ಸುಳ್ಯ:ಸುಳ್ಯ ತಾಲೂಕು ಟೂರಿಸ್ಟ್ ಕಾರು, ವ್ಯಾನ್ ಚಾಲಕ -ಮಾಲಕರ ಸಂಘವು ಘೋಷಿಸಿದ್ದ ನ.ಪಂ.ಚುನಾವಣಾ ಬಹಿಷ್ಕಾರವನ್ನು ಹಿಂಪಡೆಯಲಾಗಿದೆ.
ನ.ಪಂ.ಆಡಳಿತಾಧಿಕಾರಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮತ್ತು ನಗರ ಪಂಚಾಯತ್ ಮುಖ್ಯಾಧಿಕಾರಿ ಶ್ರೀಧರ್ ಅವರು ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಮಾತುಕತೆಯ ಹಿನ್ನಲೆಯಲ್ಲಿ ಬಹಿಷ್ಕಾರವನ್ನು ಹಿಂಪಡೆಯಲಾಗಿದೆ. ಬಳಿಕ ಇವರು ಅಳವಡಿಸಿದ್ದ ಚುನಾವಣಾ ಬಹಿಷ್ಕಾರ ಬ್ಯಾನರ್ ತೆರವು ಮಾಡಲಾಯಿತು. ಟೂರಿಸ್ಟ್ ಕಾರು, ವ್ಯಾನ್ ಗಳಿಗೆ ತಂಗಲು ಸುಸಜ್ಜಿತ ನಿಲ್ದಾಣ ನಿರ್ಮಾಣ ಮಾಡದೇ ಇರುವುದನ್ನು ಪ್ರತಿಭಟಿಸಿ ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಲಾಗಿತ್ತು. ತಾತ್ಕಾಲಿಕವಾಗಿ ಈಗ ಇರುವ ನಿಲ್ದಾಣದಲ್ಲೇ ನಾಮ ಫಲಕ ಅಳವಡಿಸಿ ಟೂರಿಸ್ಟ್ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲು ತಹಶೀಲ್ದಾರ್ ಸೂಚನೆ ನೀಡಿದರು. ಮುಂದೆ ಸರಕಾರಿ ಜಮೀನು ಲಭಿಸಿದಲ್ಲಿ ಬೇರೆ ಕಡೆ ಸುಸಜ್ಜಿತ ನಿಲ್ದಾಣ ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು. ಈ ಹಿನ್ನಲೆಯಲ್ಲಿ ಚುನಾವಣಾ ಬಹಿಷ್ಕಾರ ಹಿಂಪಡೆಯಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…