ಸುಳ್ಯ:ಸುಳ್ಯ ತಾಲೂಕು ಟೂರಿಸ್ಟ್ ಕಾರು, ವ್ಯಾನ್ ಚಾಲಕ -ಮಾಲಕರ ಸಂಘವು ಘೋಷಿಸಿದ್ದ ನ.ಪಂ.ಚುನಾವಣಾ ಬಹಿಷ್ಕಾರವನ್ನು ಹಿಂಪಡೆಯಲಾಗಿದೆ.
ನ.ಪಂ.ಆಡಳಿತಾಧಿಕಾರಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮತ್ತು ನಗರ ಪಂಚಾಯತ್ ಮುಖ್ಯಾಧಿಕಾರಿ ಶ್ರೀಧರ್ ಅವರು ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಮಾತುಕತೆಯ ಹಿನ್ನಲೆಯಲ್ಲಿ ಬಹಿಷ್ಕಾರವನ್ನು ಹಿಂಪಡೆಯಲಾಗಿದೆ. ಬಳಿಕ ಇವರು ಅಳವಡಿಸಿದ್ದ ಚುನಾವಣಾ ಬಹಿಷ್ಕಾರ ಬ್ಯಾನರ್ ತೆರವು ಮಾಡಲಾಯಿತು. ಟೂರಿಸ್ಟ್ ಕಾರು, ವ್ಯಾನ್ ಗಳಿಗೆ ತಂಗಲು ಸುಸಜ್ಜಿತ ನಿಲ್ದಾಣ ನಿರ್ಮಾಣ ಮಾಡದೇ ಇರುವುದನ್ನು ಪ್ರತಿಭಟಿಸಿ ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಲಾಗಿತ್ತು. ತಾತ್ಕಾಲಿಕವಾಗಿ ಈಗ ಇರುವ ನಿಲ್ದಾಣದಲ್ಲೇ ನಾಮ ಫಲಕ ಅಳವಡಿಸಿ ಟೂರಿಸ್ಟ್ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲು ತಹಶೀಲ್ದಾರ್ ಸೂಚನೆ ನೀಡಿದರು. ಮುಂದೆ ಸರಕಾರಿ ಜಮೀನು ಲಭಿಸಿದಲ್ಲಿ ಬೇರೆ ಕಡೆ ಸುಸಜ್ಜಿತ ನಿಲ್ದಾಣ ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು. ಈ ಹಿನ್ನಲೆಯಲ್ಲಿ ಚುನಾವಣಾ ಬಹಿಷ್ಕಾರ ಹಿಂಪಡೆಯಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…