಾರವನ್ನು ಹಿಂಪಡೆಯಲಾಗಿದೆ.
ನ.ಪಂ.ಆಡಳಿತಾಧಿಕಾರಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮತ್ತು ನಗರ ಪಂಚಾಯತ್ ಮುಖ್ಯಾಧಿಕಾರಿ ಶ್ರೀಧರ್ ಅವರು ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಮಾತುಕತೆಯ ಹಿನ್ನಲೆಯಲ್ಲಿ ಬಹಿಷ್ಕಾರವನ್ನು ಹಿಂಪಡೆಯಲಾಗಿದೆ. ಬಳಿಕ ಇವರು ಅಳವಡಿಸಿದ್ದ ಚುನಾವಣಾ ಬಹಿಷ್ಕಾರ ಬ್ಯಾನರ್ ತೆರವು ಮಾಡಲಾಯಿತು. ಟೂರಿಸ್ಟ್ ಕಾರು, ವ್ಯಾನ್ ಗಳಿಗೆ ತಂಗಲು ಸುಸಜ್ಜಿತ ನಿಲ್ದಾಣ ನಿರ್ಮಾಣ ಮಾಡದೇ ಇರುವುದನ್ನು ಪ್ರತಿಭಟಿಸಿ ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಲಾಗಿತ್ತು. ತಾತ್ಕಾಲಿಕವಾಗಿ ಈಗ ಇರುವ ನಿಲ್ದಾಣದಲ್ಲೇ ನಾಮ ಫಲಕ ಅಳವಡಿಸಿ ಟೂರಿಸ್ಟ್ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲು ತಹಶೀಲ್ದಾರ್ ಸೂಚನೆ ನೀಡಿದರು. ಮುಂದೆ ಸರಕಾರಿ ಜಮೀನು ಲಭಿಸಿದಲ್ಲಿ ಬೇರೆ ಕಡೆ ಸುಸಜ್ಜಿತ ನಿಲ್ದಾಣ ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು. ಈ ಹಿನ್ನಲೆಯಲ್ಲಿ ಚುನಾವಣಾ ಬಹಿಷ್ಕಾರ ಹಿಂಪಡೆಯಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…